<p><strong>ಬಾಗಲಕೋಟೆ:</strong> ‘ಹೊಸ ಖಾಸಗಿ ಕಾಲೇಜಿನಲ್ಲೂ ಶೇ 40ರಷ್ಟು ಸೀಟು ಸರ್ಕಾರಕ್ಕೆ ಸಿಗಲಿವೆ. ಕಡಿಮೆ ಶುಲ್ಕದಲ್ಲಿ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಬಹುದು’ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.</p>.<p>ಜಿಲ್ಲೆಯ ಬಾಡಗಂಡಿಯಲ್ಲಿ ಬುಧವಾರ ಎಸ್.ಆರ್.ಪಾಟೀಲ ವೈದ್ಯಕೀಯ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಗ್ರಾಮೀಣ ಭಾಗದಲ್ಲಿ ಕಾಲೇಜು ಸ್ಥಾಪನೆ ಸುಲಭವಲ್ಲ. ಎಸ್.ಆರ್. ಪಾಟೀಲ ಅವರ ಮಹತ್ವದ ಕಾರ್ಯದಿಂದ ಜನರಿಗೆ ಅನುಕೂಲವಾಗಲಿದೆ ಎಂದರು.</p>.<p>630 ಹಾಸಿಗೆಗಳ ನವೀಕೃತ ಆಸ್ಪತ್ರೆ ಉದ್ಘಾಟಿಸಿದ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾತನಾಡಿ, ‘ಎಸ್.ಆರ್. ಪಾಟೀಲರ ಹೋರಾಟದ ಮನೋಭಾವ, ಛಲ, ಇಚ್ಛಾಶಕ್ತಿ ಫಲದಿಂದ ಕಾಲೇಜು ಆರಂಭವಾಗಿದೆ’ ಎಂದರು.</p>.<p>ಗೃಹ ಸಚಿವ ಜಿ.ಪರಮೇಶ್ವರ ಅವರು, ‘ಈ ವೈದ್ಯಕೀಯ ಕಾಲೇಜು ಗ್ರಾಮೀಣ ಪ್ರತಿಭೆಗಳಿಗೆ ವರದಾನವಾಗಲಿದೆ. ಕಾಲೇಜನ್ನು ವಿಶ್ವವಿದ್ಯಾಲಯ ಆಗಿಸುವುದು ಪಾಟೀಲ ಅವರ ಗುರಿ ಆಗಿದೆ’ ಎಂದರು. ಶಿರಹಟ್ಟಿಯ ಫಕೀರದಿಂಗಾಲೇಶ್ವರ ಸ್ವಾಮೀಜಿ, ಎರೆಹೊಸಳ್ಳಿಯ ವೇಮನ ಸಂಸ್ಥಾನಮಠದ ವೇಮನಾಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ಹೊಸ ಖಾಸಗಿ ಕಾಲೇಜಿನಲ್ಲೂ ಶೇ 40ರಷ್ಟು ಸೀಟು ಸರ್ಕಾರಕ್ಕೆ ಸಿಗಲಿವೆ. ಕಡಿಮೆ ಶುಲ್ಕದಲ್ಲಿ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಬಹುದು’ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.</p>.<p>ಜಿಲ್ಲೆಯ ಬಾಡಗಂಡಿಯಲ್ಲಿ ಬುಧವಾರ ಎಸ್.ಆರ್.ಪಾಟೀಲ ವೈದ್ಯಕೀಯ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಗ್ರಾಮೀಣ ಭಾಗದಲ್ಲಿ ಕಾಲೇಜು ಸ್ಥಾಪನೆ ಸುಲಭವಲ್ಲ. ಎಸ್.ಆರ್. ಪಾಟೀಲ ಅವರ ಮಹತ್ವದ ಕಾರ್ಯದಿಂದ ಜನರಿಗೆ ಅನುಕೂಲವಾಗಲಿದೆ ಎಂದರು.</p>.<p>630 ಹಾಸಿಗೆಗಳ ನವೀಕೃತ ಆಸ್ಪತ್ರೆ ಉದ್ಘಾಟಿಸಿದ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾತನಾಡಿ, ‘ಎಸ್.ಆರ್. ಪಾಟೀಲರ ಹೋರಾಟದ ಮನೋಭಾವ, ಛಲ, ಇಚ್ಛಾಶಕ್ತಿ ಫಲದಿಂದ ಕಾಲೇಜು ಆರಂಭವಾಗಿದೆ’ ಎಂದರು.</p>.<p>ಗೃಹ ಸಚಿವ ಜಿ.ಪರಮೇಶ್ವರ ಅವರು, ‘ಈ ವೈದ್ಯಕೀಯ ಕಾಲೇಜು ಗ್ರಾಮೀಣ ಪ್ರತಿಭೆಗಳಿಗೆ ವರದಾನವಾಗಲಿದೆ. ಕಾಲೇಜನ್ನು ವಿಶ್ವವಿದ್ಯಾಲಯ ಆಗಿಸುವುದು ಪಾಟೀಲ ಅವರ ಗುರಿ ಆಗಿದೆ’ ಎಂದರು. ಶಿರಹಟ್ಟಿಯ ಫಕೀರದಿಂಗಾಲೇಶ್ವರ ಸ್ವಾಮೀಜಿ, ಎರೆಹೊಸಳ್ಳಿಯ ವೇಮನ ಸಂಸ್ಥಾನಮಠದ ವೇಮನಾಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>