ಬೆಂಗಳೂರು: ‘ಕಂಠೀರವ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಬಾಲಕರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು 67 ಅಂಕಗಳನ್ನು ಪಡೆಯುವುದರ ಮೂಲಕ ಚಾಂಪಿಯನ್ ಪಟ್ಟ ಪಡೆದುಕೊಂಡಿದೆ’ ಎಂದು ಬೆಂಗಳೂರು ಉತ್ತರ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್. ರಾಜು ತಿಳಿಸಿದ್ದಾರೆ.
‘ಕ್ರೀಡಾಕೂಟದ ಆತಿಥ್ಯ ವಹಿಸಿದ್ದ ಬೆಂಗಳೂರು ಉತ್ತರ ಜಿಲ್ಲೆ 17 ಅಂಕಗಳನ್ನು ಪಡೆದುಕೊಂಡು ರನ್ನರ್ ಅಪ್ ಆಗಿದೆ. ಬೆಳಗಾವಿ ಜಿಲ್ಲೆಯ ಭೂಷಣ್ ಸುನಿಲ್ ಪಟೇಲ್ ವಿವಿಧ ಓಟಗಳ ವಿಭಾಗದಲ್ಲಿ ಒಂದು ಚಿನ್ನ ಮತ್ತು ಎರಡು ಬೆಳ್ಳಿ ಪದಕಗಳನ್ನು ಜಯಸುವ ಮೂಲಕ ವೈಯಕ್ತಿಕ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.