ADVERTISEMENT

ಪ್ರಕರಣ ಮುಚ್ಚಿಹಾಕಲು ಪೊಲೀಸರ ಯತ್ನ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 14 ಜನವರಿ 2024, 16:05 IST
Last Updated 14 ಜನವರಿ 2024, 16:05 IST
ಬಸವರಾಜ ಬೊಮ್ಮಾಯಿ, ಶಾಸಕ 
ಬಸವರಾಜ ಬೊಮ್ಮಾಯಿ, ಶಾಸಕ    

ಹುಬ್ಬಳ್ಳಿ: ‘ಹಾನಗಲ್‌ನಲ್ಲಿನ ಅತ್ಯಾಚಾರ ಪ್ರಕರಣವನ್ನು ಪೊಲೀಸರು ಮುಚ್ಚಿಹಾಕಲು ಯತ್ನಿಸಿದ್ದು, ವಿಫಲವಾಗಿದೆ. ಸಂತ್ರಸ್ತೆಗೆ ಹಣನೀಡಿ, ಆಮಿಷ ತೋರಿಸಿ ದೂರು ಹಿಂಪಡೆಯುಂತೆ ಮಾಡಿದ್ದು ಬಹಿರಂಗವಾಗಿದೆ‘ ಎಂದು ಶಾಸಕ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಸುದ್ದಿಗಾರ ಜೊತೆಗೆ ಮಾತನಾಡಿದ ಅವರು, ‘ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿಹಾಕುತ್ತಾರೆ ಎಂದು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನೀಡುವಂತೆ ಒತ್ತಾಯಿಸಿದ್ದೆ. ಮುಖ್ಯಮಂತ್ರಿ ಹಾವೇರಿಗೆ ಬಂದಾಗ, ಪ್ರಕರಣವನ್ನು ಎಸ್‌ಐಟಿಗೆ ಕೊಡುವ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT