ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಶೇ 40 ಕ್ಕೂ ಹೆಚ್ಚು ಲಂಚ ಪಡೆಯುತ್ತಿರುವುದನ್ನು ಕಾಂಗ್ರೆಸ್ ಮುಖಂಡ ಬಿ.ಶಿವರಾಂ ಅವರೇ ಆರೋಪ ಮಾಡಿದ್ದಾರೆ. ಸರ್ಕಾರದ ವಿರುದ್ಧ ಅವರ ಪಕ್ಷದ ನಾಯಕರೇ ರೋಸಿ ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ‘ಎಕ್ಸ್’ನಲ್ಲಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು, ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡದ ಬಗ್ಗೆ ಭ್ರಷ್ಟಾಚಾರ ಅವರದೇ ಪಕ್ಷದ ನಾಯಕರೇ ಸುದ್ದಿಗೋಷ್ಠಿ ಮೂಲಕ ಬಯಲು ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಿದೆ ಎಂದಿದ್ದಾರೆ.
ಅಭಿವೃದ್ಧಿ, ಜನಕಲ್ಯಾಣ ಕಾರ್ಯಗಳನ್ನು ಸಂಪೂರ್ಣವಾಗಿ ಮರೆತಿರುವ ಕಾಂಗ್ರೆಸ್ ಸರ್ಕಾರ ಎಲ್ಲೆಂದರಲ್ಲಿ ಭ್ರಷ್ಟಾಚಾರದ ಅಂಗಡಿಗಳನ್ನು ತೆರೆಯುವುದ ಜತೆಗೆ ಹೆಜ್ಜೆ ಹೆಜ್ಜೆಗೂ ಎಟಿಎಂ ಮಾದರಿ ಕಮಿಷನ್ ಕೌಂಟರ್ಗಳನ್ನೂ ತೆರೆದು ಕುಳಿತಿದೆ. ಈ ಸರ್ಕಾರವನ್ನು ಕಿತ್ತೊಗೆಯುವುದೊಂದೇ ಜನರಿಗಿರುವ ಮಾರ್ಗ ಎಂದು ವಿಜಯೇಂದ್ರ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.