ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ರಕ್ಷಣೆಗೆ ನಿಂತಿಲ್ಲ: ಜಮೀರ್ ಅಹಮದ್

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 23:30 IST
Last Updated 22 ಜೂನ್ 2024, 23:30 IST
ಜಮೀರ್ ಅಹಮದ್‌
ಜಮೀರ್ ಅಹಮದ್‌   

ವಿಜಯಪುರ: ‘ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ರಕ್ಷಣೆಗೆ ನಾನು ಲಾಬಿ ಮಾಡಿದ್ದೇನೆಂದು ಕೆಲ ಮಾದ್ಯಮಗಳು ಪರೋಕ್ಷವಾಗಿ ನನ್ನನ್ನು ಬಿಂಬಿಸುತ್ತಿವೆ. ಆದರೆ, ನಾನು ಯಾರ ಮೇಲೂ ಒತ್ತಡ ಹೇರಿಲ್ಲ. ದರ್ಶನ್ ರಕ್ಷಣೆಗೆ ನಿಂತಿಲ್ಲ’ ಎಂದು ಸಚಿವ ಜಮೀರ್ ಅಹಮದ್‌ ಹೇಳಿದರು.

‘ದರ್ಶನ್ ಮತ್ತು ನಾನು ಒಳ್ಳೆಯ ಸ್ನೇಹಿತರು. ಆದರೆ, ಇಂತಹ ಕೃತ್ಯ ಮಾಡಿದಾಗ ಆರೋಪಿ ಪರ ಯಾರು ನಿಲ್ಲುತ್ತಾರೆ. ಯಾರೇ ತಪ್ಪು ಮಾಡಿದರೂ ತಪ್ಪು ತಪ್ಪೆ, ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಈಗಾಗಲೇ ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆದಿದೆ. ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ನ್ಯಾಯಾಲಯ ಮುಂದಿನ ಕ್ರಮ ಕೈಗೊಳ್ಳಲಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.