ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಪ್ರಾಸಿಕ್ಯೂಟರ್ ಆಗಿ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆ ಶನಿವಾರ ಅಧಿಸೂಚನೆ ಹೊರಡಿಸಿದೆ.
ದರ್ಶನ್ ಮತ್ತಿತರರು ಆರೋಪಿಗಳಾಗಿ ಸಂಚಲನ ಉಂಟು ಮಾಡಿರುವ ಈ ಪ್ರಕರಣದಲ್ಲಿ ಪ್ರಸನ್ನ ಕುಮಾರ್ ವಿಚಾರಣಾ, ಸೆಷನ್ಸ್ ಮತ್ತು ಹೈಕೋರ್ಟ್ನಲ್ಲಿ ವಿಶೇಷ ಪ್ರಾಸಿಕ್ಯೂಟರ್ ಆಗಿ ಪ್ರತಿನಿಧಿಸಲಿದ್ದಾರೆ. ಹೈಕೋರ್ಟ್ ವಕೀಲ ಸಿ.ಸಚಿನ್ ಅವರನ್ನು ಸಹಾಯಕ ಪ್ರಾಸಿಕ್ಯೂಟರ್ ಆಗಿ ಸರ್ಕಾರ ನೇಮಕ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.