<p><strong>ನವದೆಹಲಿ</strong>: ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದಿಂದ ಹಮ್ಮಿಕೊಂಡಿರುವ 21ನೇ ರಾಷ್ಟ್ರೀಯ ಜಾನುವಾರು ಗಣತಿಗೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಚಾಲನೆ ನೀಡಿದ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಮಾತನಾಡಿ, ‘ಜಾನುವಾರುಗಳ ಆರೋಗ್ಯ ರಕ್ಷಣೆ ಮತ್ತು ಪಶುಪಾಲನಾ ವಲಯದ ಬೆಳವಣಿಗೆಗೆ ನಿಯಮಾವಳಿ ರೂಪಿಸಲು ಈ ಗಣತಿ ಕಾರ್ಯದಲ್ಲಿ ಸಂಗ್ರಹಿಸುವ ದತ್ತಾಂಶವು ಸಹಕಾರಿಯಾಗಲಿದೆ’ ಎಂದರು.</p>.<p>ಜಾನುವಾರು ಗಣತಿಯು ಪಾರದರ್ಶಕವಾಗಿ ನಡೆಯಲಿದೆ. ಸಚಿವಾಲಯದ ಅಧಿಕಾರಿಗಳು ಗಣತಿಯ ಮೇಲ್ವಿಚಾರಣೆ ಮಾಡಲಿದ್ದಾರೆ. ಈ ದತ್ತಾಂಶ ಸಂಗ್ರಹಕ್ಕೆ ₹200 ಕೋಟಿ ನಿಗದಿಪಡಿಸಲಾಗಿದ್ದು, ಇದನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು. </p>.<p>ಪ್ರಾಣಿಗಳಿಗೆ ಆರೋಗ್ಯ ರಕ್ಷಣಾ ಸೌಲಭ್ಯ ಕಲ್ಪಿಸಲು ‘ಸಾಂಕ್ರಾಮಿಕ ನಿಧಿ ಯೋಜನೆ’ಗೂ ಇದೇ ವೇಳೆ ಚಾಲನೆ ನೀಡಿದ ಸಚಿವರು, ಇದಕ್ಕಾಗಿ ₹210 ಕೋಟಿ ಮೀಸಲಿಡಲಾಗಿದೆ ಎಂದು ವಿವರಿಸಿದರು. </p>.<p>ಜಾನುವಾರು ಗಣತಿಯು ಮುಂದಿನ ವರ್ಷದ ಫೆಬ್ರುವರಿವರೆಗೆ ನಡೆಯಲಿದೆ. 2026ಕ್ಕೆ ವರದಿ ಬಿಡುಗಡೆಯಾಗಲಿದೆ ಎಂದರು.</p><p>---</p>.<p><strong>ಭಾರತವು ವಿಶ್ವದ ಅತಿದೊಡ್ಡ ಹಾಲು ಉತ್ಪಾದಕ ರಾಷ್ಟ್ರವಾಗಿದೆ. ಆದರೆ ಹಾಲು ಮತ್ತು ಅದರ ಉತ್ಪನ್ನಗಳನ್ನು ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ</strong></p><p><strong>-ರಾಜೀವ್ ರಂಜನ್ ಸಿಂಗ್ ಕೇಂದ್ರ ಮೀನುಗಾರಿಕೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದಿಂದ ಹಮ್ಮಿಕೊಂಡಿರುವ 21ನೇ ರಾಷ್ಟ್ರೀಯ ಜಾನುವಾರು ಗಣತಿಗೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಚಾಲನೆ ನೀಡಿದ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಮಾತನಾಡಿ, ‘ಜಾನುವಾರುಗಳ ಆರೋಗ್ಯ ರಕ್ಷಣೆ ಮತ್ತು ಪಶುಪಾಲನಾ ವಲಯದ ಬೆಳವಣಿಗೆಗೆ ನಿಯಮಾವಳಿ ರೂಪಿಸಲು ಈ ಗಣತಿ ಕಾರ್ಯದಲ್ಲಿ ಸಂಗ್ರಹಿಸುವ ದತ್ತಾಂಶವು ಸಹಕಾರಿಯಾಗಲಿದೆ’ ಎಂದರು.</p>.<p>ಜಾನುವಾರು ಗಣತಿಯು ಪಾರದರ್ಶಕವಾಗಿ ನಡೆಯಲಿದೆ. ಸಚಿವಾಲಯದ ಅಧಿಕಾರಿಗಳು ಗಣತಿಯ ಮೇಲ್ವಿಚಾರಣೆ ಮಾಡಲಿದ್ದಾರೆ. ಈ ದತ್ತಾಂಶ ಸಂಗ್ರಹಕ್ಕೆ ₹200 ಕೋಟಿ ನಿಗದಿಪಡಿಸಲಾಗಿದ್ದು, ಇದನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು. </p>.<p>ಪ್ರಾಣಿಗಳಿಗೆ ಆರೋಗ್ಯ ರಕ್ಷಣಾ ಸೌಲಭ್ಯ ಕಲ್ಪಿಸಲು ‘ಸಾಂಕ್ರಾಮಿಕ ನಿಧಿ ಯೋಜನೆ’ಗೂ ಇದೇ ವೇಳೆ ಚಾಲನೆ ನೀಡಿದ ಸಚಿವರು, ಇದಕ್ಕಾಗಿ ₹210 ಕೋಟಿ ಮೀಸಲಿಡಲಾಗಿದೆ ಎಂದು ವಿವರಿಸಿದರು. </p>.<p>ಜಾನುವಾರು ಗಣತಿಯು ಮುಂದಿನ ವರ್ಷದ ಫೆಬ್ರುವರಿವರೆಗೆ ನಡೆಯಲಿದೆ. 2026ಕ್ಕೆ ವರದಿ ಬಿಡುಗಡೆಯಾಗಲಿದೆ ಎಂದರು.</p><p>---</p>.<p><strong>ಭಾರತವು ವಿಶ್ವದ ಅತಿದೊಡ್ಡ ಹಾಲು ಉತ್ಪಾದಕ ರಾಷ್ಟ್ರವಾಗಿದೆ. ಆದರೆ ಹಾಲು ಮತ್ತು ಅದರ ಉತ್ಪನ್ನಗಳನ್ನು ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ</strong></p><p><strong>-ರಾಜೀವ್ ರಂಜನ್ ಸಿಂಗ್ ಕೇಂದ್ರ ಮೀನುಗಾರಿಕೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>