ADVERTISEMENT

ಅತ್ಯಾಚಾರ ಆರೋಪ ಪ್ರಕರಣ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 13:45 IST
Last Updated 26 ಜೂನ್ 2024, 13:45 IST
ಪ್ರಜ್ವಲ್‌ ರೇವಣ್ಣ
ಪ್ರಜ್ವಲ್‌ ರೇವಣ್ಣ   

ಬೆಂಗಳೂರು: ಹಾಸನ ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ಸೆಷನ್ಸ್‌) ಜಾಮೀನು ನಿರಾಕರಿಸಿದೆ.

ಈ ಕುರಿತಂತೆ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ್‌ ಭಟ್ ಬುಧವಾರ ಪ್ರಕಟಿಸಿದರು.

‘ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.