<p><strong>ಗುಳೇದಗುಡ್ಡ</strong>: ಮಳೆ ಬಂದರೆ ಸೋರುವ ಕೊಠಡಿ, ಆಗಾಗ ಕೆಳಗೆ ಉದುರಿಬೀಳುವ ಚಾವಣಿ ಸಿಮೆಂಟ್. ಕಟ್ಟಡ ಕುಸಿಯುವ ಆತಂಕದಲ್ಲಿಯೇ ವಿದ್ಯಾರ್ಥಿಗಳು ಪ್ರತಿದಿನವೂ ಪಾಠ ಕೇಳುವ ಪರಿಸ್ಥಿತಿ.</p>.<p>ಇದು ತಾಲ್ಲೂಕಿನ ನಾಗರಾಳ ಎಸ್.ಪಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಚಿತ್ರಣ. ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಮಳೆಯಾದರೆ ಕೊಠಡಿಗಳು ಸೋರುತ್ತವೆ. ಕಳಪೆ ಕಾಮಗಾರಿಯಿಂದಾಗಿ ಕಟ್ಟಡ ನಿರ್ಮಾಣ ಮಾಡಿದ ಕೇವಲ 20 ವರ್ಷದೊಳಗೆ ಈ ಸ್ಥಿತಿ ನಿರ್ಮಾಣವಾಗಿದೆ.</p>.<p>ಇಲ್ಲಿ 1ರಿಂದ 8ನೇ ತರಗತಿ ಇದ್ದು, ಒಟ್ಟು 320 ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಒಂಬತ್ತು ಪೂರ್ಣಾವಧಿ ಶಿಕ್ಷಕರು ಹಾಗೂ ಒಬ್ಬರು ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<p>ತೀವ್ರ ಶಿಥಿಲಗೊಂಡ ಎರಡು ಕೊಠಡಿಗಳಿಗೆ ಬೀಗ ಹಾಕಲಾಗಿದೆ. ಉಳಿದ ಕೊಠಡಿಗಳ ಚಾವಣಿಯಿಂದ ಸಿಮೆಂಟ್ ಉದುರುತ್ತಿವೆ. ಅದರಲ್ಲಿ ಇನ್ನೂ ಮೂರು ಕೊಠಡಿಗಳು ಮಳೆಯಾದರೆ ಸೋರುತ್ತವೆ.</p>.<p>ಶಾಲಾ ಕೊಠಡಿ ದುರಸ್ತಿ ಮಾಡಿಸುವಂತೆ ಶಾಲೆಯ ಆಡಳಿತ ಮಂಡಳಿಯು ಜನಪ್ರತಿನಿಧಿಗಳಿಗೆ ಹಾಗೂ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದನೆ ಮಾತ್ರ ದೊರೆತಿಲ್ಲ. ಹೀಗಾಗಿ ಶಾಲಾ ಕೊಠಡಿ ಕುಸಿದು ಅನಾಹುತ ಸಂಭವಿಸುವ ಭೀತಿಯಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುವಂತಾಗಿದೆ.</p>.<p>‘2003ರಲ್ಲಿ ಕಾಮಗಾರಿ ಪೂರ್ಣಗೊಂಡ ನಂತರ ಕಟ್ಟಡ ಹಸ್ತಾಂತರದ ಪ್ರಮಾಣ ಪತ್ರವನ್ನು ಸಂಬಂಧಿಸಿದ ಎಂಜಿನಿಯರ್, ಗುತ್ತಿಗೆದಾರರು ಶಾಲೆಗೆ ನೀಡಿಲ್ಲ. ಎಸ್.ಡಿ.ಎಂ.ಸಿ ವತಿಯಿಂದ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಅನುದಾನ ನೀಡುವುದಾಗಿ ಈಚೆಗೆ ಭರವಸೆ ನೀಡಿದ್ದಾರೆ. ಆದರೆ ಅದು ಬೇಗ ಕಾರ್ಯರೂಪಕ್ಕೆ ಬರಬೇಕು’ ಎನ್ನುತ್ತಾರೆ ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ವಾಲೀಕಾರ.</p>.<p>2003ರಲ್ಲಿ ನಿರ್ಮಾಣವಾಗಿರುವ ಶಾಲಾ ಕಟ್ಟಡ ಕಳಪೆ ಕಾಮಗಾರಿಯಿಂದಾಗಿ ಶಿಥಿಲಾವಸ್ಥೆಗೆ ತಲುಪಿದ ಕೊಠಡಿಗಳು ವಿದ್ಯಾರ್ಥಿಗಳು, ಶಿಕ್ಷಕರಲ್ಲಿ ಆತಂಕ</p>.<div><blockquote>ಮಳೆ ಸಂದರ್ಭದಲ್ಲಿ ಕೊಠಡಿಗಳು ಸೋರುವುದರಿಂದ ತರಗತಿಗಳನ್ನು ನಡೆಸಲು ಕಷ್ಟವಾಗುತ್ತಿದೆ. ಕೆಲವು ಕೊಠಡಿಗಳಲ್ಲಿ ಎರಡೆರಡು ತರಗತಿ ನಡೆಸಲಾಗುತ್ತಿದೆ </blockquote><span class="attribution">ಎಚ್.ಎಂ.ಭಾಗವಾನ ಪ್ರಭಾರಿ ಮುಖ್ಯ ಶಿಕ್ಷಕರು</span></div>.<div><blockquote>ಕೊಠಡಿಗಳ ದುರಸ್ತಿಗೆ ಅನುದಾನ ಮಂಜೂರು ಮಾಡಲು ಡಿಡಿಪಿಐ ಮತ್ತು ಶಾಸಕರಿಗೆ ಮನವಿ ಮಾಡಲಾಗಿದೆ. ಅನುದಾನ ದೊರೆತ ಬಳಿಕ ದುರಸ್ತಿ ಕಾರ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು </blockquote><span class="attribution">ಬಸವರಾಜ ಹಳಗೇರಿ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಾದಾಮಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಳೇದಗುಡ್ಡ</strong>: ಮಳೆ ಬಂದರೆ ಸೋರುವ ಕೊಠಡಿ, ಆಗಾಗ ಕೆಳಗೆ ಉದುರಿಬೀಳುವ ಚಾವಣಿ ಸಿಮೆಂಟ್. ಕಟ್ಟಡ ಕುಸಿಯುವ ಆತಂಕದಲ್ಲಿಯೇ ವಿದ್ಯಾರ್ಥಿಗಳು ಪ್ರತಿದಿನವೂ ಪಾಠ ಕೇಳುವ ಪರಿಸ್ಥಿತಿ.</p>.<p>ಇದು ತಾಲ್ಲೂಕಿನ ನಾಗರಾಳ ಎಸ್.ಪಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಚಿತ್ರಣ. ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಮಳೆಯಾದರೆ ಕೊಠಡಿಗಳು ಸೋರುತ್ತವೆ. ಕಳಪೆ ಕಾಮಗಾರಿಯಿಂದಾಗಿ ಕಟ್ಟಡ ನಿರ್ಮಾಣ ಮಾಡಿದ ಕೇವಲ 20 ವರ್ಷದೊಳಗೆ ಈ ಸ್ಥಿತಿ ನಿರ್ಮಾಣವಾಗಿದೆ.</p>.<p>ಇಲ್ಲಿ 1ರಿಂದ 8ನೇ ತರಗತಿ ಇದ್ದು, ಒಟ್ಟು 320 ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಒಂಬತ್ತು ಪೂರ್ಣಾವಧಿ ಶಿಕ್ಷಕರು ಹಾಗೂ ಒಬ್ಬರು ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<p>ತೀವ್ರ ಶಿಥಿಲಗೊಂಡ ಎರಡು ಕೊಠಡಿಗಳಿಗೆ ಬೀಗ ಹಾಕಲಾಗಿದೆ. ಉಳಿದ ಕೊಠಡಿಗಳ ಚಾವಣಿಯಿಂದ ಸಿಮೆಂಟ್ ಉದುರುತ್ತಿವೆ. ಅದರಲ್ಲಿ ಇನ್ನೂ ಮೂರು ಕೊಠಡಿಗಳು ಮಳೆಯಾದರೆ ಸೋರುತ್ತವೆ.</p>.<p>ಶಾಲಾ ಕೊಠಡಿ ದುರಸ್ತಿ ಮಾಡಿಸುವಂತೆ ಶಾಲೆಯ ಆಡಳಿತ ಮಂಡಳಿಯು ಜನಪ್ರತಿನಿಧಿಗಳಿಗೆ ಹಾಗೂ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದನೆ ಮಾತ್ರ ದೊರೆತಿಲ್ಲ. ಹೀಗಾಗಿ ಶಾಲಾ ಕೊಠಡಿ ಕುಸಿದು ಅನಾಹುತ ಸಂಭವಿಸುವ ಭೀತಿಯಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುವಂತಾಗಿದೆ.</p>.<p>‘2003ರಲ್ಲಿ ಕಾಮಗಾರಿ ಪೂರ್ಣಗೊಂಡ ನಂತರ ಕಟ್ಟಡ ಹಸ್ತಾಂತರದ ಪ್ರಮಾಣ ಪತ್ರವನ್ನು ಸಂಬಂಧಿಸಿದ ಎಂಜಿನಿಯರ್, ಗುತ್ತಿಗೆದಾರರು ಶಾಲೆಗೆ ನೀಡಿಲ್ಲ. ಎಸ್.ಡಿ.ಎಂ.ಸಿ ವತಿಯಿಂದ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಅನುದಾನ ನೀಡುವುದಾಗಿ ಈಚೆಗೆ ಭರವಸೆ ನೀಡಿದ್ದಾರೆ. ಆದರೆ ಅದು ಬೇಗ ಕಾರ್ಯರೂಪಕ್ಕೆ ಬರಬೇಕು’ ಎನ್ನುತ್ತಾರೆ ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ವಾಲೀಕಾರ.</p>.<p>2003ರಲ್ಲಿ ನಿರ್ಮಾಣವಾಗಿರುವ ಶಾಲಾ ಕಟ್ಟಡ ಕಳಪೆ ಕಾಮಗಾರಿಯಿಂದಾಗಿ ಶಿಥಿಲಾವಸ್ಥೆಗೆ ತಲುಪಿದ ಕೊಠಡಿಗಳು ವಿದ್ಯಾರ್ಥಿಗಳು, ಶಿಕ್ಷಕರಲ್ಲಿ ಆತಂಕ</p>.<div><blockquote>ಮಳೆ ಸಂದರ್ಭದಲ್ಲಿ ಕೊಠಡಿಗಳು ಸೋರುವುದರಿಂದ ತರಗತಿಗಳನ್ನು ನಡೆಸಲು ಕಷ್ಟವಾಗುತ್ತಿದೆ. ಕೆಲವು ಕೊಠಡಿಗಳಲ್ಲಿ ಎರಡೆರಡು ತರಗತಿ ನಡೆಸಲಾಗುತ್ತಿದೆ </blockquote><span class="attribution">ಎಚ್.ಎಂ.ಭಾಗವಾನ ಪ್ರಭಾರಿ ಮುಖ್ಯ ಶಿಕ್ಷಕರು</span></div>.<div><blockquote>ಕೊಠಡಿಗಳ ದುರಸ್ತಿಗೆ ಅನುದಾನ ಮಂಜೂರು ಮಾಡಲು ಡಿಡಿಪಿಐ ಮತ್ತು ಶಾಸಕರಿಗೆ ಮನವಿ ಮಾಡಲಾಗಿದೆ. ಅನುದಾನ ದೊರೆತ ಬಳಿಕ ದುರಸ್ತಿ ಕಾರ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು </blockquote><span class="attribution">ಬಸವರಾಜ ಹಳಗೇರಿ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಾದಾಮಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>