ADVERTISEMENT

ರೈತರಿಗೆ ಪರಿಹಾರ ನೀಡಲು ಮೀನ– ಮೇಷ: ಆರ್‌.ಅಶೋಕ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2023, 16:32 IST
Last Updated 28 ಡಿಸೆಂಬರ್ 2023, 16:32 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ‘ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ₹2,000 ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿ ತಿಂಗಳು ಕಳೆದಿದ್ದರೂ ಹಣ ಬಿಡುಗಡೆಗೆ ಮೀನ– ಮೇಷ ಎಣಿಸಲಾಗುತ್ತಿದೆ. ಇದು ಲಜ್ಜೆಗೆಟ್ಟ ಸರ್ಕಾರ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಬರೆದಿರುವ ಅವರು, ರೈತರನ್ನು ಅವಮಾನಿಸುವುದು ಈ ಸರ್ಕಾರದ ನಿತ್ಯದ ಕಾಯಕವಾಗಿದೆ ಎಂದು ಹೇಳಿದ್ದಾರೆ.

‘ರೈತರ ಆತ್ಮಹತ್ಯೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು, ಸಾಲ ಮನ್ನಾ ಆಸೆಗಾಗಿ ಬರಗಾಲ ಬರಲಿ ಎಂದು ರೈತರು ಬಯಸುತ್ತಿದ್ದಾರೆ ಎಂದು ರೈತರಿಗೆ ಅಪಮಾನ ಮಾಡುವುದು, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು, ಇವುಗಳಲ್ಲೇ ಕಾಂಗ್ರೆಸ್‌ ಸರ್ಕಾರ ಕಾಲಹರಣ ಮಾಡುತ್ತಿದೆಯೇ ಹೊರತು, ರೈತರ ನೆರವಿಗೆ ಬರುವ ಉದ್ದೇಶವೇ ಇದ್ದಂತಿಲ್ಲ’ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.