ಅಂಬಾರಿ ಬಸ್ನಲ್ಲಿಯೇ ಕುಳಿತು, ಬನ್ನಿಮಂಟಪದಲ್ಲಿ ನಡೆದ ಡ್ರೋನ್ ಶೋ ವೀಕ್ಷಿಸಿದರು.
ರಾಮಸ್ವಾಮಿ ವೃತ್ತದಿಂದ ಆರಂಭವಾದ ದೀಪಾಲಂಕಾರ ವೀಕ್ಷಣೆಯು ಬಸವೇಶ್ವರ ವೃತ್ತ, ಜೆಎಸ್ಎಸ್ ಮಹಾವಿದ್ಯಾಪೀಠ ವೃತ್ತ, ಹಾರ್ಡಿಂಜ್ ಸರ್ಕಲ್, ಕೆ.ಆರ್.ಸರ್ಕಲ್, ಆಯುರ್ವೇದ ಕಾಲೇಜು ವೃತ್ತ, ಹೈವೆ ವೃತ್ತದ ಮೂಲಕ ಸಾಗಿ ಎಲ್ಐಸಿ ವೃತ್ತದಲ್ಲಿ ಮುಕ್ತಾಯಗೊಂಡಿತು.
ತಮ್ಮ ಜೊತೆಗಿದ್ದ ಸಚಿವರಿಗೆ ಮೈಸೂರಿನ ಅರಮನೆ ಹಾಗೂ ಮಾರ್ಗ ಮಧ್ಯದ ಸ್ಥಳಗಳ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರೇ ವಿವರಿಸಿ, ಅದರ ಹಿನ್ನೆಲೆ ಹಾಗೂ ಮಹತ್ವವನ್ನು ತಿಳಿಸಿಕೊಟ್ಟಿದ್ದು ವಿಶೇಷವಾಗಿತ್ತು.