<p><strong>ಬಾಗಲಕೋಟೆ</strong>: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಹಲವಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವವರ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಉಪನ್ಯಾಸಕರು ಕಾಲೇಜಿಗೆ ಗೈರು ಹಾಜರಾಗಿರುವುದರಿಂದ ವಿದ್ಯಾರ್ಥಿಗಳು ಪಾಠಗಳಲ್ಲಿದೇ ಪರದಾಡುವಂತಾಗಿದೆ.</p>.<p>ಜಿಲ್ಲೆಯಲ್ಲಿನ ಬಹುತೇಕ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಸಂಖ್ಯೆ ಬಹಳ ಕಡಿಮೆ ಇದ್ದು, ಅತಿಥಿ ಉಪನ್ಯಾಸಕರನ್ನೇ ನೆಚ್ಚಿಕೊಂಡಿವೆ. ಅವರು ಬೋಧನೆ ಕಾರ್ಯದಿಂದ ದೂರ ಉಳಿದಿರುವುದರಿಂದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಂದ ಬರುತ್ತಿರುವ ವಿದ್ಯಾರ್ಥಿಗಳಿಗೆ ಪಾಠ ಕೇಳುವ ಭಾಗ್ಯವಿಲ್ಲದಂತಾಗಿದೆ.</p>.<p>ಅತಿಥಿ ಉಪನ್ಯಾಸಕರು ಗೈರಾಗಿರುವುದು ಒಂದೆಡೆಯಾಗಿದ್ದರೆ, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೌಲ್ಯಮಾಪನ ನಡೆಯುತ್ತಿರುವುದರಿಂದ ಕಾಯಂ ಉಪನ್ಯಾಸಕರು ಅಲ್ಲಿಗೆ ತೆರಳಿದ್ದು, ಕಾಲೇಜುಗಳಲ್ಲಿ ಪಾಠ ಮಾಡುವವರೇ ಇಲ್ಲದಂತಾಗಿದೆ.</p>.<p>ಜಮಖಂಡಿಯ ಸರ್ಕಾರಿ ಪದವಿ ಮಹಿಳಾ ಕಾಲೇಜಿನಲ್ಲಿ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. 20 ಕಾಯಂ ಉಪನ್ಯಾಸಕರಿದ್ದರೆ, 50 ಮಂದಿ ಅತಿಥಿ ಉಪನ್ಯಾಸಕರಿದ್ದರು. ಅವರೆಲ್ಲ ನಾಲ್ಕು ದಿನಗಳಿಂದ ಮುಷ್ಕರದಲ್ಲಿ ಭಾಗಿಯಾಗಿರುವುದರಿಂದ ಕಾಟಾಚಾರಕ್ಕೆ ತರಗತಿಗಳು ನಡೆಯುತ್ತಿವೆ. </p>.<p>20 ಮಂದಿ ಕಾಯಂ ಉಪನ್ಯಾಸಕರಲ್ಲಿ ಐವರು ಮೌಲ್ಯಮಾಪನ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಹೀಗಾಗಿ, ಲಭ್ಯವಿರುವ ಉಪನ್ಯಾಸಕರು, ಒಂದೇ ಹಾಲ್ನಲ್ಲಿ ಮೂರ್ನಾಲ್ಕು ತರಗತಿಯ ವಿದ್ಯಾರ್ಥಿಗಳು ಕೂಡಿಸಿಕೊಂಡು ಪಾಠ ಮಾಡುತ್ತಿದ್ದಾರೆ.</p>.<p>ಬಾಗಲಕೋಟೆಯ ಸರ್ಕಾರಿ ಪದವಿ ಮಹಿಳಾ ಕಾಲೇಜಿನ ಪರಿಸ್ಥಿತಿಯೂ ಭಿನ್ನವಾಗಿಲ್ಲ. ಇಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರಿದ್ದಾರೆ. ಅವರೆಲ್ಲರೂ ಗೈರಾಗಿರುವುದರಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ನಿತ್ಯವೂ ವಿದ್ಯಾರ್ಥಿಗಳು ಬಂದ್ ಒಂದೆರಡು ತರಗತಿಗೆ ಹಾಜರಾಗಿ ವಾಪಸ್ ಹೋಗುತ್ತಿದ್ದಾರೆ.</p>.<p>ರಬಕವಿ ಬನಹಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಬ್ಬರು ಕಾಯಂ ಉಪನ್ಯಾಸಕರಿದ್ದಾರೆ. ಅದರಲ್ಲಿ ಒಬ್ಬರು ಪ್ರಾಚಾರ್ಯರಿದ್ದಾರೆ. ಉಳಿದವರೆಲ್ಲರೂ ಅತಿಥಿ ಉಪನ್ಯಾಸಕರು. ಉಪನ್ಯಾಸಕರೂ ಮುಷ್ಕರದಲ್ಲಿ ಭಾಗವಹಿಸಿದ್ದರಿಂದ ಕಾಲೇಜು ವಿಧ್ಯಾರ್ಥಿಗಳಿಲ್ಲದೇ ಬಿಕೋ ಎನ್ನುತ್ತಿದೆ.</p>.<p>ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರೊಂದಿಗೆ ಮಾತುಕತೆ ನಡೆಸಿ, ತರಗತಿಗಳು ನಡೆಯುವಂತೆ ಮಾಡಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹ.</p> .<div><blockquote>ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇವೆ. ನಮ್ಮ ಸೇವೆಯನ್ನು ಕಾಯಂ ಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಬೇಕು </blockquote><span class="attribution">ಚಂದ್ರಶೇಖರ ಕಾಳನ್ನವರ ಅತಿಥಿ ಉಪನ್ಯಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಹಲವಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವವರ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಉಪನ್ಯಾಸಕರು ಕಾಲೇಜಿಗೆ ಗೈರು ಹಾಜರಾಗಿರುವುದರಿಂದ ವಿದ್ಯಾರ್ಥಿಗಳು ಪಾಠಗಳಲ್ಲಿದೇ ಪರದಾಡುವಂತಾಗಿದೆ.</p>.<p>ಜಿಲ್ಲೆಯಲ್ಲಿನ ಬಹುತೇಕ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಸಂಖ್ಯೆ ಬಹಳ ಕಡಿಮೆ ಇದ್ದು, ಅತಿಥಿ ಉಪನ್ಯಾಸಕರನ್ನೇ ನೆಚ್ಚಿಕೊಂಡಿವೆ. ಅವರು ಬೋಧನೆ ಕಾರ್ಯದಿಂದ ದೂರ ಉಳಿದಿರುವುದರಿಂದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಂದ ಬರುತ್ತಿರುವ ವಿದ್ಯಾರ್ಥಿಗಳಿಗೆ ಪಾಠ ಕೇಳುವ ಭಾಗ್ಯವಿಲ್ಲದಂತಾಗಿದೆ.</p>.<p>ಅತಿಥಿ ಉಪನ್ಯಾಸಕರು ಗೈರಾಗಿರುವುದು ಒಂದೆಡೆಯಾಗಿದ್ದರೆ, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೌಲ್ಯಮಾಪನ ನಡೆಯುತ್ತಿರುವುದರಿಂದ ಕಾಯಂ ಉಪನ್ಯಾಸಕರು ಅಲ್ಲಿಗೆ ತೆರಳಿದ್ದು, ಕಾಲೇಜುಗಳಲ್ಲಿ ಪಾಠ ಮಾಡುವವರೇ ಇಲ್ಲದಂತಾಗಿದೆ.</p>.<p>ಜಮಖಂಡಿಯ ಸರ್ಕಾರಿ ಪದವಿ ಮಹಿಳಾ ಕಾಲೇಜಿನಲ್ಲಿ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. 20 ಕಾಯಂ ಉಪನ್ಯಾಸಕರಿದ್ದರೆ, 50 ಮಂದಿ ಅತಿಥಿ ಉಪನ್ಯಾಸಕರಿದ್ದರು. ಅವರೆಲ್ಲ ನಾಲ್ಕು ದಿನಗಳಿಂದ ಮುಷ್ಕರದಲ್ಲಿ ಭಾಗಿಯಾಗಿರುವುದರಿಂದ ಕಾಟಾಚಾರಕ್ಕೆ ತರಗತಿಗಳು ನಡೆಯುತ್ತಿವೆ. </p>.<p>20 ಮಂದಿ ಕಾಯಂ ಉಪನ್ಯಾಸಕರಲ್ಲಿ ಐವರು ಮೌಲ್ಯಮಾಪನ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಹೀಗಾಗಿ, ಲಭ್ಯವಿರುವ ಉಪನ್ಯಾಸಕರು, ಒಂದೇ ಹಾಲ್ನಲ್ಲಿ ಮೂರ್ನಾಲ್ಕು ತರಗತಿಯ ವಿದ್ಯಾರ್ಥಿಗಳು ಕೂಡಿಸಿಕೊಂಡು ಪಾಠ ಮಾಡುತ್ತಿದ್ದಾರೆ.</p>.<p>ಬಾಗಲಕೋಟೆಯ ಸರ್ಕಾರಿ ಪದವಿ ಮಹಿಳಾ ಕಾಲೇಜಿನ ಪರಿಸ್ಥಿತಿಯೂ ಭಿನ್ನವಾಗಿಲ್ಲ. ಇಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರಿದ್ದಾರೆ. ಅವರೆಲ್ಲರೂ ಗೈರಾಗಿರುವುದರಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ನಿತ್ಯವೂ ವಿದ್ಯಾರ್ಥಿಗಳು ಬಂದ್ ಒಂದೆರಡು ತರಗತಿಗೆ ಹಾಜರಾಗಿ ವಾಪಸ್ ಹೋಗುತ್ತಿದ್ದಾರೆ.</p>.<p>ರಬಕವಿ ಬನಹಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಬ್ಬರು ಕಾಯಂ ಉಪನ್ಯಾಸಕರಿದ್ದಾರೆ. ಅದರಲ್ಲಿ ಒಬ್ಬರು ಪ್ರಾಚಾರ್ಯರಿದ್ದಾರೆ. ಉಳಿದವರೆಲ್ಲರೂ ಅತಿಥಿ ಉಪನ್ಯಾಸಕರು. ಉಪನ್ಯಾಸಕರೂ ಮುಷ್ಕರದಲ್ಲಿ ಭಾಗವಹಿಸಿದ್ದರಿಂದ ಕಾಲೇಜು ವಿಧ್ಯಾರ್ಥಿಗಳಿಲ್ಲದೇ ಬಿಕೋ ಎನ್ನುತ್ತಿದೆ.</p>.<p>ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರೊಂದಿಗೆ ಮಾತುಕತೆ ನಡೆಸಿ, ತರಗತಿಗಳು ನಡೆಯುವಂತೆ ಮಾಡಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹ.</p> .<div><blockquote>ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇವೆ. ನಮ್ಮ ಸೇವೆಯನ್ನು ಕಾಯಂ ಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಬೇಕು </blockquote><span class="attribution">ಚಂದ್ರಶೇಖರ ಕಾಳನ್ನವರ ಅತಿಥಿ ಉಪನ್ಯಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>