ADVERTISEMENT

25 ವರ್ಷಗಳ ಹಿಂದೆ | ಭಾಗವತ್‌ ಆರೋಪ: ಮತ್ತೆ ಸಂಸತ್‌ ಕಲಾಪ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2024, 23:34 IST
Last Updated 16 ಮಾರ್ಚ್ 2024, 23:34 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ನವದೆಹಲಿ, ನೌಕಾಪಡೆಯ ಮುಖ್ಯಸ್ಥ ಸ್ಥಾನದಿಂದ ವಜಾ ಆದ ಅಡ್ಮಿರಲ್‌ ಜನರಲ್‌ ವಿಷ್ಣು ಭಾಗವತ್‌ ಶಸ್ತ್ರಾಸ್ತ್ರ ಖರೀದಿಯ ಬಗೆಗೆ ಮಾಡಿರುವ ಗಂಭೀರ ಆರೋಪಗಳ ತನಿಖೆಗೆ ಜಂಟಿ ಸಂಸತ್‌ ಸಮಿತಿ ರಚಿಸಬೇಕೆಂದು ಸಂಸತ್‌ನ ಉಭಯ ಸದನಗಳಲ್ಲೂ ಇಂದು ಪ್ರತಿಪಕ್ಷಗಳು ಒತ್ತಾಯಿಸಿದ್ದರಿಂದ ಗದ್ದಲ ಉಂಟಾಗಿ ಎರಡು ಬಾರಿ ಕಲಾಪ ಮುಂದೂಡಿದ ಪ್ರಸಂಗ ನಡೆಯಿತು.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಮತ್ತು ಎಡಪಕ್ಷಗಳ ಸದಸ್ಯರು ಶೂನ್ಯವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದಾಗ ಸದನ ಕೋಲಾಹಲದಲ್ಲಿ ಮುಳುಗಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT