<p><strong>ಬಾಗಲಕೋಟೆ: ’</strong>ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಆನೆ ಬಲ ಬಂದಿದೆ. ಬಾಗಲಕೋಟೆಯಲ್ಲಿಯೂ ಎರಡೂ ಪಕ್ಷಗಳ ಸಮನ್ವಯ ಸಮಿತಿ ರಚಿಸಿಕೊಂಡು ಒಗ್ಗಟ್ಟಾಗಿ ಚುನಾವಣೆ ಎದುರಿಸಲಾಗುವುದು‘ ಎಂದು ಸಂಸದ, ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಹೇಳಿದರು.</p>.<p>ಗುರುವಾರ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಜಿಲ್ಲೆಯಲ್ಲಿ ಪ್ರಬಲವಾಗಿರುವ ಬಿಜೆಪಿಯೊಂದಿಗೆ ಜೆಡಿಎಸ್ ಕೈಜೋಡಿಸಿರುವುದರಿಂದ ಗೆಲುವು ನಿಶ್ಚಿತವಾಗಿದೆ‘ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>’20 ವರ್ಷಗಳಲ್ಲಿ ಮಾಡಿರುವ ಸಾಧನೆಗಳನ್ನು ಜನರಿಗೆ ಮನದಟ್ಟಾಗಿವೆ. ಜನತೆಗೂ ನಾನು ಏನು ಎನ್ನುವುದು ಗೊತ್ತಾಗಿದೆ. ಕೇಂದ್ರ ಸರ್ಕಾರದ ಸಾಧನೆಗಳು ಜನ ಸಾಮಾನ್ಯರಿಗೆ ತಲುಪಿವೆ‘ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ’ಶುಕ್ರವಾರ ಎರಡೂ ಪಕ್ಷಗಳ ಮುಖಂಡರು ಸಮನ್ವಯ ಸಮಿತಿ ಸಭೆ ನಡೆಸಲಿದ್ದೇವೆ. ಅಲ್ಲಿ ಪ್ರಚಾರದ ರೂಪರೇಷೆಗಳ ರಚಿಸಿಕೊಂಡು ಪ್ರಚಾರಕ್ಕೆ ಇಳಿಯಲಿದ್ದೇವೆ‘ ಎಂದರು. </p>.<p>ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತ ಮಾವಿನಮರದ ಮಾತನಾಡಿ, ‘ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗುವುದು. ಎನ್ಡಿಎ ಅಭ್ಯರ್ಥಿ ಗದ್ದಿಗೌಡರ ಅವರನ್ನು ಗೆಲ್ಲಿಸಲಿದ್ದೇವೆ’ ಎಂದು ಹೇಳಿದರು.</p>.<p>ಶಾಸಕ ಸಿದ್ದು ಸವದಿ ಮಾತನಾಡಿ, ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬರುವವರನ್ನು ಸೇರಿಸಿಕೊಳ್ಳುತ್ತೇವೆ ಎಂದರು.</p>.<p>ಮುಖಂಡರಾದ ಬಸವರಾಜ ಯಂಕಂಚಿ, ರಾಜು ನಾಯ್ಕರ್, ಬಿ.ಪಿ. ಹಳ್ಳೂರ, ಚಂದ್ರಕಾಂತ ಶೇಖಾ, ಸಲೀಂ ಮೋಮಿನ್, ಕೃಷ್ಣಾ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: ’</strong>ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಆನೆ ಬಲ ಬಂದಿದೆ. ಬಾಗಲಕೋಟೆಯಲ್ಲಿಯೂ ಎರಡೂ ಪಕ್ಷಗಳ ಸಮನ್ವಯ ಸಮಿತಿ ರಚಿಸಿಕೊಂಡು ಒಗ್ಗಟ್ಟಾಗಿ ಚುನಾವಣೆ ಎದುರಿಸಲಾಗುವುದು‘ ಎಂದು ಸಂಸದ, ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಹೇಳಿದರು.</p>.<p>ಗುರುವಾರ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಜಿಲ್ಲೆಯಲ್ಲಿ ಪ್ರಬಲವಾಗಿರುವ ಬಿಜೆಪಿಯೊಂದಿಗೆ ಜೆಡಿಎಸ್ ಕೈಜೋಡಿಸಿರುವುದರಿಂದ ಗೆಲುವು ನಿಶ್ಚಿತವಾಗಿದೆ‘ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>’20 ವರ್ಷಗಳಲ್ಲಿ ಮಾಡಿರುವ ಸಾಧನೆಗಳನ್ನು ಜನರಿಗೆ ಮನದಟ್ಟಾಗಿವೆ. ಜನತೆಗೂ ನಾನು ಏನು ಎನ್ನುವುದು ಗೊತ್ತಾಗಿದೆ. ಕೇಂದ್ರ ಸರ್ಕಾರದ ಸಾಧನೆಗಳು ಜನ ಸಾಮಾನ್ಯರಿಗೆ ತಲುಪಿವೆ‘ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ’ಶುಕ್ರವಾರ ಎರಡೂ ಪಕ್ಷಗಳ ಮುಖಂಡರು ಸಮನ್ವಯ ಸಮಿತಿ ಸಭೆ ನಡೆಸಲಿದ್ದೇವೆ. ಅಲ್ಲಿ ಪ್ರಚಾರದ ರೂಪರೇಷೆಗಳ ರಚಿಸಿಕೊಂಡು ಪ್ರಚಾರಕ್ಕೆ ಇಳಿಯಲಿದ್ದೇವೆ‘ ಎಂದರು. </p>.<p>ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತ ಮಾವಿನಮರದ ಮಾತನಾಡಿ, ‘ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗುವುದು. ಎನ್ಡಿಎ ಅಭ್ಯರ್ಥಿ ಗದ್ದಿಗೌಡರ ಅವರನ್ನು ಗೆಲ್ಲಿಸಲಿದ್ದೇವೆ’ ಎಂದು ಹೇಳಿದರು.</p>.<p>ಶಾಸಕ ಸಿದ್ದು ಸವದಿ ಮಾತನಾಡಿ, ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬರುವವರನ್ನು ಸೇರಿಸಿಕೊಳ್ಳುತ್ತೇವೆ ಎಂದರು.</p>.<p>ಮುಖಂಡರಾದ ಬಸವರಾಜ ಯಂಕಂಚಿ, ರಾಜು ನಾಯ್ಕರ್, ಬಿ.ಪಿ. ಹಳ್ಳೂರ, ಚಂದ್ರಕಾಂತ ಶೇಖಾ, ಸಲೀಂ ಮೋಮಿನ್, ಕೃಷ್ಣಾ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>