<p><strong>ಬಾಗಲಕೋಟೆ</strong>: ‘ಪತ್ರಕರ್ತರು ಬರವಣಿಗೆಯಲ್ಲಿ ಯಾರೊಂದಿಗೂ ರಾಜೀ ಮಾಡಿಕೊಳ್ಳಬಾರದು. ಆಡಳಿತ ಮತ್ತು ಪ್ರತಿಪಕ್ಷಗಳ ಕಾವಲುಗಾರರಾಗಿ ಕಾರ್ಯನಿರ್ವಹಿಸಿ ಪತ್ರಿಕೋದ್ಯಮದ ನಿಷ್ಠುರತೆಯನ್ನು ಗಟ್ಟಿಯಾಗಿ ಉಳಿಸಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪತ್ರಿಕೋದ್ಯಮ ಇಂದು ಕಮರ್ಷಿಯಲ್ ಆಗಿದ್ದು ಪತ್ರಕರ್ತರು, ನೌಕರರಾಗಿ ಕೆಲಸ ಮಾಡುವ ಸ್ಥಿತಿಯಿದೆ. ಹೀಗಾಗಿ ನಿಷ್ಠುರತೆಯಿಂದ ಬರೆಯಲು ಸಾಧ್ಯವಾಗದೆ, ನಿಜ ಸಂಗತಿ ಮರೆಮಾಚುವ ಸನ್ನಿವೇಶಕ್ಕೆ ಒಳಗಾಗುವ ಪ್ರಸಂಗ ಎದುರಿಸಬೇಕಾಗಿದೆ. ಇದರಿಂದಾಗಿ ಪತ್ರಕರ್ತರ ಗೌರವ ಕಡಿಮೆ ಆಗುತ್ತಿರುವುದು ನೋವಿನ ಸಂಗತಿ’ ಎಂದರು.</p>.<p>ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಬಡ ಮತ್ತು ವೃತ್ತಿಪರ ಪತ್ರಕರ್ತರ ಕುಟುಂಬಗಳ ಯೋಗಕ್ಷೇಮಕ್ಕಾಗಿ ಸೂಕ್ತ ಯೋಜನೆ ರೂಪಿಸುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಿವೆ. ಕೆಲವೇ ದಿನಗಳಲ್ಲಿ ಕಾರ್ಯನಿರತ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ದೊರೆಯಲಿದೆ’ ಎಂದು ತಿಳಿಸಿದರು.</p>.<p>ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ, ‘ಮಾಧ್ಯಮದ ಮೇಲೆ ಸಮಾಜ ಬಹಳಷ್ಟು ವಿಶ್ವಾಸವಿಟ್ಟಿದ್ದು, ಪತ್ರಕರ್ತರು ನೈಜ ಪರಂಪರೆ ಉಳಿಸಿಕೊಂಡು ಹೋಗುವ ಅಗತ್ಯವಿದೆ. ಕೆಲವರು ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿದ್ದು, ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಜಿಲ್ಲೆಯ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿದ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ದಲಭಂಜನ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಪಂ ಸಿಇಒ ಶಶಿಧರ ಕುರೇರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಕಸ್ತೂರಿ ಪಾಟೀಲ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯಕಾರಣಿ ಸದಸ್ಯ ಮಹೇಶ ಅಂಗಡಿ, ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘದ ಜಿಲ್ಲಾ ಅಧ್ಯಕ್ಷ ಜಾಕೀರಹುಸೇನ ತಾಳಿಕೋಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಕಲ್ಯಾಣಿ ಇದ್ದರು.</p>.<p><strong>ಪ್ರಶಸ್ತಿ ಪುರಸ್ಕೃತರು </strong></p><p>ಚಿಮ್ಮಡದ ಇಲಾಹಿ ಜಮಖಂಡಿ– (ಗ್ರಾಮೀಣ ಪತ್ರಕರ್ತ) ಹುನಗುಂದದ ಮಲ್ಲಿಕಾರ್ಜುನ ದರಗಾದ (ಹಿರಿಯ ಪತ್ರಕರ್ತ) ಬಾಗಲಕೋಟೆಯ ಅಶೋಕ ಶೆಟ್ಟರ್ (ಉತ್ತಮ ವರದಿಗಾರ) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪತ್ರಕರ್ತರಾದ ನಾಗೇಶ ನಿಲುಗಲ್ಲ ಚನ್ನಬಸವರಾಜ ನಾವಿ ಪ್ರಕಾಶ ಜಿಗಜಿನ್ನಿ ಚನ್ನಬಸವರಾಜ ಚಲವಾದಿ ರತ್ನಾಕರ ಶೆಟ್ಟಿ ವಿಜಯ ಬಿರಾದಾರ ಭೀಮಸೇನ ದೇಸಾಯಿ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಮಾಡಲಾಯಿತು. ಸೌಮ್ಯ ಭಿಕ್ಷಾವತಿಮಠ ಅಲಿಯಾಜಬೀನ ಕೊಡಗಲಿ ಆಯುಷ್ ಜಯರಾಮಶೆಟ್ಟಿ ವೆಂಕಟೇಶ ಮನ್ನಯ್ಯನವರಮಠ ಪ್ರೀತಿ ದಲಭಂಜನ ಶಿವು ಹಿರೇಮಠ ನಿವೇದಿತಾ ಹಿರೇಮಠ ಗೌರಮ್ಮ ಮಂಡಿ ತೇಜಸ್ ಗೋವಿಂದಪೂರಮಠ ಹಾಗೂ ತೃಪ್ತಿ ಜಿಗಜಿನ್ನಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಂಧರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕೃಷ್ಣ ಬನ್ನಿದಿನ್ನಿ ಯೋಗ ಮಲ್ಲಕಂಬ ಕ್ರೀಡೆಯಲ್ಲಿ ಸಾಧನೆ ತೋರಿದ ಅಂಧ ಮಕ್ಕಳಾದ ಭೀಮಸಿ ಕಬಾಡದ ಧನುಷ್ಯ ಕೂಡ್ಲೆಪ್ಪನವರ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಪತ್ರಕರ್ತರು ಬರವಣಿಗೆಯಲ್ಲಿ ಯಾರೊಂದಿಗೂ ರಾಜೀ ಮಾಡಿಕೊಳ್ಳಬಾರದು. ಆಡಳಿತ ಮತ್ತು ಪ್ರತಿಪಕ್ಷಗಳ ಕಾವಲುಗಾರರಾಗಿ ಕಾರ್ಯನಿರ್ವಹಿಸಿ ಪತ್ರಿಕೋದ್ಯಮದ ನಿಷ್ಠುರತೆಯನ್ನು ಗಟ್ಟಿಯಾಗಿ ಉಳಿಸಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪತ್ರಿಕೋದ್ಯಮ ಇಂದು ಕಮರ್ಷಿಯಲ್ ಆಗಿದ್ದು ಪತ್ರಕರ್ತರು, ನೌಕರರಾಗಿ ಕೆಲಸ ಮಾಡುವ ಸ್ಥಿತಿಯಿದೆ. ಹೀಗಾಗಿ ನಿಷ್ಠುರತೆಯಿಂದ ಬರೆಯಲು ಸಾಧ್ಯವಾಗದೆ, ನಿಜ ಸಂಗತಿ ಮರೆಮಾಚುವ ಸನ್ನಿವೇಶಕ್ಕೆ ಒಳಗಾಗುವ ಪ್ರಸಂಗ ಎದುರಿಸಬೇಕಾಗಿದೆ. ಇದರಿಂದಾಗಿ ಪತ್ರಕರ್ತರ ಗೌರವ ಕಡಿಮೆ ಆಗುತ್ತಿರುವುದು ನೋವಿನ ಸಂಗತಿ’ ಎಂದರು.</p>.<p>ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಬಡ ಮತ್ತು ವೃತ್ತಿಪರ ಪತ್ರಕರ್ತರ ಕುಟುಂಬಗಳ ಯೋಗಕ್ಷೇಮಕ್ಕಾಗಿ ಸೂಕ್ತ ಯೋಜನೆ ರೂಪಿಸುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಿವೆ. ಕೆಲವೇ ದಿನಗಳಲ್ಲಿ ಕಾರ್ಯನಿರತ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ದೊರೆಯಲಿದೆ’ ಎಂದು ತಿಳಿಸಿದರು.</p>.<p>ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ, ‘ಮಾಧ್ಯಮದ ಮೇಲೆ ಸಮಾಜ ಬಹಳಷ್ಟು ವಿಶ್ವಾಸವಿಟ್ಟಿದ್ದು, ಪತ್ರಕರ್ತರು ನೈಜ ಪರಂಪರೆ ಉಳಿಸಿಕೊಂಡು ಹೋಗುವ ಅಗತ್ಯವಿದೆ. ಕೆಲವರು ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿದ್ದು, ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಜಿಲ್ಲೆಯ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿದ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ದಲಭಂಜನ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಪಂ ಸಿಇಒ ಶಶಿಧರ ಕುರೇರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಕಸ್ತೂರಿ ಪಾಟೀಲ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯಕಾರಣಿ ಸದಸ್ಯ ಮಹೇಶ ಅಂಗಡಿ, ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘದ ಜಿಲ್ಲಾ ಅಧ್ಯಕ್ಷ ಜಾಕೀರಹುಸೇನ ತಾಳಿಕೋಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಕಲ್ಯಾಣಿ ಇದ್ದರು.</p>.<p><strong>ಪ್ರಶಸ್ತಿ ಪುರಸ್ಕೃತರು </strong></p><p>ಚಿಮ್ಮಡದ ಇಲಾಹಿ ಜಮಖಂಡಿ– (ಗ್ರಾಮೀಣ ಪತ್ರಕರ್ತ) ಹುನಗುಂದದ ಮಲ್ಲಿಕಾರ್ಜುನ ದರಗಾದ (ಹಿರಿಯ ಪತ್ರಕರ್ತ) ಬಾಗಲಕೋಟೆಯ ಅಶೋಕ ಶೆಟ್ಟರ್ (ಉತ್ತಮ ವರದಿಗಾರ) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪತ್ರಕರ್ತರಾದ ನಾಗೇಶ ನಿಲುಗಲ್ಲ ಚನ್ನಬಸವರಾಜ ನಾವಿ ಪ್ರಕಾಶ ಜಿಗಜಿನ್ನಿ ಚನ್ನಬಸವರಾಜ ಚಲವಾದಿ ರತ್ನಾಕರ ಶೆಟ್ಟಿ ವಿಜಯ ಬಿರಾದಾರ ಭೀಮಸೇನ ದೇಸಾಯಿ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಮಾಡಲಾಯಿತು. ಸೌಮ್ಯ ಭಿಕ್ಷಾವತಿಮಠ ಅಲಿಯಾಜಬೀನ ಕೊಡಗಲಿ ಆಯುಷ್ ಜಯರಾಮಶೆಟ್ಟಿ ವೆಂಕಟೇಶ ಮನ್ನಯ್ಯನವರಮಠ ಪ್ರೀತಿ ದಲಭಂಜನ ಶಿವು ಹಿರೇಮಠ ನಿವೇದಿತಾ ಹಿರೇಮಠ ಗೌರಮ್ಮ ಮಂಡಿ ತೇಜಸ್ ಗೋವಿಂದಪೂರಮಠ ಹಾಗೂ ತೃಪ್ತಿ ಜಿಗಜಿನ್ನಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಂಧರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕೃಷ್ಣ ಬನ್ನಿದಿನ್ನಿ ಯೋಗ ಮಲ್ಲಕಂಬ ಕ್ರೀಡೆಯಲ್ಲಿ ಸಾಧನೆ ತೋರಿದ ಅಂಧ ಮಕ್ಕಳಾದ ಭೀಮಸಿ ಕಬಾಡದ ಧನುಷ್ಯ ಕೂಡ್ಲೆಪ್ಪನವರ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>