ADVERTISEMENT

ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರೊ. ದೇವಪ್ಪ ಸದಸ್ಯ

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 16:03 IST
Last Updated 25 ಜೂನ್ 2024, 16:03 IST
ಕೆಪಿಎಸ್‌ಸಿ
ಕೆಪಿಎಸ್‌ಸಿ    

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರಾಗಿ ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶನಾಲಯದ ಸಂಶೋಧನೆ ಮತ್ತು ವಿಸ್ತರಣಾ ಸಹ ನಿರ್ದೇಶಕ ಪ್ರೊ. ವಿ. ದೇವಪ್ಪ ಅವರನ್ನು ನೇಮಿಸಿ ಮಂಗಳವಾರ ಅಧಿಸೂಚನೆ ಹೊರಡಿಸಲಾಗಿದೆ.

ದೇವಪ್ಪ ಅವರನ್ನು ಅಧಿಕಾರಿ ವಿಭಾಗದಿಂದ ಖಾಲಿ ಇರುವ ಸದಸ್ಯ ಸ್ಥಾನಕ್ಕೆ ನೇಮಿಸಲಾಗಿದೆ.

ಕೆಪಿಎಸ್‌ಸಿಗೆ 16 ಸದಸ್ಯರ ನೇಮಕಕ್ಕೆ ಅವಕಾಶವಿದ್ದು, ಪ್ರೊ. ದೇವಪ್ಪ ಅವರ ನೇಮಕದ ಮೂಲಕ 15 ಸ್ಥಾನಗಳು ಭರ್ತಿ ಆದಂತಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.