<p><strong>ಬಾಗಲಕೋಟೆ:</strong> ವಾಣಿಜ್ಯ ಚಟುವಟಿಕೆಗಾಗಿ ಯುನಿಟ್ 3ರಲ್ಲಿ 200 ಎಕರೆ ಭೂಮಿಯನ್ನು ಕಾಯ್ದಿರಿಸಬೇಕು ಎಂದು ಫೆಡರೇಷನ್ ಆಫ್ ಬಾಗಲಕೋಟೆ ಮರ್ಚಂಟ್ಸ್ ಅಸೋಸಿಯೇಷನ್ಸ್ ಸದಸ್ಯರು ಶನಿವಾರ ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈಲ್ವೆ ಸ್ಟೇಷನ್ನಿಂದ ಎಪಿಎಂಸಿ ಕ್ರಾಸ್ವರೆಗೆ, ರೋಟರಿ ಸರ್ಕಲ್ನಿಂದ ಮಹಾರಾಜ್ ಗಾರ್ಡನ್ವರೆಗೆ ವಾಣಿಜ್ಯ ಚಟುವಟಿಕೆಗಾಗಿ ಮೀಸಲಿರುವುದಲ್ಲದೆ, ಅಭಿವೃದ್ಧಿಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಮಾಹಿತಿ ತಂತ್ರಜ್ಞಾನ, ಸಗಟು, ಗೃಹ ಉದ್ಯಮ, ಉತ್ಪಾದನೆ, ಚಿಲ್ಲರೆ ವ್ಯಾಪಾರ, ಜವಳಿ ಇತ್ಯಾದಿ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬೇಕು. ಮೂಲ ಸೌಕರ್ಯ ಒದಗಿಸಬೇಕು. ಪರಿಸರ ಸ್ನೇಹಿ ಸುಸ್ಥಿರ ವ್ಯವಹಾರಗಳಿಗೆ ತೆರಿಗೆ ವಿನಾಯಿತಿ ನೀಡಬೇಕು. ಪಾರದರ್ಶಕವಾಗಿ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಬಾಗಲಕೋಟೆ ಮುಳುಗಡೆಯಾದ ಮೇಲೆ ವ್ಯಾಪಾರಕ್ಕೆ ಹೊಡೆತ ಬಿದ್ದಿದ್ದು, ವಾಣಿಜ್ಯ ಚಟುವಟಿಕೆಗಳು ಮಂದಗತಿಯಲ್ಲಿ ನಡೆದಿವೆ. ವ್ಯಾಪಾರಕ್ಕೆ ಉತ್ತೇಜನ ನೀಡುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ವಾಣಿಜ್ಯ ಚಟುವಟಿಕೆ ಕುಂಠಿತಗೊಂಡಿರುವುದರಿಂದ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವ್ಯಾಪಾರಸ್ಥರ ಜೀವನವನ್ನು ಪುನರುಜ್ಜೀವನಗೊಳಿಸಬೇಕು. ವ್ಯಾಪಾರ ಉಳಿಸಿ, ವ್ಯಾಪಾರಸ್ಥರ ಕುಟುಂಬಗಳನ್ನು ರಕ್ಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಮನವಿ ಸಲ್ಲಿಸಿದ್ದಾರೆ.</p>.<p>ಪ್ರಕಾಶ ತಪಶೆಟ್ಟಿ, ರವಿ ಕುಮಟಗಿ, ಶ್ರೀನಿವಾಸ ಬಳ್ಳಾರಿ, ಶೇಖರ ಮಾನೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ವಾಣಿಜ್ಯ ಚಟುವಟಿಕೆಗಾಗಿ ಯುನಿಟ್ 3ರಲ್ಲಿ 200 ಎಕರೆ ಭೂಮಿಯನ್ನು ಕಾಯ್ದಿರಿಸಬೇಕು ಎಂದು ಫೆಡರೇಷನ್ ಆಫ್ ಬಾಗಲಕೋಟೆ ಮರ್ಚಂಟ್ಸ್ ಅಸೋಸಿಯೇಷನ್ಸ್ ಸದಸ್ಯರು ಶನಿವಾರ ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈಲ್ವೆ ಸ್ಟೇಷನ್ನಿಂದ ಎಪಿಎಂಸಿ ಕ್ರಾಸ್ವರೆಗೆ, ರೋಟರಿ ಸರ್ಕಲ್ನಿಂದ ಮಹಾರಾಜ್ ಗಾರ್ಡನ್ವರೆಗೆ ವಾಣಿಜ್ಯ ಚಟುವಟಿಕೆಗಾಗಿ ಮೀಸಲಿರುವುದಲ್ಲದೆ, ಅಭಿವೃದ್ಧಿಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಮಾಹಿತಿ ತಂತ್ರಜ್ಞಾನ, ಸಗಟು, ಗೃಹ ಉದ್ಯಮ, ಉತ್ಪಾದನೆ, ಚಿಲ್ಲರೆ ವ್ಯಾಪಾರ, ಜವಳಿ ಇತ್ಯಾದಿ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬೇಕು. ಮೂಲ ಸೌಕರ್ಯ ಒದಗಿಸಬೇಕು. ಪರಿಸರ ಸ್ನೇಹಿ ಸುಸ್ಥಿರ ವ್ಯವಹಾರಗಳಿಗೆ ತೆರಿಗೆ ವಿನಾಯಿತಿ ನೀಡಬೇಕು. ಪಾರದರ್ಶಕವಾಗಿ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಬಾಗಲಕೋಟೆ ಮುಳುಗಡೆಯಾದ ಮೇಲೆ ವ್ಯಾಪಾರಕ್ಕೆ ಹೊಡೆತ ಬಿದ್ದಿದ್ದು, ವಾಣಿಜ್ಯ ಚಟುವಟಿಕೆಗಳು ಮಂದಗತಿಯಲ್ಲಿ ನಡೆದಿವೆ. ವ್ಯಾಪಾರಕ್ಕೆ ಉತ್ತೇಜನ ನೀಡುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ವಾಣಿಜ್ಯ ಚಟುವಟಿಕೆ ಕುಂಠಿತಗೊಂಡಿರುವುದರಿಂದ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವ್ಯಾಪಾರಸ್ಥರ ಜೀವನವನ್ನು ಪುನರುಜ್ಜೀವನಗೊಳಿಸಬೇಕು. ವ್ಯಾಪಾರ ಉಳಿಸಿ, ವ್ಯಾಪಾರಸ್ಥರ ಕುಟುಂಬಗಳನ್ನು ರಕ್ಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಮನವಿ ಸಲ್ಲಿಸಿದ್ದಾರೆ.</p>.<p>ಪ್ರಕಾಶ ತಪಶೆಟ್ಟಿ, ರವಿ ಕುಮಟಗಿ, ಶ್ರೀನಿವಾಸ ಬಳ್ಳಾರಿ, ಶೇಖರ ಮಾನೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>