<p><strong>ಮುಂಬೈ:</strong> ‘ಶೀಘ್ರವೇ, ಕೇಂದ್ರ ಸರ್ಕಾರವು ಸಕ್ಕರೆ ಮೇಲಿನ ಕನಿಷ್ಠ ಮಾರಾಟ ದರವನ್ನು (ಎಂಎಸ್ಪಿ) ಹೆಚ್ಚಿಸಲಿದೆ’ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ತಿಳಿಸಿದ್ದಾರೆ.</p>.<p>ಅಖಿಲ ಭಾರತೀಯ ಸಕ್ಕರೆ ವ್ಯಾಪಾರ ಸಂಘದಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದರ ಹೆಚ್ಚಳ ಕುರಿತು ಚರ್ಚಿಸಲಾಗಿದೆ. ಮುಂಬರುವ ದಿನಗಳಲ್ಲಿ ಇದು ಕಾರ್ಯಗತಗೊಳ್ಳಲಿದೆ’ ಎಂದು ಹೇಳಿದರು. </p>.<p>2019ರಲ್ಲಿ ಪ್ರತಿ ಕೆ.ಜಿಗೆ ಮಾರಾಟ ದರವನ್ನು ₹31ಕ್ಕೆ ಹೆಚ್ಚಿಸಲಾಗಿತ್ತು. ಅಂದಿನಿಂದ ಇಲ್ಲಿಯವರೆಗೂ ದರ ಏರಿಕೆ ಮಾಡಿಲ್ಲ. ಆದರೆ, ಕೇಂದ್ರ ಸರ್ಕಾರವು ರೈತರಿಗೆ ಅನುಕೂಲ ಕಲ್ಪಿಸಲು ಕಬ್ಬಿಗೆ ನ್ಯಾಯಸಮ್ಮತ ಮತ್ತು ಪ್ರೋತ್ಸಾಹದಾಯಕ ದರವನ್ನು (ಎಫ್ಆರ್ಪಿ) ಹೆಚ್ಚಿಸಿದೆ ಎಂದರು.</p>.<p>ಸಕ್ಕರೆ ಉತ್ಪಾದನಾ ವೆಚ್ಚವು ಏರಿಕೆಯಾಗುತ್ತಿದೆ. ಇದರಿಂದ ಕಾರ್ಖಾನೆಗಳ ನಿರ್ವಹಣೆಗೆ ತೊಂದರೆಯಾಗುತ್ತಿದೆ. ಹಾಗಾಗಿ, ಪ್ರತಿ ಕೆ.ಜಿಗೆ ₹42 ಎಂಎಸ್ಪಿ ಏರಿಕೆ ಮಾಡಬೇಕು ಎಂದು ಸಹಕಾರಿ ಸಕ್ಕರೆ ಕಾರ್ಖಾನೆಗಳ ರಾಷ್ಟ್ರೀಯ ಒಕ್ಕೂಟ (ಎನ್ಎಫ್ಸಿಎಸ್ಎಫ್) ಒತ್ತಾಯಿಸಿದೆ. </p>.<p><strong>ಕಬ್ಬು ನಾಟಿ ಎಷ್ಟು?: </strong>2024–25ನೇ ಮಾರುಕಟ್ಟೆ ಋತುವಿನಲ್ಲಿ (ಅಕ್ಟೋಬರ್–ಸೆಪ್ಟೆಂಬರ್) ಸಕ್ಕರೆ ಉತ್ಪಾದನೆ ಹೆಚ್ಚಳವಾಗುವ ನಿರೀಕ್ಷೆಯಿದೆ. ಕಳೆದ ಮಾರುಕಟ್ಟೆ ವರ್ಷದಲ್ಲಿ ಇದೇ ಅವಧಿಯಲ್ಲಿ 57 ಲಕ್ಷ ಹೆಕ್ಟೇರ್ನಲ್ಲಿ ಕಬ್ಬು ನಾಟಿ ಮಾಡಲಾಗಿತ್ತು. ಈ ಬಾರಿ ಇಲ್ಲಿಯವರೆಗೆ 58 ಲಕ್ಷ ಹೆಕ್ಟೇರ್ನಲ್ಲಿ ನಾಟಿ ಕಾರ್ಯ ಪೂರ್ಣಗೊಂಡಿದೆ ಎಂದು ಚೋಪ್ರಾ ತಿಳಿಸಿದ್ದಾರೆ.</p>.<p>ದೇಶದಲ್ಲಿ 2022–23ರ ಮಾರುಕಟ್ಟೆ ವರ್ಷದಲ್ಲಿ 32.8 ದಶಲಕ್ಷ ಟನ್ನಷ್ಟು ಸಕ್ಕರೆ ಉತ್ಪಾದನೆಯಾಗಿತ್ತು. 2023–24ರಲ್ಲಿ 32 ದಶಲಕ್ಷ ಟನ್ ಉತ್ಪಾದನೆಯಾಗಿದೆ. ದೇಶೀಯ ಮಾರುಕಟ್ಟೆಯ ಬೇಡಿಕೆಯು 27 ದಶಲಕ್ಷ ಟನ್ ಆಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಶೀಘ್ರವೇ, ಕೇಂದ್ರ ಸರ್ಕಾರವು ಸಕ್ಕರೆ ಮೇಲಿನ ಕನಿಷ್ಠ ಮಾರಾಟ ದರವನ್ನು (ಎಂಎಸ್ಪಿ) ಹೆಚ್ಚಿಸಲಿದೆ’ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ತಿಳಿಸಿದ್ದಾರೆ.</p>.<p>ಅಖಿಲ ಭಾರತೀಯ ಸಕ್ಕರೆ ವ್ಯಾಪಾರ ಸಂಘದಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದರ ಹೆಚ್ಚಳ ಕುರಿತು ಚರ್ಚಿಸಲಾಗಿದೆ. ಮುಂಬರುವ ದಿನಗಳಲ್ಲಿ ಇದು ಕಾರ್ಯಗತಗೊಳ್ಳಲಿದೆ’ ಎಂದು ಹೇಳಿದರು. </p>.<p>2019ರಲ್ಲಿ ಪ್ರತಿ ಕೆ.ಜಿಗೆ ಮಾರಾಟ ದರವನ್ನು ₹31ಕ್ಕೆ ಹೆಚ್ಚಿಸಲಾಗಿತ್ತು. ಅಂದಿನಿಂದ ಇಲ್ಲಿಯವರೆಗೂ ದರ ಏರಿಕೆ ಮಾಡಿಲ್ಲ. ಆದರೆ, ಕೇಂದ್ರ ಸರ್ಕಾರವು ರೈತರಿಗೆ ಅನುಕೂಲ ಕಲ್ಪಿಸಲು ಕಬ್ಬಿಗೆ ನ್ಯಾಯಸಮ್ಮತ ಮತ್ತು ಪ್ರೋತ್ಸಾಹದಾಯಕ ದರವನ್ನು (ಎಫ್ಆರ್ಪಿ) ಹೆಚ್ಚಿಸಿದೆ ಎಂದರು.</p>.<p>ಸಕ್ಕರೆ ಉತ್ಪಾದನಾ ವೆಚ್ಚವು ಏರಿಕೆಯಾಗುತ್ತಿದೆ. ಇದರಿಂದ ಕಾರ್ಖಾನೆಗಳ ನಿರ್ವಹಣೆಗೆ ತೊಂದರೆಯಾಗುತ್ತಿದೆ. ಹಾಗಾಗಿ, ಪ್ರತಿ ಕೆ.ಜಿಗೆ ₹42 ಎಂಎಸ್ಪಿ ಏರಿಕೆ ಮಾಡಬೇಕು ಎಂದು ಸಹಕಾರಿ ಸಕ್ಕರೆ ಕಾರ್ಖಾನೆಗಳ ರಾಷ್ಟ್ರೀಯ ಒಕ್ಕೂಟ (ಎನ್ಎಫ್ಸಿಎಸ್ಎಫ್) ಒತ್ತಾಯಿಸಿದೆ. </p>.<p><strong>ಕಬ್ಬು ನಾಟಿ ಎಷ್ಟು?: </strong>2024–25ನೇ ಮಾರುಕಟ್ಟೆ ಋತುವಿನಲ್ಲಿ (ಅಕ್ಟೋಬರ್–ಸೆಪ್ಟೆಂಬರ್) ಸಕ್ಕರೆ ಉತ್ಪಾದನೆ ಹೆಚ್ಚಳವಾಗುವ ನಿರೀಕ್ಷೆಯಿದೆ. ಕಳೆದ ಮಾರುಕಟ್ಟೆ ವರ್ಷದಲ್ಲಿ ಇದೇ ಅವಧಿಯಲ್ಲಿ 57 ಲಕ್ಷ ಹೆಕ್ಟೇರ್ನಲ್ಲಿ ಕಬ್ಬು ನಾಟಿ ಮಾಡಲಾಗಿತ್ತು. ಈ ಬಾರಿ ಇಲ್ಲಿಯವರೆಗೆ 58 ಲಕ್ಷ ಹೆಕ್ಟೇರ್ನಲ್ಲಿ ನಾಟಿ ಕಾರ್ಯ ಪೂರ್ಣಗೊಂಡಿದೆ ಎಂದು ಚೋಪ್ರಾ ತಿಳಿಸಿದ್ದಾರೆ.</p>.<p>ದೇಶದಲ್ಲಿ 2022–23ರ ಮಾರುಕಟ್ಟೆ ವರ್ಷದಲ್ಲಿ 32.8 ದಶಲಕ್ಷ ಟನ್ನಷ್ಟು ಸಕ್ಕರೆ ಉತ್ಪಾದನೆಯಾಗಿತ್ತು. 2023–24ರಲ್ಲಿ 32 ದಶಲಕ್ಷ ಟನ್ ಉತ್ಪಾದನೆಯಾಗಿದೆ. ದೇಶೀಯ ಮಾರುಕಟ್ಟೆಯ ಬೇಡಿಕೆಯು 27 ದಶಲಕ್ಷ ಟನ್ ಆಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>