<p><strong>ಮಹಾಲಿಂಗಪುರ</strong>: ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಸಮೀಪದ ನಂದಗಾಂವ ಗ್ರಾಮ ಭಾನುವಾರ ನಡುಗಡ್ಡೆಯಾಗಿದೆ. ಹೊಸ ನಂದಗಾಂವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ನೀರು ಆವರಿಸಿದೆ.</p>.<p>ಭಾನುವಾರ ಸಂಜೆ ಹಿಡಕಲ್ ಜಲಾಶಯ ಮತ್ತು ಹಿರಣ್ಯಕೇಶಿ ನದಿ ಸೇರಿ ಧುಪದಾಳ ಜಲಾಶಯ ಮಾರ್ಗವಾಗಿ 69,692 ಕ್ಯುಸೆಕ್, ಮಾರ್ಕಂಡೇಯ ಜಲಾಶಯದಿಂದ 8,130 ಕ್ಯುಸೆಕ್, ಬಳ್ಳಾರಿ ನಾಲಾದಿಂದ 2,953 ಕ್ಯುಸೆಕ್ ಸೇರಿ ಒಟ್ಟು 80,775 ಕ್ಯುಸೆಕ್ ನೀರು ಘಟಪ್ರಭಾ ನದಿಗೆ ಹರಿಬಿಡಲಾಗಿದೆ.</p>.<p>‘ನಂದಗಾಂವ ಗ್ರಾಮದಲ್ಲಿ 52 ಕುಟುಂಬಗಳ 318 ಜನರು, 240 ಜಾನುವಾರುಗಳನ್ನು ಸ್ಥಳಾಂತರಿಸಲಾಗಿದೆ. ಮನೆ ಇರದ ಕುಟುಂಬಗಳಿಗೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ನೋಡಲ್ ಅಧಿಕಾರಿ ವೆಂಕಟೇಶ ಬೆಳಗಲ್ಲ ತಿಳಿಸಿದರು.</p>.<p>ಢವಳೇಶ್ವರದಲ್ಲಿ ಲಕ್ಷ್ಮಿದೇವಿ, ದುರ್ಗಾದೇವಿ, ಕೋರೆಮ್ಮ ದೇವಿ, ಶೆಟ್ಟೆಮ್ಮ ದೇವಿ, ಹೊನ್ನೆಮ್ಮ ದೇವಿ ದೇವಸ್ಥಾನಗಳು ಜಲಾವೃತಗೊಂಡಿವೆ.</p>.<p>ಢವಳೇಶ್ವರ ಗ್ರಾಮಕ್ಕೆ ಶಾಸಕ ಸಿದ್ದು ಸವದಿ ಭಾನುವಾರ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.</p>.<p>ನೋಡಲ್ ಅಧಿಕಾರಿ ವೆಂಕಟೇಶ ಬೆಳಗಲ್ಲ, ಪಶು ವೈದ್ಯಾಧಿಕಾರಿ ವಿಶಾಲ ಪಾಟೀಲ, ಗ್ರಾಮ ಲೆಕ್ಕಾಧಿಕಾರಿ ಜಮಾದಾರ, ಮುಖಂಡರಾದ ಶ್ರೀಶೈಲ ಪಟ್ಟಣಶೆಟ್ಟಿ, ಮಹಾಲಿಂಗ ಪಟ್ಟಣಶೆಟ್ಟಿ, ಸತೀಶ ಪಟ್ಟಣಶೆಟ್ಟಿ, ಶಂಕರಗೌಡ ಪಾಟೀಲ, ಚನ್ನಪ್ಪ ಶಿವಾಪುರ, ಅಶೋಕ ಕಾಶೀರಗೋಳ, ಮಹಾದೇವ ತೇಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ</strong>: ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಸಮೀಪದ ನಂದಗಾಂವ ಗ್ರಾಮ ಭಾನುವಾರ ನಡುಗಡ್ಡೆಯಾಗಿದೆ. ಹೊಸ ನಂದಗಾಂವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ನೀರು ಆವರಿಸಿದೆ.</p>.<p>ಭಾನುವಾರ ಸಂಜೆ ಹಿಡಕಲ್ ಜಲಾಶಯ ಮತ್ತು ಹಿರಣ್ಯಕೇಶಿ ನದಿ ಸೇರಿ ಧುಪದಾಳ ಜಲಾಶಯ ಮಾರ್ಗವಾಗಿ 69,692 ಕ್ಯುಸೆಕ್, ಮಾರ್ಕಂಡೇಯ ಜಲಾಶಯದಿಂದ 8,130 ಕ್ಯುಸೆಕ್, ಬಳ್ಳಾರಿ ನಾಲಾದಿಂದ 2,953 ಕ್ಯುಸೆಕ್ ಸೇರಿ ಒಟ್ಟು 80,775 ಕ್ಯುಸೆಕ್ ನೀರು ಘಟಪ್ರಭಾ ನದಿಗೆ ಹರಿಬಿಡಲಾಗಿದೆ.</p>.<p>‘ನಂದಗಾಂವ ಗ್ರಾಮದಲ್ಲಿ 52 ಕುಟುಂಬಗಳ 318 ಜನರು, 240 ಜಾನುವಾರುಗಳನ್ನು ಸ್ಥಳಾಂತರಿಸಲಾಗಿದೆ. ಮನೆ ಇರದ ಕುಟುಂಬಗಳಿಗೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ನೋಡಲ್ ಅಧಿಕಾರಿ ವೆಂಕಟೇಶ ಬೆಳಗಲ್ಲ ತಿಳಿಸಿದರು.</p>.<p>ಢವಳೇಶ್ವರದಲ್ಲಿ ಲಕ್ಷ್ಮಿದೇವಿ, ದುರ್ಗಾದೇವಿ, ಕೋರೆಮ್ಮ ದೇವಿ, ಶೆಟ್ಟೆಮ್ಮ ದೇವಿ, ಹೊನ್ನೆಮ್ಮ ದೇವಿ ದೇವಸ್ಥಾನಗಳು ಜಲಾವೃತಗೊಂಡಿವೆ.</p>.<p>ಢವಳೇಶ್ವರ ಗ್ರಾಮಕ್ಕೆ ಶಾಸಕ ಸಿದ್ದು ಸವದಿ ಭಾನುವಾರ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.</p>.<p>ನೋಡಲ್ ಅಧಿಕಾರಿ ವೆಂಕಟೇಶ ಬೆಳಗಲ್ಲ, ಪಶು ವೈದ್ಯಾಧಿಕಾರಿ ವಿಶಾಲ ಪಾಟೀಲ, ಗ್ರಾಮ ಲೆಕ್ಕಾಧಿಕಾರಿ ಜಮಾದಾರ, ಮುಖಂಡರಾದ ಶ್ರೀಶೈಲ ಪಟ್ಟಣಶೆಟ್ಟಿ, ಮಹಾಲಿಂಗ ಪಟ್ಟಣಶೆಟ್ಟಿ, ಸತೀಶ ಪಟ್ಟಣಶೆಟ್ಟಿ, ಶಂಕರಗೌಡ ಪಾಟೀಲ, ಚನ್ನಪ್ಪ ಶಿವಾಪುರ, ಅಶೋಕ ಕಾಶೀರಗೋಳ, ಮಹಾದೇವ ತೇಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>