ADVERTISEMENT

ಕೆಪಿಎಸ್‌ಸಿ ಸದಸ್ಯರಾಗಿ ಕಾವಲ್ಲಮ್ಮ ನೇಮಕ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2024, 15:32 IST
Last Updated 6 ಮಾರ್ಚ್ 2024, 15:32 IST
   

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರಾಗಿ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನ ಇತಿಹಾಸ ವಿಭಾಗದ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕಿಯೂ, ಪ್ರಾಧ್ಯಾಪಕಿಯೂ ಆಗಿರುವ ಆರ್‌. ಕಾವಲ್ಲಮ್ಮ ಅವರನ್ನು ನೇಮಿಸಿ ಅಧಿಸೂಚನೆ ಹೊರಡಿಸಲಾಗಿದೆ.

ತುಮಕೂರು ಜಿಲ್ಲೆ ಮಧುಗಿರಿಯವರಾದ ಕಾವಲ್ಲಮ್ಮ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ, ಎಂ.ಫಿಲ್‌ ಮತ್ತು ಪಿಎಚ್‌.ಡಿ ಪಡೆದಿದ್ದಾರೆ. ಅವರನ್ನು ಅಧಿಕಾರಿ ವಿಭಾಗದಲ್ಲಿ ಖಾಲಿ ಇರುವ ಸದಸ್ಯ ಸ್ಥಾನಕ್ಕೆ ನೇಮಿಸಲಾಗಿದೆ.

ಕೆಪಿಎಸ್‌ಸಿಗೆ ಅಧ್ಯಕ್ಷರು ಮತ್ತು 15 ಸದಸ್ಯರ ನೇಮಕಕ್ಕೆ ಅವಕಾಶವಿದೆ. ಸದ್ಯ ಅಧ್ಯಕ್ಷರು ಮತ್ತು 10 ಸದಸ್ಯರಿದ್ದಾರೆ. ಕಾವಲ್ಲಮ್ಮ ಅವರ ನೇಮಕದ ನಂತರವೂ ನಾಲ್ಕು ಸದಸ್ಯ ಸ್ಥಾನಗಳು ಖಾಲಿ ಇವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.