ADVERTISEMENT

ಕೋಲ್ಕತ್ತಕ್ಕೆ ಬಂದಿಳಿದ ಶ್ರೇಯಸ್ ಅಯ್ಯರ್

ಪಿಟಿಐ
Published 17 ಮಾರ್ಚ್ 2024, 17:37 IST
Last Updated 17 ಮಾರ್ಚ್ 2024, 17:37 IST
ಈಡನ್ ಗಾರ್ಡಸ್‌ನಲ್ಲಿ ಅಭ್ಯಾಸ ಮಾಡಿದ ಶ್ರೇಯಸ್ ಅಯ್ಯರ್  –ಪಿಟಿಐ ಚಿತ್ರ
ಈಡನ್ ಗಾರ್ಡಸ್‌ನಲ್ಲಿ ಅಭ್ಯಾಸ ಮಾಡಿದ ಶ್ರೇಯಸ್ ಅಯ್ಯರ್  –ಪಿಟಿಐ ಚಿತ್ರ   

ಕೋಲ್ಕತ್ತ: ತಂಡದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಐಪಿಎಲ್‌ನಲ್ಲಿ ಆಡಲಿರುವ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಭಾನುವಾರ ಅವರು ನೆಟ್ಸ್‌ನಲ್ಲಿ ಅಭ್ಯಾಸ ಕೂಡ ಮಾಡಿದರು.

ಈ ಆವೃತ್ತಿಯಲ್ಲಿ ಅವರು ಕೋಲ್ಕತ್ತ ತಂಡವನ್ನು ಮುನ್ನಡೆಸಲಿದ್ದಾರೆ. 

ಈಚೆಗೆ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ತಂಡದಲ್ಲಿ ಅವರು ಆಡಿದ್ದರು. ಅದರಲ್ಲಿ ಕೊನೆಯ ಎರಡು ದಿನ ಅವರು ಬೆನ್ನುನೋವಿನಿಂದಾಗಿ ಫೀಲ್ಡಿಂಗ್ ಮಾಡಿರಲಿಲ್ಲ. ಆದ್ದರಿಂದ ಅವರು ಐಪಿಎಲ್‌ನಲ್ಲಿ ಆಡುವುದು ಅನುಮಾನವಿತ್ತು. 

ADVERTISEMENT

ಶನಿವಾರ ರಾತ್ರಿ ಶ್ರೇಯಸ್ ಅವರು ಕೋಲ್ಕತ್ತ ನಗರಕ್ಕೆ ಬಂದಿಳಿದ ಚಿತ್ರಗಳನ್ನು ನೈಟ್‌ ರೈಡರ್ಸ್ ತಂಡವು ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಾಕಿದೆ. 

ಶ್ರೇಯಸ್ ಅವರು ಹೋದ ವರ್ಷದ ಏಪ್ರಿಲ್‌ನಲ್ಲಿ ಬೆನ್ನಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಪಡೆದಿದ್ದರು. ಅದರಿಂದಾಗಿ  ಐಪಿಎಲ್‌ನಲ್ಲಿ ಆಡಿರಲಿಲ್ಲ. ಸೆಪ್ಟೆಂಬರ್‌ನಲ್ಲಿ ಕ್ರಿಕೆಟ್‌ಗೆ ಮರಳಿದ್ದರು. ಆದರೂ ಬೆನ್ನು ನೋವು ಮತ್ತೆ ಕಾಡಿತ್ತು. ನಂತರ ಚೇತರಿಸಿಕೊಂಡ ಅವರು ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದರು.  

ಈಚೆಗೆ ಇಂಗ್ಲೆಂಡ್ ವಿರುದ್ಧದ ಸರಣಿಯ ಎರಡು ಟೆಸ್ಟ್‌ಗಳಲ್ಲಿ ಆಡಿದ್ದರು. ಮತ್ತೆ ಬೆನ್ನುನೋವಿನ ಸಮಸ್ಯೆಯಿಂದ ಹೊರಗುಳಿದಿದ್ದರು. ರಣಜಿ ಟ್ರೋಫಿ ಕ್ವಾರ್ಟರ್‌ಫೈನಲ್‌ನಲ್ಲಿ ಕೂಡ ಆಡಿರಲಿಲ್ಲ. 

ಈ ಬಾರಿ ಕೆಕೆಆರ್ ತಂಡವು ಇದೇ 23ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈಡನ್ ಗಾರ್ಡನ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.