<p><strong>ಜಮಖಂಡಿ:</strong> ಲಿಂಗ, ಜಾತಿ ತಾರತಮ್ಯ ಬಂದಾಗ ಪ್ರತಿಯೊಬ್ಬರೂ ಪ್ರತಿಭಟಿಸಿ ಸಾಮಾಜಿಕ ನ್ಯಾಯವ ಪಡೆದುಕೊಳ್ಳಬೇಕು ಎಂದು ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶೆ ಕವಿತಾ ಉಂಡೋಡಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಸೇವಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ಸಹಯೋಗದಲ್ಲಿ ಮಂಗಳವಾರ ನಡೆದ ಕಾನೂನು ಅರಿವು ನೆರವು ಹಾಗೂ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.</p>.<p>ಗಾಳಿ, ನೀರು, ರಸ್ತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಬೇಡಿಕೆ ಇಟ್ಟು, ಅವುಗಳನ್ನು ಈಡೇರಿಸಿ ಅಭಿವೃದ್ಧಿ ಕಡೆಗೆ ಕರೆದೊಯ್ಯುವವರನ್ನು ಗುರುತಿಸಿ ಮತದಾನ ಮಾಡಬೇಕು. ಆಸೆ ಆಕಾಂಕ್ಷೆಗಳಿಗೆ ಬಲಿಯಾಗದೆ ನ್ಯಾಯಯುತವಾಗಿ ಮತದಾನ ಮಾಡಬೇಕು. ಇದರಿಂದ ಸಾಮಾಜಿಕ ನ್ಯಾಯ ದೊರೆಯಲು ಸಾಧ್ಯವಾಗುತ್ತದೆ ಎಂದರು.</p>.<p>ಪ್ರಾಂಶುಪಾಲ ಜೆ.ಪಿ.ದೊಡಮನಿ ಮಾತನಾಡಿ, ದೇವಸ್ಥಾನ ಕಟ್ಟಿದರೆ ಸಾಮಾಜಿಕ ನ್ಯಾಯ ಸಿಗುವುದಿಲ್ಲ. ದೇವರು, ಧರ್ಮ ಹಿಂದೆ ಸರಿದು ನ್ಯಾಯ ಮುಂದೆ ಬರಬೇಕು. ನಮಗೆ ಇನ್ನೂ ಸಾಮಾಜಿಕ ನ್ಯಾಯ ಸಿಗುತ್ತಿಲ್ಲ. ಸಂವಿಧಾನದ ಆಶಯ ಇನ್ನೂ ಈಡೇರಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ವಕೀಲ ಆರ್.ಆರ್.ಕರೋಶಿ ಮಾತನಾಡಿ, ವಿಶ್ವವೇ ಒಂದು ಕುಟುಂಬ, ಪ್ರತಿಯೊಬ್ಬರಿಗೂ ಮೂಲ ಸೌಲಭ್ಯ ನೀಡುವುದೇ ಸಮಾನತೆ. ವಿಶ್ವದಲ್ಲಿ ಶೇ 60ರಷ್ಟು ಸಾಮಾಜಿಕ ಭದ್ರತೆ ಇಲ್ಲದೆ ದುಡಿಯುವ ವರ್ಗದವರಿದ್ದಾರೆ, ಸಾಕ್ಷರತೆ, ನೀರುದ್ಯೋಗ, ಜಾತಿ ವ್ಯವಸ್ಥೆ, ಲಿಂಗತಾರತಮ್ಯವನ್ನು ಹೋಗಲಾಡಿಸಬೇಕು ಎಂದರು.</p>.<p>ಪ್ರಧಾನ ದಿವಾಣಿ ನ್ಯಾಯಾಧೀಶ ಅಬ್ದುಲ್ ರೆಹಮಾನ ಎ ಮುಲ್ಲಾ ಮಾತನಾಡಿದರು. ವಿ.ಆರ್.ದಳವಾಯಿ, ಎಸ್.ಎಂ. ಕಾಯಿ ಇದ್ದರು. ರಾಜೇಶ ಜಾಧವ ಸ್ವಾಗತಿಸಿದರು. ವೈ.ವೈ.ಕೊಕ್ಕನವರ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ:</strong> ಲಿಂಗ, ಜಾತಿ ತಾರತಮ್ಯ ಬಂದಾಗ ಪ್ರತಿಯೊಬ್ಬರೂ ಪ್ರತಿಭಟಿಸಿ ಸಾಮಾಜಿಕ ನ್ಯಾಯವ ಪಡೆದುಕೊಳ್ಳಬೇಕು ಎಂದು ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶೆ ಕವಿತಾ ಉಂಡೋಡಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಸೇವಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ಸಹಯೋಗದಲ್ಲಿ ಮಂಗಳವಾರ ನಡೆದ ಕಾನೂನು ಅರಿವು ನೆರವು ಹಾಗೂ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.</p>.<p>ಗಾಳಿ, ನೀರು, ರಸ್ತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಬೇಡಿಕೆ ಇಟ್ಟು, ಅವುಗಳನ್ನು ಈಡೇರಿಸಿ ಅಭಿವೃದ್ಧಿ ಕಡೆಗೆ ಕರೆದೊಯ್ಯುವವರನ್ನು ಗುರುತಿಸಿ ಮತದಾನ ಮಾಡಬೇಕು. ಆಸೆ ಆಕಾಂಕ್ಷೆಗಳಿಗೆ ಬಲಿಯಾಗದೆ ನ್ಯಾಯಯುತವಾಗಿ ಮತದಾನ ಮಾಡಬೇಕು. ಇದರಿಂದ ಸಾಮಾಜಿಕ ನ್ಯಾಯ ದೊರೆಯಲು ಸಾಧ್ಯವಾಗುತ್ತದೆ ಎಂದರು.</p>.<p>ಪ್ರಾಂಶುಪಾಲ ಜೆ.ಪಿ.ದೊಡಮನಿ ಮಾತನಾಡಿ, ದೇವಸ್ಥಾನ ಕಟ್ಟಿದರೆ ಸಾಮಾಜಿಕ ನ್ಯಾಯ ಸಿಗುವುದಿಲ್ಲ. ದೇವರು, ಧರ್ಮ ಹಿಂದೆ ಸರಿದು ನ್ಯಾಯ ಮುಂದೆ ಬರಬೇಕು. ನಮಗೆ ಇನ್ನೂ ಸಾಮಾಜಿಕ ನ್ಯಾಯ ಸಿಗುತ್ತಿಲ್ಲ. ಸಂವಿಧಾನದ ಆಶಯ ಇನ್ನೂ ಈಡೇರಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ವಕೀಲ ಆರ್.ಆರ್.ಕರೋಶಿ ಮಾತನಾಡಿ, ವಿಶ್ವವೇ ಒಂದು ಕುಟುಂಬ, ಪ್ರತಿಯೊಬ್ಬರಿಗೂ ಮೂಲ ಸೌಲಭ್ಯ ನೀಡುವುದೇ ಸಮಾನತೆ. ವಿಶ್ವದಲ್ಲಿ ಶೇ 60ರಷ್ಟು ಸಾಮಾಜಿಕ ಭದ್ರತೆ ಇಲ್ಲದೆ ದುಡಿಯುವ ವರ್ಗದವರಿದ್ದಾರೆ, ಸಾಕ್ಷರತೆ, ನೀರುದ್ಯೋಗ, ಜಾತಿ ವ್ಯವಸ್ಥೆ, ಲಿಂಗತಾರತಮ್ಯವನ್ನು ಹೋಗಲಾಡಿಸಬೇಕು ಎಂದರು.</p>.<p>ಪ್ರಧಾನ ದಿವಾಣಿ ನ್ಯಾಯಾಧೀಶ ಅಬ್ದುಲ್ ರೆಹಮಾನ ಎ ಮುಲ್ಲಾ ಮಾತನಾಡಿದರು. ವಿ.ಆರ್.ದಳವಾಯಿ, ಎಸ್.ಎಂ. ಕಾಯಿ ಇದ್ದರು. ರಾಜೇಶ ಜಾಧವ ಸ್ವಾಗತಿಸಿದರು. ವೈ.ವೈ.ಕೊಕ್ಕನವರ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>