ನವದೆಹಲಿ: ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಇಂದು ನವದೆಹಲಿಯಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯ ಸಾಗರ್ ಈಶ್ವರ ಖಂಡ್ರೆ ಅವರ ಜೊತೆಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ಬರಬೇಕಾದ ಕ್ಯಾಂಪಾ ನಿಧಿ, ಮೈಸೂರು ಪೇಪರ್ ಮಿಲ್ಸ್ (ಎಂ.ಪಿ.ಎಂ.)ಗೆ ನೀಡಿರುವ ಭೂಮಿಯ ಗುತ್ತಿಗೆ ವಿಸ್ತರಣೆ ಮತ್ತು ಪಾರಂಪರಿಕವಾಗಿ ಹೊಂದಿರುವ ವನ್ಯಜೀವಿ ಅಂಗಾಂಗವನ್ನು ಮರಳಿಸಲು ಕೊನೆಯ ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರದ ಕುರಿತಂತೆ ಚರ್ಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.