ADVERTISEMENT

ಕೆಎಎಸ್‌ ಅಧಿಕಾರಿಗಳ ವರ್ಗಾವಣೆ: ಮುಡಾ ಆಯುಕ್ತ, ಕಾರ್ಯದರ್ಶಿ ಬದಲಾವಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಜುಲೈ 2024, 13:52 IST
Last Updated 2 ಜುಲೈ 2024, 13:52 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕರ್ನಾಟಕ ಆಡಳಿತ ಸೇವೆಯ ಹಿರಿಯ ಶ್ರೇಣಿಯ ಆಡಳಿತ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. 

ಸ್ಥಳ ನೀರಿಕ್ಷೆಯಲ್ಲಿದ್ದ ಸೂಪರ್ ಟೈಂ ಶ್ರೇಣಿಯ ಡಾ.ಜಗದೀಶ್‌ ಕೆ. ನಾಯಕ್‌ ಅವರನ್ನು ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನಿಯೋಜಿಸಿದೆ. 

ADVERTISEMENT

ನಗರಾಭಿವೃದ್ಧಿ ಇಲಾಖೆಯ ಉಪಕಾರ್ಯದರ್ಶಿಯಾಗಿದ್ದ ಹಿರಿಯ ಶ್ರೇಣಿಯ ಅಧಿಕಾರಿ ಎ.ಎನ್. ರಘುನಂದನ್‌ ಅವರನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹುದ್ದೆಗೆ ‌ವರ್ಗಾಯಿಸಿದೆ. (ಜಿ.ಟಿ. ದಿನೇಶ್‌ ಕುಮಾರ್‌ ಅವರ ಸ್ಥಾನಕ್ಕೆ)

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿ.ಕೆ. ಪ್ರಸನ್ನಕುಮಾರ ಅವರನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ ( ಜಿ.ಡಿ. ಶೇಖರ ಅವರ ಸ್ಥಾನಕ್ಕೆ)

ಸ್ಥಳ ನಿರೀಕ್ಷೆಯಲ್ಲಿದ್ದ ಕಿರಿಯ ಶ್ರೇಣಿಯ ಅಧಿಕಾರಿ ಹುಲ್ಲುಮನಿ ತಿಮ್ಮಣ್ಣ ಅವರನ್ನು ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ಸರ್ಕಾರ ನೇಮಿಸಿದೆ. (ಬಸನಗೌಡ ಕೋಟುರು ಅವರ ಸ್ಥಾನಕ್ಕೆ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.