ADVERTISEMENT

ಸರ್ಕಾರ ಉರುಳಿಸುವ ಮೊದಲು ರಾಜ್ಯಕ್ಕಾದ ಅನ್ಯಾಯ ಸರಿಪಡಿಸಿ: HDKಗೆ ಸಚಿವ ಬೈರೇಗೌಡ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 14:27 IST
Last Updated 22 ಅಕ್ಟೋಬರ್ 2024, 14:27 IST
   

ಮಂಡ್ಯ: ‘ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಕಿತ್ತಾಕ್ತೀವಿ, ತಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೊರಟಿದ್ದಾರೆ. ಸರ್ಕಾರವನ್ನು ಉರುಳಿಸುವವರು ಹೇಗೆ ಪಾತಾಳಕ್ಕೆ ಹೋಗಲು ಸಾಧ್ಯ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಚ್‌ಡಿಕೆ ಹೇಳಿಕೆಗೆ ತಿರುಗೇಟು ನೀಡಿದರು. 

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, 'ಅವರು ಎಲ್ಲಿಗಾದ್ರು ಹೋಗಲಿ, ನನ್ನ ತಕಾರರು ಇಲ್ಲ. ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ನಮಗೆ ಬರಬೇಕಾದ ಅನುದಾನ ಸಿಗುತ್ತಿಲ್ಲ. ಸರ್ಕಾರ ಉರುಳಿಸುವ ಮೊದಲು ಅನ್ಯಾಯವನ್ನು ಸರಿಪಡಿಸಲಿ" ಎಂದು ಕುಟುಕಿದರು. 

‘ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ್ರೆ ಮೇಕೆದಾಟಿಗೆ ಒಂದೇ ದಿನದಲ್ಲಿ ಸಹಿ ಹಾಕಿಸುತ್ತೇನೆ ಅಂದಿದ್ರು. ಸರ್ಕಾರ ಬಂದು 6 ತಿಂಗಳಾದರೂ ಇನ್ನೂ ಯಾಕೆ ಅನುಮತಿ ಕೊಡಿಸಿಲ್ಲ. ಕರ್ನಾಟಕ–ತಮಿಳುನಾಡು ಮಾತನಾಡಿಕೊಂಡು ಬಗೆಹರಿಸಿಕೊಳ್ಳುವುದಾದರೆ, ಕೇಂದ್ರ ಸರ್ಕಾರ ಬರೀ ಟ್ಯಾಕ್ಸ್‌ ಕಟ್ಟಿಸಿಕೊಳ್ಳೋಕೆ ಇರೋದಾ’ ಎಂದು ಕಿಡಿಕಾರಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.