<p><strong>ಬಾಗಲಕೋಟೆ</strong>: ಪಾದಯಾತ್ರೆಗೆ ಸಂಬಂಧಿಸಿದಂತೆ ಬಿಜೆಪಿ, ಜೆಡಿಎಸ್ ನಡುವೆ ಒಡಕುಂಟಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.</p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ನವರು ಮೊದಲು ಬಿಜೆಪಿಯೊಂದಿಗೆ ಇದ್ದರು. ನಂತರ ನಮ್ಮೊಂದಿಗೆ ಇದ್ದರು. ಈಗ ಮತ್ತೆ ಬಿಜೆಪಿ ಕಡೆಗೆ ಹೋಗಿದ್ದಾರೆ. ಹೊಂದಾಣಿಕೆ ಎಷ್ಟು ದಿನ ನಡೆಯಲಿದೆ ಕಾದು ನೋಡೋಣ ಎಂದರು.</p><p>ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಮೂರು ಏಜೆನ್ಸಿಗಳು ನಡೆಸುತ್ತಿವೆ. ಮುಡಾ ನಿವೇಶನ ಹಂಚಿಕೆಯ ತನಿಖೆಗೆ ಆಯೋಗ ರಚನೆ ಮಾಡಲಾಗಿದೆ. ತನಿಖೆಯಲ್ಲಿ ಸತ್ಯಾಂಶ ಹೊರಗಡೆ ಬರಲಿದೆ ಎಂದು ಹೇಳಿದರು.</p><p>ರಾಜ್ಯಪಾಲರು ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದನ್ನು ಮೀರಿದರೆ ಅನುಮಾನ ಶುರುವಾಗುತ್ತದೆ. ಷೋಕಾಸ್ ನೋಟಿಸ್ ನೀಡದಿರುವುದು ರಾಜ್ಯಪಾಲರ ನಡೆ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ ಎಂದು ಟೀಕಿಸಿದರು.</p><p>ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಲಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದರಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆ ಅನಾವಶ್ಯಕ ಎಂದರು</p><p>ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾತನಾಡಿ, ರಾಜ್ಯಪಾಲರು ಕೇಂದ್ರದ ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p><p>ಕೇಂದ್ರ ಸರ್ಕಾರವು ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ರಾಜ್ಯಪಾಲರ ಹುದ್ದೆ ದುರುಪಯೋಗ ಮಾಡಿಕೊಂಡಿರುವುದನ್ನು ಕಾಣಬಹುದಾಗಿದೆ. ಬೇರೆ ಪಕ್ಷಗಳು ಆಡಳಿತ ನಡೆಸಬಾರದು ಎನ್ನುವ ಹುನ್ನಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಪಾದಯಾತ್ರೆಗೆ ಸಂಬಂಧಿಸಿದಂತೆ ಬಿಜೆಪಿ, ಜೆಡಿಎಸ್ ನಡುವೆ ಒಡಕುಂಟಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.</p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ನವರು ಮೊದಲು ಬಿಜೆಪಿಯೊಂದಿಗೆ ಇದ್ದರು. ನಂತರ ನಮ್ಮೊಂದಿಗೆ ಇದ್ದರು. ಈಗ ಮತ್ತೆ ಬಿಜೆಪಿ ಕಡೆಗೆ ಹೋಗಿದ್ದಾರೆ. ಹೊಂದಾಣಿಕೆ ಎಷ್ಟು ದಿನ ನಡೆಯಲಿದೆ ಕಾದು ನೋಡೋಣ ಎಂದರು.</p><p>ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಮೂರು ಏಜೆನ್ಸಿಗಳು ನಡೆಸುತ್ತಿವೆ. ಮುಡಾ ನಿವೇಶನ ಹಂಚಿಕೆಯ ತನಿಖೆಗೆ ಆಯೋಗ ರಚನೆ ಮಾಡಲಾಗಿದೆ. ತನಿಖೆಯಲ್ಲಿ ಸತ್ಯಾಂಶ ಹೊರಗಡೆ ಬರಲಿದೆ ಎಂದು ಹೇಳಿದರು.</p><p>ರಾಜ್ಯಪಾಲರು ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದನ್ನು ಮೀರಿದರೆ ಅನುಮಾನ ಶುರುವಾಗುತ್ತದೆ. ಷೋಕಾಸ್ ನೋಟಿಸ್ ನೀಡದಿರುವುದು ರಾಜ್ಯಪಾಲರ ನಡೆ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ ಎಂದು ಟೀಕಿಸಿದರು.</p><p>ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಲಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದರಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆ ಅನಾವಶ್ಯಕ ಎಂದರು</p><p>ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾತನಾಡಿ, ರಾಜ್ಯಪಾಲರು ಕೇಂದ್ರದ ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p><p>ಕೇಂದ್ರ ಸರ್ಕಾರವು ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ರಾಜ್ಯಪಾಲರ ಹುದ್ದೆ ದುರುಪಯೋಗ ಮಾಡಿಕೊಂಡಿರುವುದನ್ನು ಕಾಣಬಹುದಾಗಿದೆ. ಬೇರೆ ಪಕ್ಷಗಳು ಆಡಳಿತ ನಡೆಸಬಾರದು ಎನ್ನುವ ಹುನ್ನಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>