ಆರ್ಎಸ್ಎಸ್, ವಿಎಚ್ಪಿ ನಿಷೇಧಕ್ಕೆ ಗೌಡರ ಆಗ್ರಹ
ಬರೋಡಾ, ಜ. 7– (ಪಿಟಿಐ, ಯುಎನ್ಐ) ಆರ್ಎಸ್ಎಸ್, ವಿಎಚ್ಪಿ, ಬಜರಂಗದಳ ಮತ್ತು ಶಿವಸೇನೆಯಂಥ ಕೋಮು ಸಂಘಟನೆ ಗಳನ್ನು ನಿಷೇಧಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.
ದಕ್ಷಿಣ ಗುಜರಾತ್ನಲ್ಲಿ ಕ್ರೈಸ್ತರ ಮೇಲೆ ನಡೆದ ದಾಳಿಗೆ ಈ ಸಂಘಟನೆಗಳು ಕಾರಣ ಎಂದು ಅವರು ಆರೋಪಿಸಿದ್ದಾರೆ.
‘ಈ ಸಂಘಟನೆಗಳು ರಾಷ್ಟ್ರದ ಹಲವು ಭಾಗಗಳಲ್ಲಿ ಧರ್ಮಾಂಧತೆಯನ್ನು ಹಬ್ಬಿಸುತ್ತಿವೆ. ಅವುಗಳ ಚಟುವಟಿಕೆಗಳಿಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಮೋದ್ ಮಹಾಜನ್ ಬೆಂಬಲ ನೀಡುತ್ತಿದ್ದಾರೆ’ ಎಂದು ಆಪಾದಿಸಿದ್ದಾರೆ.
ಬಗರ್ಹುಕುಂ: ಸಾಗುವಳಿ ಚೀಟಿಗೆ ಆದೇಶ
ಬೆಂಗಳೂರು, ಜ. 7– ಬಗರ್ಹುಕುಂ ಸಾಗುವಳಿ ಜಮೀನನ್ನು ಕಾಯಂ ಮಾಡಬೇಕೆಂದು ಸರ್ಕಾರಕ್ಕೆ ಅರ್ಜಿ ಸಲ್ಲಿಸದೆ ಇರುವ ಪ್ರಕರಣಗಳನ್ನು ಗುರುತಿಸಿ ಅವುಗಳಿಗೆ ಕಂದಾಯ ಇಲಾಖೆಯ ಅಧಿಕಾರಿಗಳೇ ಅಗತ್ಯ ದಾಖಲೆ ತಯಾರಿಸಿ ಸಾಗುವಳಿ ಚೀಟಿ ಕೊಡಬೇಕೆಂದು ಸರ್ಕಾರವು ಕಂದಾಯ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.