ADVERTISEMENT

Video: ಕರ ಸೇವಕರ ಬಂಧನ: ತಪ್ಪು ಮಾಡಿದವರನ್ನು ಸುಮ್ಮನೆ ಬಿಡಬೇಕಾ- ಸಿದ್ದರಾಮಯ್ಯ

ಪ್ರಜಾವಾಣಿ ವಿಶೇಷ
Published 2 ಜನವರಿ 2024, 13:50 IST
Last Updated 2 ಜನವರಿ 2024, 13:50 IST

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಪ್ರಕರಣದ ಕುರಿತು ಬಸಾಪುರದ ಖಾಸಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 'ತಪ್ಪು ಮಾಡಿದವರಿಗೆ ಏನು ಮಾಡಬೇಕು?ಸುಮ್ಮನೇ ಬಿಟ್ಟು ಬಿಡಬೇಕಾ?ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಲು ಪೊಲೀಸರಿಗೆ ಹೇಳಿದ್ದೇವೆ ಎಂದರು. ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ನ್ಯಾಯಾಲಯದ ನಿರ್ದೇಶನದ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಮ್ಮ ಸರ್ಕಾರ ನಿರಪರಾಧಿಗಳನ್ನು ಬಂಧಿಸುವ ಕೆಲಸ ಯಾವತ್ತೂ ಮಾಡುವುದಿಲ್ಲ ಎಂದು ಹೇಳಿದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.