ADVERTISEMENT

ಕಸ್ತೂರಿ ರಂಗನ್ ವರದಿ ತಿರಸ್ಕಾರ; ಮತ್ತೊಮ್ಮೆ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 0:28 IST
Last Updated 3 ಆಗಸ್ಟ್ 2024, 0:28 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

– ಪ್ರಜಾವಾಣಿ ಚಿತ್ರ

ಮಡಿಕೇರಿ: ‘ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎಂಬುದು ನಮ್ಮ ಹಿಂದಿನ ತೀರ್ಮಾನ. ಈಗ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಚರ್ಚಿಸಿ ಮತ್ತೊಮ್ಮೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

‘ಕೊಡಗು ಜಿಲ್ಲೆಯಲ್ಲಿ ನಮ್ಮ ಸರ್ಕಾರ ಭೂಪರಿವರ್ತನೆ ಮಾಡಿಲ್ಲ. ಯಾವುದೇ ಕಾರಣಕ್ಕೂ ಪ್ರಕೃತಿ ವಿಕೋಪಗಳನ್ನು ನಿರ್ಲಕ್ಷ್ಯ ಮಾಡುವುದಿಲ್ಲ’ ಎಂದು ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.

‘ಬಿಜೆಪಿ– ಜೆಡಿಎಸ್‌ ಪಾದಯಾತ್ರೆಗೆ ನಮ್ಮ ತಕರಾರಿಲ್ಲ. ಆದರೆ, ಬೆಂಗಳೂರಿನಲ್ಲಿ ಪಾದಯಾತ್ರೆ ಮಾಡಬಾರದು ಎಂದು ನ್ಯಾಯಾಲಯದ ಆದೇಶವಿರುವುದರಿಂದ, ಬೆಂಗಳೂರು ಕಮಿಷನರ್ ಅನುಮತಿ ಕೊಡುವುದಿಲ್ಲ’ ಎಂದರು.

‘ಮುಡಾ ನಿವೇಶನ ಹಂಚಿಕೆಯ ಕುರಿತ ದೂರಿನ ಸಂಬಂಧ ನೀಡಿರುವ ನೋಟಿಸ್ ಅನ್ನು ರಾಜ್ಯಪಾಲರು ವಾಪಸ್ ಪಡೆಯುತ್ತಾರೆ ಎಂದು ‌ನಂಬಿಕೆ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.