ADVERTISEMENT

ಆರು ಪಟ್ಟಣಗಳಿಗೆ ಉಪನಗರ ಭಾಗ್ಯ: ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 23 ಜುಲೈ 2024, 13:49 IST
Last Updated 23 ಜುಲೈ 2024, 13:49 IST
DK Shivakumar 
DK Shivakumar    

ಬೆಂಗಳೂರು: ರಾಜಧಾನಿಯ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿ ಪಟ್ಟಣಗಳನ್ನು ಉಪನಗರಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಬಿಜೆಪಿಯ ಧೀರಜ್‌ ಮುನಿರಾಜು ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಇದೇ16 ರಂದು ತಾತ್ವಿಕ ಅನುಮೋದನೆ ನೀಡಿದೆ. ರೈಲು ಮತ್ತು ರಸ್ತೆ ಸಂಪರ್ಕದೊಂದಿಗೆ  ಉಪನಗರಗಳನ್ನು ಅಭಿವೃದ್ಧಿಪಡಿಸಲಾಗುವುದು. ಈ ಬಗ್ಗೆ ಎಲ್ಲ ಶಾಸಕರ ಅಭಿಪ್ರಾಯ ಪಡೆದೇ ಮುಂದುವರೆಯುತ್ತೇನೆ. ಆದರೆ, ಇವುಗಳನ್ನು ‘ಗ್ರೇಟರ್‌ ಬೆಂಗಳೂರು’ ವ್ಯಾಪ್ತಿಗೆ ಸೇರಿಸಲು ಸಾಧ್ಯವಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT