ಗ್ವಾಲಿಯರ್: ಬಾಂಗ್ಲಾದೇಶ ವಿರುದ್ಧದ ಟಿ20 ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಅಂತರದಿಂದ ಗೆಲುವು ಸಾಧಿಸಿದೆ.
ಗ್ವಾಲಿಯರ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 19.5 ಓವರ್ಗಳಲ್ಲಿ 127 ರನ್ ಗಳಿಸಿ ಆಲೌಟ್ ಆಗಿತ್ತು. ನಾಯಕ ನಜ್ಮುಲ್ ಹೊಸೈನ್ ಶಾಂಟೊ 27 ಹಾಗೂ ಮೆಹದಿ ಹಸನ್ ಮಿರಾಜ್ 35 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು.
ಸಾಧಾರಣ ಮೊತ್ತ ಬೆನ್ನತ್ತಿದ ಭಾರತ 11.5 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಹಾರ್ದಿಕ್ ಪಾಂಡ್ಯ 16 ಎಸೆತಗಳಲ್ಲಿ 2 ಸಿಕ್ಸರ್, 5 ಬೌಂಡರಿ ಸಹಿತ 39 ರನ್ ಗಳಿಸಿದರೆ, ಸಂಜು ಸ್ಯಾಮ್ಸನ್ 29, ನಾಯಕ ಸೂರ್ಯಕುಮಾರ್ ಯಾದವ್ 29 ರನ್ ಗಳಿಸಿ ಮಿಂಚಿದರು.
ಹೋದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸಂಚಲನ ಮೂಡಿಸಿದ್ದ ವೇಗದ ಬೌಲರ್ ಮಯಂಕ್ ಯಾದವ್ ಅವರು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡಿದರು. ಇವರು ಪ್ರತಿ ಗಂಟೆಗೆ 150 ಕಿ.ಮೀ ವೇಗದಲ್ಲಿ ಬೌಲ್ ಮಾಡಲಿದ್ದಾರೆ. ಹಾಗೇ ಬ್ಯಾಟರ್ ನಿತೀಶ್ ಕುಮಾರ್ ರೆಡ್ಡಿ ಸಹ ಪದಾರ್ಪಣೆ ಮಾಡಿದರು.
ಸೂರ್ಯಕುಮಾರ್ ಯಾದವ್ ನಾಯಕತ್ವದ ತಂಡದಲ್ಲಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ವೇಗಿ ಅರ್ಷದೀಪ್ ಸಿಂಗ್, ಬ್ಯಾಟರ್ ರಿಯಾನ್ ಪರಾಗ್, ವಿಕೆಟ್ಕೀಪರ್ ಸಂಜು ಸ್ಯಾಮ್ಸನ್ ಅವರ ಮೇಲೆ ಹೆಚ್ಚು ನಿರೀಕ್ಷೆ ಇದೆ. ಬಾಂಗ್ಲಾ ತಂಡವು ಅನುಭವಿ ಆಲ್ರೌಂಡರ್ ಶಕೀಬ್ ಅಲ್ ಹಸನ್ ಅವರಿಲ್ಲದೇ ಕಣಕ್ಕಿಳಿಯುತ್ತಿದೆ.
ತಂಡಗಳು
ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಮಯಂಕ್ ಯಾದವ್.
ಬಾಂಗ್ಲಾದೇಶ: ನಜ್ಮುಲ್ ಹುಸೇನ್ ಶಾಂತೊ (ನಾಯಕ), ಪರ್ವೇಜ್ ಹುಸೇನ್ ಇಮಾನ್, ತೌಹಿದ್ ಹೃದಯ್, ಮೆಹಮೂದ್ ಉಲ್ಲಾ, ಲಿಟನ್ ಕುಮಾರ್ ದಾಸ್, ಮೆಹದಿ ಹಸನ್ ಮಿರಾಜ್, ರಿಷದ್ ಹುಸೇನ್, ಮುಸ್ತಫಿಜುರ್ ರೆಹಮಾನ್, ತಸ್ಕಿನ್ ಅಹಮದ್, ಜಾಕೀರ್ ಅಲಿ, ಇಸ್ಲಾಂ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.