ADVERTISEMENT

Muda Scam: ತೀರ್ಪು ಪ್ರಕಟಿಸುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಕ್ಕೆ ಸಚಿವರ ದಂಡು

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 16:05 IST
Last Updated 24 ಸೆಪ್ಟೆಂಬರ್ 2024, 16:05 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಹೈಕೋರ್ಟ್‌ ತೀರ್ಪು ಪ್ರಕಟಿಸುತ್ತಿದ್ದಂತೆ, ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ‘ಕಾವೇರಿ’ ನಿವಾಸದ ಕಡೆಗೆ ತರಾತುರಿಯಲ್ಲಿ ತೆರಳಿದರು. ಅದೇ ವೇಳೆಗೆ ಸಚಿವ ಸಂಪುಟದ ಸಹೋದ್ಯೋಗಿಗಳು, ಕೆಲವು ಕಾಂಗ್ರೆಸ್‌ ಮುಖಂಡರೂ ಮುಖ್ಯಮಂತ್ರಿ ಭೇಟಿಗೆ ಅಲ್ಲಿಗೆ ‌ದೌಡಾಯಿಸಿದರು. 

ಹೈಕೋರ್ಟ್‌ ತೀರ್ಪು ಹಾಗೂ ಮುಂದಿನ ಹೆಜ್ಜೆಯ ಕುರಿತು ಸಚಿವರು ಮತ್ತು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದರು. ದೂರವಾಣಿ ಮೂಲಕ ತಮ್ಮ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಜೊತೆಗೂ ಸಮಾಲೋಚನೆ ನಡೆಸಿದರು. ‌ಅಲ್ಲದೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಕರೆ ಮಾಡಿದ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದರು.

ಸಚಿವರಾದ ಎಚ್‌.ಕೆ. ಪಾಟೀಲ, ಎಚ್‌.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ, ಈಶ್ವರ ಖಂಡ್ರೆ, ಎನ್‌. ಚಲುವರಾಯಸ್ವಾಮಿ, ಬೈರತಿ ಸುರೇಶ್‌, ಶಾಸಕ ಆರ್‌.ವಿ. ದೇಶಪಾಂಡೆ ಮತ್ತಿತರರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.