<p><strong>ಬೀಳಗಿ</strong>: ಪೋಷಣ್ ಅಭಿಯಾನದ ಮೂಲಕ ಮಕ್ಕಳ ಆರೋಗ್ಯ, ಪೌಷ್ಟಿಕ ಆಹಾರದ ಕುರಿತ ವರದಿಯನ್ನು ತಂತ್ರಾಂಶದಲ್ಲಿ ದಾಖಲಿಸುವ ಜತೆಗೆ ಅಂಗನವಾಡಿ ಕಾರ್ಯಕರ್ತೆಯರ ಚಟುವಟಿಕೆಗೆ ಅನುಕೂಲ ಮಾಡಿಕೊಡಲು ಸ್ಯಾಮ್ಸಂಗ್ ಕಂಪನಿಯ ಮೊಬೈಲ್ಗಳನ್ನು ವಿತರಿಸಲಾಗುತ್ತಿದೆ ಎಂದು ಶಾಸಕ ಜೆ.ಟಿ. ಪಾಟೀಲ್ ಹೇಳಿದರು.</p>.<p>ಸುಧಾರಿತ ಆಂಡ್ರಾಯ್ಡ್ ತಂತ್ರಜ್ಞಾನದ ಮೊಬೈಲ್ ಅನ್ನು ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ವಿತರಿಸುವ ಕಾರ್ಯಕ್ಕೆ ಶನಿವಾರ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಏರ್ಪಡಿಸಿದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಾಂಕೇತಿಕವಾಗಿ ಕೆಲ ಕಾರ್ಯಕರ್ತೆಯರಿಗೆ ಮೊಬೈಲ್ ನೀಡುವ ಜತೆಗೆ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಲು ಸಲಹೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರಿಗೆ 417 ಮೊಬೈಲ್ ವಿತರಣೆ ಮಾಡಲಾಯಿತು.</p>.<p>‘ಮೊಬೈಲ್ಗಳಿಗೆ ಇಲಾಖೆಯ ಮೂಲಕವೇ ಪ್ರತಿ ತಿಂಗಳು ನಿಗದಿತ ಮೊತ್ತದ ಕರೆನ್ಸಿಯನ್ನು ರಿಚಾರ್ಜ್ ಮಾಡಲಾಗುತ್ತದೆ. ಪೋಷಣ್ ಟ್ರ್ಯಾಕ್ಟರ್ ತಂತ್ರಾಂಶದಲ್ಲಿ ಮಕ್ಕಳ ಮಾಹಿತಿ ದಾಖಲು ಮಾಡುವುದರ ಮೂಲಕ ಮಕ್ಕಳಲ್ಲಿ ಕಂಡು ಬರುವ ಅಪೌಷ್ಟಿಕತೆಗೆ ಸಕಾಲದಲ್ಲಿ ಸೂಕ್ತ ನೆರವು ನೀಡಿ, ಅವರು ಆರೋಗ್ಯವಂತರಾಗಿ ಬೆಳವಣಿಗೆ ಹೊಂದಲು ಬೇಕಾದ ಎಲ್ಲ ಅಗತ್ಯ ಪೂರಕ ವ್ಯವಸ್ಥೆಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ. ಜತೆಗೆ ಅಂಗನವಾಡಿಯಲ್ಲಿ ಪ್ರತಿದಿನ ನಡೆಯುವ ಚಟುವಟಿಕೆಗಳನ್ನು ಕೂಡ ಈ ಮೊಬೈಲ್ ಮೂಲಕ ದಾಖಲಿಸಲಾಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಬಿ.ಜಿ. ಕವಟೇಕರ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಭಯ ಮೊರಬ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದೇವಿಂದ್ರ ಧನಪಾಲ, ಬದಾಮಿ ಸಿಡಿಪಿಒ ಶಿಲ್ಪಾ ಹಿರೇಮಠ, ಬಾಗಲಕೋಟೆ ಸಿಡಿಪಿಒ ರಮೇಶ ಸೂಳಿಕೇರಿ, ಪಡಿಯಪ್ಪ ಕರಿಗಾರ, ಅಣವೀರಯ್ಯ ಪ್ಯಾಟಿಮಠ, ಬಸವರಾಜ ಹಳ್ಳದಮನಿ, ಸಿದ್ದು ಸಾರಾವರಿ ಇದ್ದರು.</p>.<p><strong>‘ಪಕ್ಷದ ಕಾರ್ಯಕರ್ತರಂತೆ ವರ್ತಿಸಬೇಡಿ’ </strong></p><p>‘ಬೀಳಗಿ ತಾಲ್ಲೂಕಿನ ಕೆಲವು ಅಂಗನವಾಡಿ ಕಾರ್ಯಕರ್ತೆಯರು ಒಂದು ಪಕ್ಷದ ಕಾರ್ಯಕರ್ತರ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಿರಿ. ಅದು ಸರಿಯಾದ ಕ್ರಮವಲ್ಲ. ನೀವು ಯಾವ ಪಕ್ಷದ ಕಾರ್ಯಕರ್ತರಾಗದೇ ಇಲಾಖೆಯ ಕಾರ್ಯನಿರ್ವಹಿಸಿ. ಇಲ್ಲವಾದರೆ ರಾಜಕೀಯ ಶಕ್ತಿ ಇದ್ದರೆ ರಾಜೀನಾಮೆ ನೀಡಿ ಬನ್ನಿ. ನೀವು ಯಾವುದೇ ಪಕ್ಷಕ್ಕೆ ವೋಟ್ ಮಾಡಬಹುದು ಅದು ನಿಮ್ಮ ಪರಮಾಧಿಕಾರ. ಅದಕ್ಕೆ ನನ್ನ ಅಭ್ಯಂತರವಿಲ್ಲ’ ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು. </p><p>‘ವ್ಯವಹಾರಗಳ ಅನುಭವವಿದೆ’ ಬಾಗಲಕೋಟೆ ಜಿಲ್ಲಾ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ‘ಬುಡಾ’ ಸಭೆ ನಡೆಯದ್ದಕ್ಕೆ ಬಾಗಲಕೋಟೆ ಮತ್ತು ಬೀಳಗಿ ಶಾಸಕರ ಮಧ್ಯೆ ಏನಾದರೂ ವ್ಯವಹಾರ ಸಮಸ್ಯೆ ಇದೆ ಎಂದು ಪ್ರಶ್ನಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ರಾಜು ನಾಯ್ಕರ ಅವರಿಗೆ ವ್ಯವಹಾರಗಳ ಅನುಭವವಿದೆ. ಅದನ್ನು ನಮ್ಮ ಜೊತೆ ಹಂಚಿಕೊಂಡರೆ ನಮಗೂ ಲಾಭವಾಗುತ್ತದೆ ಎಂದು ಜೆ.ಟಿ.ಪಾಟೀಲ ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ</strong>: ಪೋಷಣ್ ಅಭಿಯಾನದ ಮೂಲಕ ಮಕ್ಕಳ ಆರೋಗ್ಯ, ಪೌಷ್ಟಿಕ ಆಹಾರದ ಕುರಿತ ವರದಿಯನ್ನು ತಂತ್ರಾಂಶದಲ್ಲಿ ದಾಖಲಿಸುವ ಜತೆಗೆ ಅಂಗನವಾಡಿ ಕಾರ್ಯಕರ್ತೆಯರ ಚಟುವಟಿಕೆಗೆ ಅನುಕೂಲ ಮಾಡಿಕೊಡಲು ಸ್ಯಾಮ್ಸಂಗ್ ಕಂಪನಿಯ ಮೊಬೈಲ್ಗಳನ್ನು ವಿತರಿಸಲಾಗುತ್ತಿದೆ ಎಂದು ಶಾಸಕ ಜೆ.ಟಿ. ಪಾಟೀಲ್ ಹೇಳಿದರು.</p>.<p>ಸುಧಾರಿತ ಆಂಡ್ರಾಯ್ಡ್ ತಂತ್ರಜ್ಞಾನದ ಮೊಬೈಲ್ ಅನ್ನು ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ವಿತರಿಸುವ ಕಾರ್ಯಕ್ಕೆ ಶನಿವಾರ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಏರ್ಪಡಿಸಿದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಾಂಕೇತಿಕವಾಗಿ ಕೆಲ ಕಾರ್ಯಕರ್ತೆಯರಿಗೆ ಮೊಬೈಲ್ ನೀಡುವ ಜತೆಗೆ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಲು ಸಲಹೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರಿಗೆ 417 ಮೊಬೈಲ್ ವಿತರಣೆ ಮಾಡಲಾಯಿತು.</p>.<p>‘ಮೊಬೈಲ್ಗಳಿಗೆ ಇಲಾಖೆಯ ಮೂಲಕವೇ ಪ್ರತಿ ತಿಂಗಳು ನಿಗದಿತ ಮೊತ್ತದ ಕರೆನ್ಸಿಯನ್ನು ರಿಚಾರ್ಜ್ ಮಾಡಲಾಗುತ್ತದೆ. ಪೋಷಣ್ ಟ್ರ್ಯಾಕ್ಟರ್ ತಂತ್ರಾಂಶದಲ್ಲಿ ಮಕ್ಕಳ ಮಾಹಿತಿ ದಾಖಲು ಮಾಡುವುದರ ಮೂಲಕ ಮಕ್ಕಳಲ್ಲಿ ಕಂಡು ಬರುವ ಅಪೌಷ್ಟಿಕತೆಗೆ ಸಕಾಲದಲ್ಲಿ ಸೂಕ್ತ ನೆರವು ನೀಡಿ, ಅವರು ಆರೋಗ್ಯವಂತರಾಗಿ ಬೆಳವಣಿಗೆ ಹೊಂದಲು ಬೇಕಾದ ಎಲ್ಲ ಅಗತ್ಯ ಪೂರಕ ವ್ಯವಸ್ಥೆಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ. ಜತೆಗೆ ಅಂಗನವಾಡಿಯಲ್ಲಿ ಪ್ರತಿದಿನ ನಡೆಯುವ ಚಟುವಟಿಕೆಗಳನ್ನು ಕೂಡ ಈ ಮೊಬೈಲ್ ಮೂಲಕ ದಾಖಲಿಸಲಾಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಬಿ.ಜಿ. ಕವಟೇಕರ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಭಯ ಮೊರಬ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದೇವಿಂದ್ರ ಧನಪಾಲ, ಬದಾಮಿ ಸಿಡಿಪಿಒ ಶಿಲ್ಪಾ ಹಿರೇಮಠ, ಬಾಗಲಕೋಟೆ ಸಿಡಿಪಿಒ ರಮೇಶ ಸೂಳಿಕೇರಿ, ಪಡಿಯಪ್ಪ ಕರಿಗಾರ, ಅಣವೀರಯ್ಯ ಪ್ಯಾಟಿಮಠ, ಬಸವರಾಜ ಹಳ್ಳದಮನಿ, ಸಿದ್ದು ಸಾರಾವರಿ ಇದ್ದರು.</p>.<p><strong>‘ಪಕ್ಷದ ಕಾರ್ಯಕರ್ತರಂತೆ ವರ್ತಿಸಬೇಡಿ’ </strong></p><p>‘ಬೀಳಗಿ ತಾಲ್ಲೂಕಿನ ಕೆಲವು ಅಂಗನವಾಡಿ ಕಾರ್ಯಕರ್ತೆಯರು ಒಂದು ಪಕ್ಷದ ಕಾರ್ಯಕರ್ತರ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಿರಿ. ಅದು ಸರಿಯಾದ ಕ್ರಮವಲ್ಲ. ನೀವು ಯಾವ ಪಕ್ಷದ ಕಾರ್ಯಕರ್ತರಾಗದೇ ಇಲಾಖೆಯ ಕಾರ್ಯನಿರ್ವಹಿಸಿ. ಇಲ್ಲವಾದರೆ ರಾಜಕೀಯ ಶಕ್ತಿ ಇದ್ದರೆ ರಾಜೀನಾಮೆ ನೀಡಿ ಬನ್ನಿ. ನೀವು ಯಾವುದೇ ಪಕ್ಷಕ್ಕೆ ವೋಟ್ ಮಾಡಬಹುದು ಅದು ನಿಮ್ಮ ಪರಮಾಧಿಕಾರ. ಅದಕ್ಕೆ ನನ್ನ ಅಭ್ಯಂತರವಿಲ್ಲ’ ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು. </p><p>‘ವ್ಯವಹಾರಗಳ ಅನುಭವವಿದೆ’ ಬಾಗಲಕೋಟೆ ಜಿಲ್ಲಾ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ‘ಬುಡಾ’ ಸಭೆ ನಡೆಯದ್ದಕ್ಕೆ ಬಾಗಲಕೋಟೆ ಮತ್ತು ಬೀಳಗಿ ಶಾಸಕರ ಮಧ್ಯೆ ಏನಾದರೂ ವ್ಯವಹಾರ ಸಮಸ್ಯೆ ಇದೆ ಎಂದು ಪ್ರಶ್ನಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ರಾಜು ನಾಯ್ಕರ ಅವರಿಗೆ ವ್ಯವಹಾರಗಳ ಅನುಭವವಿದೆ. ಅದನ್ನು ನಮ್ಮ ಜೊತೆ ಹಂಚಿಕೊಂಡರೆ ನಮಗೂ ಲಾಭವಾಗುತ್ತದೆ ಎಂದು ಜೆ.ಟಿ.ಪಾಟೀಲ ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>