ಬೆಂಗಳೂರು: ರಾಜ್ಯದ ಹಲವೆಡೆ ರಾಷ್ಟ್ರೀಯ ಹೆದ್ದಾರಿಗಳು ವೈಜ್ಞಾನಿಕವಾಗಿ ನಿರ್ಮಾಣವಾಗಿಲ್ಲ. ಅಪಾಯಗಳ ಬಗ್ಗೆ ಹೇಳಿದರೆ ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳು ಕಿವಿಗೇ ಹಾಕಿಕೊಳ್ಳುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ನಾವು ಏನೇ ದೂರು ಹೇಳಿದರೂ ನಮ್ಮ ಕೇಂದ್ರ ಕಚೇರಿ ದೆಹಲಿಯಲ್ಲಿದೆ. ಅಲ್ಲಿಗೆ ಪತ್ರ ಬರೆಯುತ್ತೇನೆ ಎಂದಷ್ಟೇ ಹೇಳಿ ಕೈತೊಳೆದುಕೊಳ್ಳುತ್ತಾರೆ’ ಎಂದರು.
‘ಅಂಕೋಲಾ ಬಳಿ ನಡೆದ ಭೂಕುಸಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಕರೆಯಿಸಿ ಘಟನೆಯ ಬಗ್ಗೆ ಮಾತನಾಡುತ್ತೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.