ADVERTISEMENT

Nagamangala Riots | ಕುಮಾರಸ್ವಾಮಿ ಗಲಾಟೆ ಮಾಡಿಸಿರಬಹುದು: ಡಿ.ಕೆ. ಸುರೇಶ್‌

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2024, 16:04 IST
Last Updated 14 ಸೆಪ್ಟೆಂಬರ್ 2024, 16:04 IST
<div class="paragraphs"><p>ಡಿ.ಕೆ. ಸುರೇಶ್‌</p></div>

ಡಿ.ಕೆ. ಸುರೇಶ್‌

   

ಬೆಂಗಳೂರು: ‘ವಾರಕ್ಕೊಮ್ಮೆ ಬಂದು ಏನೇನೋ ಮಾತನಾಡುವ ಎಚ್‌.ಡಿ.ಕುಮಾರಸ್ವಾಮಿ ಅವರು ನಾಗಮಂಗಲ ಗಲಾಟೆ ಮಾಡಿಸಿರಬಹುದು ಎಂದು ನಾನೂ ಹೇಳಬಹುದಲ್ಲವೇ’ ಎಂದು ಕಾಂಗ್ರೆಸ್‌ ಮಾಜಿ ಸಂಸದ ಡಿ.ಕೆ. ಸುರೇಶ್‌ ಹೇಳಿದರು.

‘ನಾಗಮಂಗಲ ಗಲಾಟೆಗೆ ಕಾಂಗ್ರೆಸ್ ಚಿತಾವಣೆ’ ಎನ್ನುವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸುರೇಶ್, ‘ಕುಮಾರಸ್ವಾಮಿ ಏನು ಆರೋಪ ಮಾಡುತ್ತಾರೋ ಅದೇ ರೀತಿ ನಾನೂ ಆರೋಪ ಮಾಡುತ್ತೇನೆ’ ಎಂದರು.

ADVERTISEMENT

‘ಕಾಂಗ್ರೆಸ್ ಸರ್ಕಾರ ಅತಿಯಾದ ತುಷ್ಟೀಕರಣ ಮಾಡುತ್ತಿದೆ’ ಎಂಬ ಆರೋಪದ ಬಗ್ಗೆ ಕೇಳಿದಾಗ, ‘ಯಾರ ತುಷ್ಟೀಕರಣವನ್ನೂ ನಮ್ಮ ಸರ್ಕಾರ ಮಾಡುವುದಿಲ್ಲ. ಅಂಬೇಡ್ಕರ್, ಗಾಂಧೀಜಿ, ಬಸವಣ್ಣ ಅವರ ತತ್ವದಲ್ಲಿ ನಾವು ನಡೆಯುತ್ತಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.