<p><strong>ತ್ರಿಶೂರ್:</strong> ಇಲ್ಲಿನ ಚಿನ್ನಾಭರಣ ತಯಾರಿಕಾ ಘಟಕಗಳ ಮೇಲೆ ಕೇರಳದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 120 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.</p>.<p>ಚಿನ್ನದ ಅಕ್ರಮ ವ್ಯಾಪಾರದ ಮೂಲಕ ತೆರಿಗೆ ವಂಚಿಸಲಾಗುತ್ತಿದೆ ಎಂಬ ಆರೋಪದ ಮೇರೆಗೆ ಬುಧವಾರದ ಸಂಜೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಗುರುವಾರ ಮುಕ್ತಾಯಗೊಂಡಿದೆ. </p>.<p>ಕೇರಳದಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆಗಳ ಪೈಕಿ ಇದು ಒಂದಾಗಿದ್ದು, 700ಕ್ಕೂ ಹೆಚ್ಚು ಅಧಿಕಾರಿಗಳು ಪಾಲ್ಗೊಂಡಿದ್ದರು. ತಯಾರಿಕಾ ಘಟಕಗಳು ಮತ್ತು ಆಭರಣ ತಯಾರಕರ ಮನೆಗಳು ಸೇರಿ 78 ಸ್ಥಳಗಳಲ್ಲಿ ದಾಳಿ ನಡೆದಿದೆ. </p>.<p>ತೆರಿಗೆ ಮತ್ತು ಶುಲ್ಕ ಪಾವತಿ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ಎಸಗಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜಿಎಸ್ಟಿ ವಿಶೇಷ ಆಯುಕ್ತ ಅಬ್ರಹಾಂ ರೆನ್ ಎಸ್. ಅವರು ಈ ರಹಸ್ಯ ಕಾರ್ಯಾಚರಣೆಯ ನೇತೃತ್ವವಹಿಸಿದ್ದರು. ತ್ರಿಶೂರ್ನಲ್ಲಿ ತರಬೇತಿ ಕಾರ್ಯಕ್ರಮವಿದೆ. ಎಲ್ಲರೂ ಇದರಲ್ಲಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸಂದೇಶ ರವಾನಿಸಲಾಗಿತ್ತು. ದಾಳಿ ಬಗ್ಗೆ ಅಂತಿಮ ಕ್ಷಣದವರೆಗೂ ಹಿರಿಯ ಅಧಿಕಾರಿಗಳು ಗುಟ್ಟು ಬಿಟ್ಟುಕೊಟ್ಟಿರಲಿಲ್ಲ ಎಂದು ಹೇಳಲಾಗಿದೆ.</p>.<p>ರಾಜ್ಯದ ವಿವಿಧೆಡೆಯಿಂದ ಬಸ್ಗಳ ಮೂಲಕ ಅಧಿಕಾರಿಗಳು ಆಗಮಿಸಿದ್ದರು. ಈ ಬಸ್ಗಳಿಗೆ ‘ಅಧ್ಯಯನ ಪ್ರವಾಸ’ ಎಂದು ಬ್ಯಾನರ್ ಅಳವಡಿಸಲಾಗಿತ್ತು.</p>.<p>ಕಾರ್ಯಾಚರಣೆಗೆ ‘ಟೊರೆ ಡೆಲ್ ಓರೊ’ ಎಂದು ಹೆಸರಿಸಲಾಗಿತ್ತು. ಇದು ಸ್ಪೇನ್ನಲ್ಲಿರುವ ‘ಗೋಲ್ಡನ್ ಟವರ್’ನ ಹೆಸರಾಗಿದೆ.</p>.<p>ತ್ರಿಶೂರ್ ಕೇರಳದ ಚಿನ್ನಾಭರಣದ ರಾಜಧಾನಿ ಎಂದು ಪ್ರಸಿದ್ಧಿ ಪಡೆದಿದೆ. ರಾಜ್ಯದ ಶೇ 70ರಷ್ಟು ಚಿನ್ನಾಭರಣದ ವಹಿವಾಟು ಇಲ್ಲಿ ನಡೆಯುತ್ತದೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಜಿಎಸ್ಟಿ ಗುಪ್ತಚರ ವಿಭಾಗದ ಉಪ ಆಯುಕ್ತ ದಿನೇಶ್ ಕುಮಾರ್, ಅಕ್ರಮ ಚಟುವಟಿಕೆ ಮೇಲೆ ಕಾರ್ಯಾಚರಣೆಯನ್ನು ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.</p>.<p>‘ಕೆಲವು ಸ್ಥಳಗಳಲ್ಲಿ ದಾಳಿಗೆ ಹೆದರಿ ಕೆಲಸಗಾರರು ಚಿನ್ನದೊಟ್ಟಿಗೆ ಓಡಿ ಹೋಗುತ್ತಿದ್ದರು. ಅವರನ್ನು ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆಯಲಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶೂರ್:</strong> ಇಲ್ಲಿನ ಚಿನ್ನಾಭರಣ ತಯಾರಿಕಾ ಘಟಕಗಳ ಮೇಲೆ ಕೇರಳದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 120 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.</p>.<p>ಚಿನ್ನದ ಅಕ್ರಮ ವ್ಯಾಪಾರದ ಮೂಲಕ ತೆರಿಗೆ ವಂಚಿಸಲಾಗುತ್ತಿದೆ ಎಂಬ ಆರೋಪದ ಮೇರೆಗೆ ಬುಧವಾರದ ಸಂಜೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಗುರುವಾರ ಮುಕ್ತಾಯಗೊಂಡಿದೆ. </p>.<p>ಕೇರಳದಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆಗಳ ಪೈಕಿ ಇದು ಒಂದಾಗಿದ್ದು, 700ಕ್ಕೂ ಹೆಚ್ಚು ಅಧಿಕಾರಿಗಳು ಪಾಲ್ಗೊಂಡಿದ್ದರು. ತಯಾರಿಕಾ ಘಟಕಗಳು ಮತ್ತು ಆಭರಣ ತಯಾರಕರ ಮನೆಗಳು ಸೇರಿ 78 ಸ್ಥಳಗಳಲ್ಲಿ ದಾಳಿ ನಡೆದಿದೆ. </p>.<p>ತೆರಿಗೆ ಮತ್ತು ಶುಲ್ಕ ಪಾವತಿ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ಎಸಗಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜಿಎಸ್ಟಿ ವಿಶೇಷ ಆಯುಕ್ತ ಅಬ್ರಹಾಂ ರೆನ್ ಎಸ್. ಅವರು ಈ ರಹಸ್ಯ ಕಾರ್ಯಾಚರಣೆಯ ನೇತೃತ್ವವಹಿಸಿದ್ದರು. ತ್ರಿಶೂರ್ನಲ್ಲಿ ತರಬೇತಿ ಕಾರ್ಯಕ್ರಮವಿದೆ. ಎಲ್ಲರೂ ಇದರಲ್ಲಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸಂದೇಶ ರವಾನಿಸಲಾಗಿತ್ತು. ದಾಳಿ ಬಗ್ಗೆ ಅಂತಿಮ ಕ್ಷಣದವರೆಗೂ ಹಿರಿಯ ಅಧಿಕಾರಿಗಳು ಗುಟ್ಟು ಬಿಟ್ಟುಕೊಟ್ಟಿರಲಿಲ್ಲ ಎಂದು ಹೇಳಲಾಗಿದೆ.</p>.<p>ರಾಜ್ಯದ ವಿವಿಧೆಡೆಯಿಂದ ಬಸ್ಗಳ ಮೂಲಕ ಅಧಿಕಾರಿಗಳು ಆಗಮಿಸಿದ್ದರು. ಈ ಬಸ್ಗಳಿಗೆ ‘ಅಧ್ಯಯನ ಪ್ರವಾಸ’ ಎಂದು ಬ್ಯಾನರ್ ಅಳವಡಿಸಲಾಗಿತ್ತು.</p>.<p>ಕಾರ್ಯಾಚರಣೆಗೆ ‘ಟೊರೆ ಡೆಲ್ ಓರೊ’ ಎಂದು ಹೆಸರಿಸಲಾಗಿತ್ತು. ಇದು ಸ್ಪೇನ್ನಲ್ಲಿರುವ ‘ಗೋಲ್ಡನ್ ಟವರ್’ನ ಹೆಸರಾಗಿದೆ.</p>.<p>ತ್ರಿಶೂರ್ ಕೇರಳದ ಚಿನ್ನಾಭರಣದ ರಾಜಧಾನಿ ಎಂದು ಪ್ರಸಿದ್ಧಿ ಪಡೆದಿದೆ. ರಾಜ್ಯದ ಶೇ 70ರಷ್ಟು ಚಿನ್ನಾಭರಣದ ವಹಿವಾಟು ಇಲ್ಲಿ ನಡೆಯುತ್ತದೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಜಿಎಸ್ಟಿ ಗುಪ್ತಚರ ವಿಭಾಗದ ಉಪ ಆಯುಕ್ತ ದಿನೇಶ್ ಕುಮಾರ್, ಅಕ್ರಮ ಚಟುವಟಿಕೆ ಮೇಲೆ ಕಾರ್ಯಾಚರಣೆಯನ್ನು ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.</p>.<p>‘ಕೆಲವು ಸ್ಥಳಗಳಲ್ಲಿ ದಾಳಿಗೆ ಹೆದರಿ ಕೆಲಸಗಾರರು ಚಿನ್ನದೊಟ್ಟಿಗೆ ಓಡಿ ಹೋಗುತ್ತಿದ್ದರು. ಅವರನ್ನು ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆಯಲಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>