<p>ಕೆರೂರ: ಪಟ್ಟಣವು ಅಭಿವೃದ್ದಿ ಹೊಂದಬೇಕಾದರೆ ಜನರು ಪಕ್ಷಭೇದ ಮರೆತು ಕೈಜೋಡಿಸಿದರೆ ಪಟ್ಟಣವು ಅಭಿವೃದ್ದಿ ಪಥದತ್ತ ಸಾಗುತ್ತದೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2022-23ನೇ ಸಾಲೀನ ವಿಶೇಷ ಅಭಿವೃದ್ದಿ ಯೋಜನೆಯಡಿಯಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪಾಲಕರು ಉನ್ನತ ಶಿಕ್ಷಣಕ್ಕೆ ಒತ್ತು ನೀಡಬೇಕು. ಸ್ನಾತಕೋತ್ತರ ಶಿಕ್ಷಣಕ್ಕೆ ಪಾಲಕರು ಹಿಂದೇಟು ಹಾಕಬಾರದು ಎಂದು ಹೇಳಿದರು.</p>.<p>ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಕಲಿಕೆಗೆ ಯಾವುದೇ ರೀತಿಯ ಕೊರತೆ ಉಂಟಾಗಬಾರದು. ಕಾಲೇಜಿಗೆ ಕುಡಿಯುವ ನೀರು, ಶೌಚಾಲಯ, ರಸ್ತೆ, ಕ್ರೀಡಾ ಮೈದಾನ, ಬಸ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕಳೆದ 4 ತಿಂಗಳನಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದನ್ನು ಗಮನಿಸಿದ ಶಾಸಕು ಸ್ಥಳದಲ್ಲಿಯೇ ಹೆಸ್ಕಾಂ ಶಾಖಾಧಿಕಾರಿಗೆ ಕೆರೆ ಮಾಡಿ ಕಾಲೇಜಿಗೆ ವಿದ್ಯುತ್ ಕಂಬಗಳನ್ನು ಅಳವಡಿಸಿ ವಿದ್ಯುತ್ ಪೂರೈಸುವಂತೆ ಹೇಳಿದರು.</p>.<p>ಕಾಲೇಜು ಪ್ರಾಚಾರ್ಯ ಪ್ರೊ.ಮಲ್ಲಪ್ಪ ಹೊಸುರ ಮಾತನಾಡಿ, ಶಾಸಕರು ಪಟ್ಟಣಕ್ಕೆ ಎಂ.ಎ., ಎಂ.ಕಾಂ, ಪದವಿ ಕಾಲೇಜನ್ನು ಪಟ್ಟಣಕ್ಕೆ ನೀಡಬೇಕೆಂದು ಮನವಿ ಮಾಡಿದರು.</p>.<p>ಬಾದಾಮಿ ತಾಲ್ಲೂಕಿನಲ್ಲಿ ಕೆರೂರ ಪಟ್ಟಣವು ವ್ಯವಹಾರಿಕವಾಗಿ ಹಾಗೂ ಆರ್ಥಿಕವಾಗಿ ಸುತ್ತಮುತ್ತಲ ಹಳ್ಳಿಗಳಿಗೆ ಪ್ರಮುಖ ಕೇಂದ್ರ ಬಿಂದುವಾಗಿದೆ. ಅಭಿವೃದ್ದಿಗೆ ಸ್ಥಳೀಯ ಮುಖಂಡರು ಶಾಸಕರ ಜೊತೆ ಕೈಜೋಡಿಸಬೇಕು ಎಂದು ಸತ್ಯ ಶೋಧಕ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪರಶುರಾಮ ಮಹರಾಜನವರ ಹೇಳಿದರು.</p>.<p>ಪಟ್ಟಣಕ್ಕೆ ಒಳಚರಂಡಿ ಕಾಮಗಾರಿಗೆ ಅನುಮೋದನೆ ದೊರಕಿದ್ದು, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕ ತಿಳಿಸಿದರು.</p>.<p>ಕರ್ನಾಟಕ ಗೃಹ ಮಂಡಳಿ ಅಭಿಯಂತರ ವಿಜಯ ದೇಶಿಂಗೆ, ಗುತ್ತಿದೇದಾರ ಆನಂದ ಜಾಲಗಾರ, ಬಿ.ಕೆ ಕೋವಳ್ಳಿ, ಪ.ಪಂ ಸದಸ್ಯರಾದ ವಿಠ್ಠಲಗೌಡ ಗೌಡರ, ಬಸವರಾಜ ಹರಣಶಿಕಾರಿ, ಸಿಡಿಸಿ ಸದಸ್ಯ ಧನಂಜಯ ಕಂದಕೂರ, ಆರ್.ಎಸ್.ನೀಡೋಣಿ, ದೇವರಾಜ ಚೂರಿ, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆರೂರ: ಪಟ್ಟಣವು ಅಭಿವೃದ್ದಿ ಹೊಂದಬೇಕಾದರೆ ಜನರು ಪಕ್ಷಭೇದ ಮರೆತು ಕೈಜೋಡಿಸಿದರೆ ಪಟ್ಟಣವು ಅಭಿವೃದ್ದಿ ಪಥದತ್ತ ಸಾಗುತ್ತದೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2022-23ನೇ ಸಾಲೀನ ವಿಶೇಷ ಅಭಿವೃದ್ದಿ ಯೋಜನೆಯಡಿಯಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪಾಲಕರು ಉನ್ನತ ಶಿಕ್ಷಣಕ್ಕೆ ಒತ್ತು ನೀಡಬೇಕು. ಸ್ನಾತಕೋತ್ತರ ಶಿಕ್ಷಣಕ್ಕೆ ಪಾಲಕರು ಹಿಂದೇಟು ಹಾಕಬಾರದು ಎಂದು ಹೇಳಿದರು.</p>.<p>ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಕಲಿಕೆಗೆ ಯಾವುದೇ ರೀತಿಯ ಕೊರತೆ ಉಂಟಾಗಬಾರದು. ಕಾಲೇಜಿಗೆ ಕುಡಿಯುವ ನೀರು, ಶೌಚಾಲಯ, ರಸ್ತೆ, ಕ್ರೀಡಾ ಮೈದಾನ, ಬಸ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕಳೆದ 4 ತಿಂಗಳನಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದನ್ನು ಗಮನಿಸಿದ ಶಾಸಕು ಸ್ಥಳದಲ್ಲಿಯೇ ಹೆಸ್ಕಾಂ ಶಾಖಾಧಿಕಾರಿಗೆ ಕೆರೆ ಮಾಡಿ ಕಾಲೇಜಿಗೆ ವಿದ್ಯುತ್ ಕಂಬಗಳನ್ನು ಅಳವಡಿಸಿ ವಿದ್ಯುತ್ ಪೂರೈಸುವಂತೆ ಹೇಳಿದರು.</p>.<p>ಕಾಲೇಜು ಪ್ರಾಚಾರ್ಯ ಪ್ರೊ.ಮಲ್ಲಪ್ಪ ಹೊಸುರ ಮಾತನಾಡಿ, ಶಾಸಕರು ಪಟ್ಟಣಕ್ಕೆ ಎಂ.ಎ., ಎಂ.ಕಾಂ, ಪದವಿ ಕಾಲೇಜನ್ನು ಪಟ್ಟಣಕ್ಕೆ ನೀಡಬೇಕೆಂದು ಮನವಿ ಮಾಡಿದರು.</p>.<p>ಬಾದಾಮಿ ತಾಲ್ಲೂಕಿನಲ್ಲಿ ಕೆರೂರ ಪಟ್ಟಣವು ವ್ಯವಹಾರಿಕವಾಗಿ ಹಾಗೂ ಆರ್ಥಿಕವಾಗಿ ಸುತ್ತಮುತ್ತಲ ಹಳ್ಳಿಗಳಿಗೆ ಪ್ರಮುಖ ಕೇಂದ್ರ ಬಿಂದುವಾಗಿದೆ. ಅಭಿವೃದ್ದಿಗೆ ಸ್ಥಳೀಯ ಮುಖಂಡರು ಶಾಸಕರ ಜೊತೆ ಕೈಜೋಡಿಸಬೇಕು ಎಂದು ಸತ್ಯ ಶೋಧಕ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪರಶುರಾಮ ಮಹರಾಜನವರ ಹೇಳಿದರು.</p>.<p>ಪಟ್ಟಣಕ್ಕೆ ಒಳಚರಂಡಿ ಕಾಮಗಾರಿಗೆ ಅನುಮೋದನೆ ದೊರಕಿದ್ದು, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕ ತಿಳಿಸಿದರು.</p>.<p>ಕರ್ನಾಟಕ ಗೃಹ ಮಂಡಳಿ ಅಭಿಯಂತರ ವಿಜಯ ದೇಶಿಂಗೆ, ಗುತ್ತಿದೇದಾರ ಆನಂದ ಜಾಲಗಾರ, ಬಿ.ಕೆ ಕೋವಳ್ಳಿ, ಪ.ಪಂ ಸದಸ್ಯರಾದ ವಿಠ್ಠಲಗೌಡ ಗೌಡರ, ಬಸವರಾಜ ಹರಣಶಿಕಾರಿ, ಸಿಡಿಸಿ ಸದಸ್ಯ ಧನಂಜಯ ಕಂದಕೂರ, ಆರ್.ಎಸ್.ನೀಡೋಣಿ, ದೇವರಾಜ ಚೂರಿ, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>