ಹೊಸಪೇಟೆ (ವಿಜಯನಗರ): ಇಲ್ಲಿನ ವಿಜ್ಞಾನ್ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಶನಿವಾರ ಪುನೀತ್ ರಾಜ್ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭವಾದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬಾಲಕರ ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ.
ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡದ ಜೊತೆಗೆ ಕೊಪ್ಪಳ, ಬಾಗಲಕೋಟೆ ಮತ್ತು ಚಿಕ್ಕಮಗಳೂರು ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡದ ಜೊತೆಗೆ ಮೈಸೂರು, ಹಾಸನ ಮತ್ತು ಉತ್ತರ ಕನ್ನಡ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ.
ಬಾಲಕರ ಕ್ವಾರ್ಟರ್ ಫೈನಲ್ನಲ್ಲಿ ದಕ್ಷಿಣ ಕನ್ನಡ ತಂಡ 2:0 ಸೆಟ್ಗಳಿಂದ ಕೊಡಗು ತಂಡವನ್ನು, ಕೊಪ್ಪಳ ತಂಡವು 2:1ರಿಂದ ಮೈಸೂರು ತಂಡವನ್ನು ಮಣಿಸಿತು. ಬಾಗಲಕೋಟೆ ತಂಡವು 2:1ರಿಂದ ವಿಜಯನಗರ ತಂಡವನ್ನು ಮತ್ತು ಚಿಕ್ಕಮಗಳೂರು ತಂಡವು 2:0ರಿಂದ ಬೀದರ್ ತಂಡವನ್ನು ಸೋಲಿಸಿತು.
ಬಾಲಕಿಯರ ಕ್ವಾರ್ಟರ್ ಫೈನಲ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ತಂಡವು 2:0 ಸೆಟ್ಗಳಿಂದ ಬೆಂಗಳೂರು ದಕ್ಷಿಣ ತಂಡವನ್ನು, ಮೈಸೂರು ತಂಡವು 2:0ರಿಂದ ಚಿಕ್ಕಮಗಳೂರು ತಂಡವನ್ನು ಮಣಿಸಿತು. ಹಾಸನ ತಂಡವು 2:0ರಿಂದ ಹಾವೇರಿ ತಂಡವನ್ನು ಮತ್ತು ಉತ್ತರ ಕನ್ನಡ ತಂಡವು 2:0ರಿಂದ ಶಿವಮೊಗ್ಗ ತಂಡವನ್ನು ಸೋಲಿಸಿತು.
ಭಾನುವಾರ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ನಡೆಯಲಿವೆ. 33 ಶೈಕ್ಷಣಿಕ ಜಿಲ್ಲೆಗಳ 660ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.