<p><strong>ಬಾಗಲಕೋಟೆ:</strong> ‘ನಾಗರ ಪಂಚಮಿ ದಿನ ನಾಗರಕಲ್ಲಿಗೆ ಹಾಲೆರೆಯುವ ಬದಲು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು, ವೃದ್ಧರಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿ ಆಚರಿಸಲಾಗುವುದು’ ಎಂದು ಮಾನವ ಬಂಧುತ್ವ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಶೈಲ ಅಂಟಿನ ತಿಳಿಸಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಮೌಢ್ಯ ಮುಕ್ತ ಕರ್ನಾಟಕ ನಿರ್ಮಾಣ ಹಾಗೂ ಮೂಢನಂಬಿಕೆ ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.</p>.<p>‘ನಾಗರ ಪಂಚಮಿ ದಿನ ಮಹಿಳೆಯರು ಹುತ್ತ ಹಾಗೂ ಹಾವಿನ ಮೂರ್ತಿಗಳಿಗೆ ಹಾಲೆರೆದು ಅಪಾರ ಪ್ರಮಾಣದ ಹಾಲು ಪೋಲು ಮಾಡುತ್ತಾರೆ. ಅದು ಮೌಢ್ಯ ಆಚರಣೆ. ಆಹಾರದ ನಷ್ಟ ದೇಶದ ನಷ್ಟ ಎಂದು ಮನವರಿಕೆ ಮಾಡಿಕೊಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ ಸಾವಿರಾರು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅವರಿಗೆ ಹಾಲು ನೀಡಬೇಕು. ಜಿಲ್ಲೆಯಾದ್ಯಂತ ಹಾಸ್ಟೆಲ್ ವಿದ್ಯಾರ್ಥಿಗಳು, ಆಸ್ಪತ್ರೆಯಲ್ಲಿನ ರೋಗಿಗಳು, ಅಂಗನವಾಡಿ ಮಕ್ಕಳಿಗೆ ಹಾಲು ವಿತರಣೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಆಗಸ್ಟ್ 21ರಂದು ಜಿಲ್ಲಾ ಘಟಕದಿಂದ ಆಯಾ ತಾಲ್ಲೂಕಿನ ಸಂಚಾಲಕರ ನೇತೃತ್ವದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಜಯರಾಜ ಹಾದಿಕಾರ, ಈರಣ್ಣ ಸುತಾರೆ, ಶಿವರಾಜ ಕಲಾದಗಿ, ವೆಂಕಣ್ಣ ಜಗ್ಗಲ, ಹನಮಂತ ಬೆಳಗಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ನಾಗರ ಪಂಚಮಿ ದಿನ ನಾಗರಕಲ್ಲಿಗೆ ಹಾಲೆರೆಯುವ ಬದಲು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು, ವೃದ್ಧರಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿ ಆಚರಿಸಲಾಗುವುದು’ ಎಂದು ಮಾನವ ಬಂಧುತ್ವ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಶೈಲ ಅಂಟಿನ ತಿಳಿಸಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಮೌಢ್ಯ ಮುಕ್ತ ಕರ್ನಾಟಕ ನಿರ್ಮಾಣ ಹಾಗೂ ಮೂಢನಂಬಿಕೆ ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.</p>.<p>‘ನಾಗರ ಪಂಚಮಿ ದಿನ ಮಹಿಳೆಯರು ಹುತ್ತ ಹಾಗೂ ಹಾವಿನ ಮೂರ್ತಿಗಳಿಗೆ ಹಾಲೆರೆದು ಅಪಾರ ಪ್ರಮಾಣದ ಹಾಲು ಪೋಲು ಮಾಡುತ್ತಾರೆ. ಅದು ಮೌಢ್ಯ ಆಚರಣೆ. ಆಹಾರದ ನಷ್ಟ ದೇಶದ ನಷ್ಟ ಎಂದು ಮನವರಿಕೆ ಮಾಡಿಕೊಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ ಸಾವಿರಾರು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅವರಿಗೆ ಹಾಲು ನೀಡಬೇಕು. ಜಿಲ್ಲೆಯಾದ್ಯಂತ ಹಾಸ್ಟೆಲ್ ವಿದ್ಯಾರ್ಥಿಗಳು, ಆಸ್ಪತ್ರೆಯಲ್ಲಿನ ರೋಗಿಗಳು, ಅಂಗನವಾಡಿ ಮಕ್ಕಳಿಗೆ ಹಾಲು ವಿತರಣೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಆಗಸ್ಟ್ 21ರಂದು ಜಿಲ್ಲಾ ಘಟಕದಿಂದ ಆಯಾ ತಾಲ್ಲೂಕಿನ ಸಂಚಾಲಕರ ನೇತೃತ್ವದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಜಯರಾಜ ಹಾದಿಕಾರ, ಈರಣ್ಣ ಸುತಾರೆ, ಶಿವರಾಜ ಕಲಾದಗಿ, ವೆಂಕಣ್ಣ ಜಗ್ಗಲ, ಹನಮಂತ ಬೆಳಗಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>