ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸುವುದಾಗಿ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ ನೀಡಿದರು.
ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಕಾರ್ಯ ಮತ್ತು ನೇತೃತ್ವಕ್ಕೆ ಮೆಚ್ಚುಗೆ ಸೂಚಿಸಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂಬ ಆಶಯದೊಂದಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಿಜೆಪಿ ಜೊತೆ ಸೇರಿ ಸ್ಪರ್ಧೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ಜನರು ತಕ್ಕ ಪಾಠ ಕಲಿಸಬೇಕು. ಮೋದಿ ಅವರ ಸಾಧನೆಯನ್ನು ಮನೆ– ಮನೆಗೆ ತಲುಪಿಸೋಣ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲು ಶ್ರಮಿಸೋಣ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.