<p><strong>ಹುನಗುಂದ</strong>: ಪಂಚಾಯತ್ ರಾಜ್ ವ್ಯವಸ್ಥೆ ಆರಂಭಿಸಿದ್ದು, ಬಲಪಡಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.</p>.<p>ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಹುನಗುಂದ ಮತ್ತು ಇಳಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯ್ತಿ, ಪಿಕೆಪಿಎಸ್ ಅಧ್ಯಕ್ಷ ಹಾಗೂ ಉಪಾದ್ಯಕ್ಷರಿಗೆ ಸನ್ಮಾನ ಸಮಾರಂಭ ಹಾಗೂ ಸಮಾಲೋಚನೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸನ್ನು ಸಾಕಾರಗೊಳಿಸಿ ಪಂಚಾಯ್ತಿ ಹಂತದ ವರೆಗೆ ಅಧಿಕಾರ ವಿಕೇಂದ್ರೀಕರಣ ಮಾಡಿದ ಶ್ರೇಯಸ್ಸು ಪಕ್ಷಕ್ಕಿದೆ. ನಿಮಗೆ ಜನರಿತ್ತ ಅಧಿಕಾರಕ್ಕೆ ಸೂಕ್ತ ನ್ಯಾಯ ಒದಗಿಸಿ ಎಂದು ಹೇಳಿದರು.</p>.<p>ಹುನಗುಂದ-ಇಳಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರ ದೊಡ್ಡಮನಿ ಹಾಗೂ ಅಬ್ದುಲ್ ರಜಾಕ್ ತಟಗಾರ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೀಣಾ ಕಾಶಪ್ಪನವರ, ವಿಜಯ ಗದ್ದನಕೇರಿ, ಮಹಾಂತೇಶ ಅವಾರಿ, ಜಬ್ಬಾರ ಕಲ್ಬುರ್ಗಿ ಮಾತನಾಡಿದರು.</p>.<p>ಪಟ್ಟಣದ ಪಿಕೆಪಿಎಸ್ ಅಧ್ಯಕ್ಷ ದೇವು ಡಂಬಳ, ಸಹಕಾರಿ ಸಂಘದಲ್ಲಿ ಆರಂಭದ ಸಾಲವಾಗಿ ಪ್ರತಿ ರೈತನಿಗೆ ₹50 ಸಾವಿರ ಮಾತ್ರ ನೀಡುತ್ತಿದ್ದು, ಅದನ್ನು ಒಂದು ಲಕ್ಷಕ್ಕೆ ಹೆಚ್ಚಿಸುವಂತೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಾಸಕ ವಿಜಯಾನಂದ ಕಾಶಪ್ಪನವರಲ್ಲಿ ಮನವಿ ಮಾಡಿಕೊಂಡರು.</p>.<p>ಶೇಖರಪ್ಪ ಬಾದವಾಡಗಿ, ಸಂಗಣ್ಣ ಗಂಜಿಹಾಳ, ಶಿವಾನಂದ ಕಂಠಿ, ಸಿದ್ದಪ್ಪ ಹೊಸೂರ, ರವಿ ಹುಚನೂರ, ಮುತ್ತಣ್ಣ ಕಲಗೋಡಿ, ನೀಲಪ್ಪ ತಪೇಲಿ, ಚನ್ನಪ್ಪಗೌಡ ನಾಡಗೌಡ, ಬಸವರಾಜ ಗದ್ದಿ, ಶರಣು ಬೆಲ್ಲದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ</strong>: ಪಂಚಾಯತ್ ರಾಜ್ ವ್ಯವಸ್ಥೆ ಆರಂಭಿಸಿದ್ದು, ಬಲಪಡಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.</p>.<p>ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಹುನಗುಂದ ಮತ್ತು ಇಳಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯ್ತಿ, ಪಿಕೆಪಿಎಸ್ ಅಧ್ಯಕ್ಷ ಹಾಗೂ ಉಪಾದ್ಯಕ್ಷರಿಗೆ ಸನ್ಮಾನ ಸಮಾರಂಭ ಹಾಗೂ ಸಮಾಲೋಚನೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸನ್ನು ಸಾಕಾರಗೊಳಿಸಿ ಪಂಚಾಯ್ತಿ ಹಂತದ ವರೆಗೆ ಅಧಿಕಾರ ವಿಕೇಂದ್ರೀಕರಣ ಮಾಡಿದ ಶ್ರೇಯಸ್ಸು ಪಕ್ಷಕ್ಕಿದೆ. ನಿಮಗೆ ಜನರಿತ್ತ ಅಧಿಕಾರಕ್ಕೆ ಸೂಕ್ತ ನ್ಯಾಯ ಒದಗಿಸಿ ಎಂದು ಹೇಳಿದರು.</p>.<p>ಹುನಗುಂದ-ಇಳಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರ ದೊಡ್ಡಮನಿ ಹಾಗೂ ಅಬ್ದುಲ್ ರಜಾಕ್ ತಟಗಾರ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೀಣಾ ಕಾಶಪ್ಪನವರ, ವಿಜಯ ಗದ್ದನಕೇರಿ, ಮಹಾಂತೇಶ ಅವಾರಿ, ಜಬ್ಬಾರ ಕಲ್ಬುರ್ಗಿ ಮಾತನಾಡಿದರು.</p>.<p>ಪಟ್ಟಣದ ಪಿಕೆಪಿಎಸ್ ಅಧ್ಯಕ್ಷ ದೇವು ಡಂಬಳ, ಸಹಕಾರಿ ಸಂಘದಲ್ಲಿ ಆರಂಭದ ಸಾಲವಾಗಿ ಪ್ರತಿ ರೈತನಿಗೆ ₹50 ಸಾವಿರ ಮಾತ್ರ ನೀಡುತ್ತಿದ್ದು, ಅದನ್ನು ಒಂದು ಲಕ್ಷಕ್ಕೆ ಹೆಚ್ಚಿಸುವಂತೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಾಸಕ ವಿಜಯಾನಂದ ಕಾಶಪ್ಪನವರಲ್ಲಿ ಮನವಿ ಮಾಡಿಕೊಂಡರು.</p>.<p>ಶೇಖರಪ್ಪ ಬಾದವಾಡಗಿ, ಸಂಗಣ್ಣ ಗಂಜಿಹಾಳ, ಶಿವಾನಂದ ಕಂಠಿ, ಸಿದ್ದಪ್ಪ ಹೊಸೂರ, ರವಿ ಹುಚನೂರ, ಮುತ್ತಣ್ಣ ಕಲಗೋಡಿ, ನೀಲಪ್ಪ ತಪೇಲಿ, ಚನ್ನಪ್ಪಗೌಡ ನಾಡಗೌಡ, ಬಸವರಾಜ ಗದ್ದಿ, ಶರಣು ಬೆಲ್ಲದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>