<p><strong>ಮುಧೋಳ:</strong> ‘ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಎಫ್ಆರ್ಪಿ ದರ ನಿಗದಿ ಮಾಡಿರುವುದು ಸಾಲುವುದಿಲ್ಲ. ಇದು ರೈತರಿಗೆ ಮಾಡಿರುವ ಅನ್ಯಾಯದ ಪರಮಾವಧಿ’ ಎಂದು ಕರ್ನಾಟಕ ರಾಜ್ಯ ಕಬ್ಬು ನಿಯಂತ್ರಣ ಮಂಡಳಿಯ ಮಾಜಿ ಸದಸ್ಯ ಸುಭಾಷ ಶಿರಬೂರ ಅಭಿಪ್ರಾಯಪಟ್ಟಿದ್ದಾರೆ.</p>.<p>ಕೇಂದ್ರ ಸರ್ಕಾರ ಕಬ್ಬು ಬೆಳೆಗಾರ ಮಾಡುವ ವೆಚ್ಚ, ರಾಸಾಯನಿಕ ಗೊಬ್ಬರ ಹಾಗೂ ನಿರ್ವಹಣೆಯೊಂದಿಗೆ ಲಾಭಾಂಶ ಇಟ್ಟು ಎಫ್ಆರ್ಪಿ ದರವನ್ನು ನಿಗದಿ ಮಾಡಬೇಕು ಎಂಬ ನಿಯಮವಿದ್ದರೂ ವಾಸ್ತವಾಂಶ ಅರಿಯದೇ ಎಲ್ಲೋ ಕುಳಿತು ಎಫ್ಆರ್ಪಿ ದರ ನಿಗದಿ ಮಾಡುವುದರಿಂದ ರೈತರಿಗೆ ಅನ್ಯಾಯವಾಗಿದೆ. 2023-24 ಸಾಲಿಗೆ ಕೇವಲ ಪ್ರತಿ ಟನ್ ಕಬ್ಬಿಗೆ ₹ 100ರಷ್ಟು ಹೆಚ್ಚಳ ಮಾಡಿದ್ದಾರೆ. ಇದರಿಂದ ರೈತ ಮಾಡಿರುವ ವೆಚ್ಚವೂ ಹಿಂದಿರುಗುವುದಿಲ್ಲ ಎಂದು ದೂರಿದ್ದಾರೆ.</p>.<p>2022-23ನೇ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹ 3,050 ಎಫ್ಆರ್ಪಿ ದರ ನಿಗದಿ ಮಾಡಿದ್ದರು. ಪ್ರಸಕ್ತ ವರ್ಷ ಸಕ್ಕರೆ ಇಳುವರಿ ಶೇ 10.25ಕ್ಕೆ ಪ್ರತಿ ಟನ್ ಕಬ್ಬಿಗೆ ₹ 3,150 ಎಫ್ಆರ್ಪಿ ದರ ನಿಗದಿ ಮಾಡಿದ್ದರಿಂದ ರೈತರಿಗೆ ಅನ್ಯಾಯವಾಗಿದೆ. ತೋಟದಲ್ಲಿ ರೈತ ಮಾಡುವ ವೆಚ್ಚವನ್ನು ಪರಿಗಣನೆಗೆ ತೆಗೆದುಕೊಂಡು ಶೇ 9.5 ಸಕ್ಕರೆ ಇಳುವರಿ ಹೊಂದಿರುವ ಪ್ರತಿ ಟನ್ ಕಬ್ಬಿಗೆ ₹ 4,300 ನಿಗದಿ ಮಾಡಿದಾಗ ಮಾತ್ರ ರೈತರಿಗೆ ಲಾಭವಾಗಬಲ್ಲದು ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಕೇಂದ್ರ ಸರ್ಕಾರ ಈ ವಿಷಯದಲ್ಲಿ ಮರುಚಿಂತನೆ ಹಾಗೂ ವಾಸ್ತವ ವೆಚ್ಚದ ಆಧಾರದಲ್ಲಿ ಎಫ್ಆರ್ಪಿ ದರ ನಿಗದಿ ಮಾಡಬೇಕು ಎಂದು ಅವರು ನೀಡಿರುವ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.</p>.<p>undefined undefined</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಧೋಳ:</strong> ‘ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಎಫ್ಆರ್ಪಿ ದರ ನಿಗದಿ ಮಾಡಿರುವುದು ಸಾಲುವುದಿಲ್ಲ. ಇದು ರೈತರಿಗೆ ಮಾಡಿರುವ ಅನ್ಯಾಯದ ಪರಮಾವಧಿ’ ಎಂದು ಕರ್ನಾಟಕ ರಾಜ್ಯ ಕಬ್ಬು ನಿಯಂತ್ರಣ ಮಂಡಳಿಯ ಮಾಜಿ ಸದಸ್ಯ ಸುಭಾಷ ಶಿರಬೂರ ಅಭಿಪ್ರಾಯಪಟ್ಟಿದ್ದಾರೆ.</p>.<p>ಕೇಂದ್ರ ಸರ್ಕಾರ ಕಬ್ಬು ಬೆಳೆಗಾರ ಮಾಡುವ ವೆಚ್ಚ, ರಾಸಾಯನಿಕ ಗೊಬ್ಬರ ಹಾಗೂ ನಿರ್ವಹಣೆಯೊಂದಿಗೆ ಲಾಭಾಂಶ ಇಟ್ಟು ಎಫ್ಆರ್ಪಿ ದರವನ್ನು ನಿಗದಿ ಮಾಡಬೇಕು ಎಂಬ ನಿಯಮವಿದ್ದರೂ ವಾಸ್ತವಾಂಶ ಅರಿಯದೇ ಎಲ್ಲೋ ಕುಳಿತು ಎಫ್ಆರ್ಪಿ ದರ ನಿಗದಿ ಮಾಡುವುದರಿಂದ ರೈತರಿಗೆ ಅನ್ಯಾಯವಾಗಿದೆ. 2023-24 ಸಾಲಿಗೆ ಕೇವಲ ಪ್ರತಿ ಟನ್ ಕಬ್ಬಿಗೆ ₹ 100ರಷ್ಟು ಹೆಚ್ಚಳ ಮಾಡಿದ್ದಾರೆ. ಇದರಿಂದ ರೈತ ಮಾಡಿರುವ ವೆಚ್ಚವೂ ಹಿಂದಿರುಗುವುದಿಲ್ಲ ಎಂದು ದೂರಿದ್ದಾರೆ.</p>.<p>2022-23ನೇ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹ 3,050 ಎಫ್ಆರ್ಪಿ ದರ ನಿಗದಿ ಮಾಡಿದ್ದರು. ಪ್ರಸಕ್ತ ವರ್ಷ ಸಕ್ಕರೆ ಇಳುವರಿ ಶೇ 10.25ಕ್ಕೆ ಪ್ರತಿ ಟನ್ ಕಬ್ಬಿಗೆ ₹ 3,150 ಎಫ್ಆರ್ಪಿ ದರ ನಿಗದಿ ಮಾಡಿದ್ದರಿಂದ ರೈತರಿಗೆ ಅನ್ಯಾಯವಾಗಿದೆ. ತೋಟದಲ್ಲಿ ರೈತ ಮಾಡುವ ವೆಚ್ಚವನ್ನು ಪರಿಗಣನೆಗೆ ತೆಗೆದುಕೊಂಡು ಶೇ 9.5 ಸಕ್ಕರೆ ಇಳುವರಿ ಹೊಂದಿರುವ ಪ್ರತಿ ಟನ್ ಕಬ್ಬಿಗೆ ₹ 4,300 ನಿಗದಿ ಮಾಡಿದಾಗ ಮಾತ್ರ ರೈತರಿಗೆ ಲಾಭವಾಗಬಲ್ಲದು ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಕೇಂದ್ರ ಸರ್ಕಾರ ಈ ವಿಷಯದಲ್ಲಿ ಮರುಚಿಂತನೆ ಹಾಗೂ ವಾಸ್ತವ ವೆಚ್ಚದ ಆಧಾರದಲ್ಲಿ ಎಫ್ಆರ್ಪಿ ದರ ನಿಗದಿ ಮಾಡಬೇಕು ಎಂದು ಅವರು ನೀಡಿರುವ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.</p>.<p>undefined undefined</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>