ADVERTISEMENT

ತಮಿಳುನಾಡು ರೈಲು ಅಪಘಾತ: ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಮಾರ್ಗ ಬದಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಅಕ್ಟೋಬರ್ 2024, 19:20 IST
Last Updated 11 ಅಕ್ಟೋಬರ್ 2024, 19:20 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ತಮಿಳುನಾಡಿನ ಕವರೈಪೆಟ್ಟೆ ರೈಲು ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಮೈಸೂರು –ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಪರಿಣಾಮ ಶನಿವಾರ (ಅ.12) ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳ ಮಾರ್ಗ ಬದಲಾಯಿಸಲಾಗಿದೆ. ಮೇಲ್‌ಪಕ್ಕಂ ಹಾಗೂ ರಾಣಿಗುಂಟ ಮಾರ್ಗವಾಗಿ ರೈಲುಗಳು ಸಂಚರಿಸಲಿವೆ.

ADVERTISEMENT

ಶನಿವಾರ ಬೆಳಿಗ್ಗೆ 8.50 ರ ಎಸ್‌ಎಂವಿಟಿ ಬೆಂಗಳೂರು– ಕಾಮಾಕ್ಯ (ರೈಲು ಸಂಖ್ಯೆ: 12551) ಎ.ಸಿ ಎಕ್ಸ್‌ಪ್ರೆಸ್‌ ರೈಲು ಧರ್ಮಾವರಂ, ವಿಜಯವಾಡ ಮಾರ್ಗವಾಗಿ ಚಲಿಸಲಿದೆ.ಇದರಿಂದಾಗಿ ಜೋಳರಪೆಟ್ಟೈ, ಕಟ್ಪಾಡಿ, ಪೆರಂಬೂರು ಹಾಗೂ ಗೂಡೂರು ನಿಲ್ದಾಣಗಳು ಬಿಟ್ಟು ಹೋಗಲಿವೆ.

ಬೆಳಿಗ್ಗೆ 9.15ಕ್ಕೆ ಹೊರಡುವ ಎಸ್‌ಎಂವಿಟಿ ಬೆಂಗಳೂರು–ದಾನಾಪುರ ಸಂಗಮಿತ್ರ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ:12295) ರೈಲು, ಧರ್ಮಾವರಂ, ಕಾಜೀಪೇಟ್ ಮಾರ್ಗವಾಗಿ ಪ್ರಯಾಣಿಸಲಿದೆ. ಕೆ.ಆರ್‌. ಪುರ, ಬಂಗಾರಪೇಟೆ, ಕುಪ್ಪಂ, ಜೋಳರಪೆಟ್ಟೈ, ಕಟ್ಪಾಡಿ, ಆರಕೋಣಂ, ಪೆರಂಬೂರ್, ಗೂಡೂರ್, ನೆಲ್ಲೂರು, ಒಂಗೋಲ್, ವಿಜಯವಾಡ ಹಾಗೂ ವಾರಂಗಲ್ ನಿಲ್ದಾಣಗಳು ತಪ್ಪಲಿವೆ.

ಶುಕ್ರವಾರ ರಾತ್ರಿ 11.30ಕ್ಕೆ ಹೊರಟಿರುವ ಎಸ್‌ಎಂವಿಟಿ ಬೆಂಗಳೂರು–ಗುವಾಹಟಿ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ: 12509) ಮೇಲ್ಪಕ್ಕಂ, ರಾಣಿಗುಂಟ ಮಾರ್ಗದಲ್ಲಿ ಪ್ರಯಾಣಿಸುತ್ತಿದೆ. ಆರಕೋಣಂ ಹಾಗೂ ಪೆರಂಬೂರ್ ನಿಲ್ದಾಣಗಳು ತಪ್ಪಿಹೋಗಲಿದ್ದು, ಈ ರೈಲಿಗೆ ತಿರುತ್ತಣಿಯಲ್ಲಿ ಹೆಚ್ಚುವರಿ ನಿಲುಗಡೆ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.