<p><strong>ನವದೆಹಲಿ</strong>: ‘ಸರ್ಕಾರದ ಆದಾಯ ಮತ್ತು ವೆಚ್ಚಗಳ ಲೆಕ್ಕ ಪರಿಶೋಧನೆಯ ಗುಣಮಟ್ಟದ ಸುಧಾರಣೆಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುವುದು’ ಎಂದು ಮಹಾ ಲೆಕ್ಕಪರಿಶೋಧಕ ಮತ್ತು ಮಹಾಲೇಖಪಾಲ (ಸಿಎಜಿ) ಗಿರೀಶ್ ಚಂದ್ರ ಮುರ್ಮು ತಿಳಿಸಿದ್ದಾರೆ.</p>.<p>‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಹೆಚ್ಚು ಪ್ರಚಲಿತದಲ್ಲಿದೆ. ಸಾರ್ವಜನಿಕ ವೆಚ್ಚದ ಗುಣಮಟ್ಟ ಹೆಚ್ಚಿಸಲು ಭಾರತೀಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಈ ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಸಿದ್ಧವಿದೆ’ ಎಂದು ಹೇಳಿದ್ದಾರೆ.</p>.<p>‘ತಂತ್ರಜ್ಞಾನ ಅಭಿವೃದ್ಧಿಯಾದಂತೆ ನಾವು ಕೂಡ ಅದಕ್ಕೆ ತಕ್ಕಹಾಗೆ ಅಭಿವೃದ್ಧಿ ಹೊಂದಬೇಕು. ಸವಾಲುಗಳನ್ನು ಎದುರಿಸಿ ಮೇಲುಗೈ ಸಾಧಿಸಬೇಕು. ಜಾಗತಿಕಮಟ್ಟದ ತಂತ್ರಜ್ಞಾನದ ಅನುಭವ ಪಡೆಯುವ ಜೊತೆಗೆ, ಅದರ ಬಳಕೆಯ ಅಭ್ಯಾಸವನ್ನು ಮಾಡಿಕೊಳ್ಳಬೇಕಿದೆ’ ಎಂದು ತಿಳಿಸಿದ್ದಾರೆ.</p>.<p>ಲೆಕ್ಕ ಪರಿಶೋಧನೆಯಲ್ಲಿ ಎ.ಐ ತಂತ್ರಜ್ಞಾನ ಸೇರಿ ಹೊಸ ತಂತ್ರಜ್ಞಾನಗಳ ಬಳಕೆಗೆ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಸರ್ಕಾರದ ಆದಾಯ ಮತ್ತು ವೆಚ್ಚಗಳ ಲೆಕ್ಕ ಪರಿಶೋಧನೆಯ ಗುಣಮಟ್ಟದ ಸುಧಾರಣೆಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುವುದು’ ಎಂದು ಮಹಾ ಲೆಕ್ಕಪರಿಶೋಧಕ ಮತ್ತು ಮಹಾಲೇಖಪಾಲ (ಸಿಎಜಿ) ಗಿರೀಶ್ ಚಂದ್ರ ಮುರ್ಮು ತಿಳಿಸಿದ್ದಾರೆ.</p>.<p>‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಹೆಚ್ಚು ಪ್ರಚಲಿತದಲ್ಲಿದೆ. ಸಾರ್ವಜನಿಕ ವೆಚ್ಚದ ಗುಣಮಟ್ಟ ಹೆಚ್ಚಿಸಲು ಭಾರತೀಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಈ ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಸಿದ್ಧವಿದೆ’ ಎಂದು ಹೇಳಿದ್ದಾರೆ.</p>.<p>‘ತಂತ್ರಜ್ಞಾನ ಅಭಿವೃದ್ಧಿಯಾದಂತೆ ನಾವು ಕೂಡ ಅದಕ್ಕೆ ತಕ್ಕಹಾಗೆ ಅಭಿವೃದ್ಧಿ ಹೊಂದಬೇಕು. ಸವಾಲುಗಳನ್ನು ಎದುರಿಸಿ ಮೇಲುಗೈ ಸಾಧಿಸಬೇಕು. ಜಾಗತಿಕಮಟ್ಟದ ತಂತ್ರಜ್ಞಾನದ ಅನುಭವ ಪಡೆಯುವ ಜೊತೆಗೆ, ಅದರ ಬಳಕೆಯ ಅಭ್ಯಾಸವನ್ನು ಮಾಡಿಕೊಳ್ಳಬೇಕಿದೆ’ ಎಂದು ತಿಳಿಸಿದ್ದಾರೆ.</p>.<p>ಲೆಕ್ಕ ಪರಿಶೋಧನೆಯಲ್ಲಿ ಎ.ಐ ತಂತ್ರಜ್ಞಾನ ಸೇರಿ ಹೊಸ ತಂತ್ರಜ್ಞಾನಗಳ ಬಳಕೆಗೆ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>