ADVERTISEMENT

ಸಂಡೂರು ವಿಧಾನ ಪರಿಷತ್‌ ಉಪ ಚುನಾವಣೆ | ಬಿಜೆಪಿ ಗೆಲುವಿಗಾಗಿ ಶ್ರಮಿಸೋಣ: ದಿವಾಕರ್

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 8:05 IST
Last Updated 23 ಅಕ್ಟೋಬರ್ 2024, 8:05 IST
ಬಿಜೆಪಿ ಧ್ವಜ
ಬಿಜೆಪಿ ಧ್ವಜ   

ಬೆಂಗಳೂರು: ಸಂಡೂರು ವಿಧಾನ ಪರಿಷತ್‌ ಉಪ ಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸುವ ಮೂಲಕ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳೊಣ. ಟಿಕೆಟ್ ಸಿಗದಿದ್ದಕ್ಕೆ ನನಗೆ ಬೇಸರವಿಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್.ದಿವಾಕರ್ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ದಿವಾಕರ್ ಹೇಳಿಕೆಯನ್ನು ಬಿಜೆಪಿ ಹಂಚಿಕೊಂಡಿದೆ.

‘ಸಂಡೂರಿನಲ್ಲಿ ಹತ್ತಾರು ಸಮಸ್ಯೆಗಳಿದ್ದರೂ ಕಾಂಗ್ರೆಸ್ ಸರ್ಕಾರ ಬಗೆಹರಿಸುವ ಯಾವ ಪ್ರಯತ್ನ ಮಾಡಿಲ್ಲ. ಇ.ತುಕಾರಾಂ ನಾಲ್ಕು ಬಾರಿ ಶಾಸಕರಾಗಿದ್ದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸುವ ಮೂಲಕ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳೊಣ. ಉಪಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದಕ್ಕೆ ನನಗೆ ಬೇಸರವಿಲ್ಲ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಹಾಗೂ ಬಿ.ಎಸ್‌ ಯಡಿಯೂರಪ್ಪ ಅವರನ್ನು ಅಭ್ಯರ್ಥಿ ಎಂದುಕೊಂಡು ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗೂಡಿ ಶ್ರಮಿಸೋಣ’ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.