ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ ಮೊದಲ ಬಾರಿಗೆ ₹10 ಲಕ್ಷ ಅಪಘಾತ ಪರಿಹಾರ ಚೆಕ್ ಅನ್ನು ಸೋಮವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್ಆರ್ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ವಿತರಿಸಿದರು.
ಪ್ರಯಾಣಿಕರಿಗೆ ಅಪಘಾತ ಪರಿಹಾರ ವಿಮೆ ₹3 ಲಕ್ಷ ಇತ್ತು. ಕಳೆದ ಜ.1ರಿಂದ ಈ ಮೊತ್ತವನ್ನು ₹10 ಲಕ್ಷಕ್ಕೆ ಏರಿಸಲಾಗಿತ್ತು. ಫೆ.4ರಂದು ಹಾಸನ ವಿಭಾಗ ಚನ್ನರಾಯಪಟ್ಟಣ ಘಟಕದ ಬಸ್ ಸಕಲೇಶಪುರ ಸಮೀಪದ ಬಾಗೆ ಎಂಬಲ್ಲಿ ಅಪಘಾತಕ್ಕೆ ಈಡಾಗಿತ್ತು. ಪ್ರಯಾಣಿಕ ಜಿ.ಎನ್. ಅಮೃತ್(34) ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಅವರ ತಂದೆಗೆ ಸೋಮವಾರ ₹ 10 ಲಕ್ಷದ ಚೆಕ್ ವಿತರಿಸಲಾಯಿತು.
ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಿರ್ದೇಶಕಿ (ಸಿಬ್ಬಂದಿ ಮತ್ತು ಜಾಗೃತೆ) ನಂದಿನಿ ದೇವಿ, ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.