<p><strong>ಗುಳೇದಗುಡ್ಡ:</strong> ‘ತಾಲ್ಲೂಕಿನಲ್ಲಿ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಸುರಕ್ಷತೆಗೆ ಮುಂಜಾಗ್ರತಾ ಕ್ರಮ ವಹಿಸುವುದು ಅಗತ್ಯ. ತಾಲ್ಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಮುಂಗಾರು ಹಂಗಾಮಿನ ವಿಪತ್ತು ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ತಾಲ್ಲೂಕು ವಿಪತ್ತು ನಿರ್ವಹಣೆ ನೋಡಲ್ ಅಧಿಕಾರಿ ಎಲ್.ಐ. ರೋಡಗಿ ಸೂಚಿಸಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದ ತಾಲ್ಲೂಕಿನ ವಿಪತ್ತು ನಿರ್ವಹಣೆ ಕುರಿತ ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಕುರಿತು ಅವರು ಮಾತನಾಡಿದರು.</p>.<p>‘ಜಿಲ್ಲಾಧಿಕಾರಿ ನೀಡಿದ ಸೂಚನೆಯ ಅನ್ವಯ ಇಲಾಖಾವಾರು ಅಧಿಕಾರಿ ಹಾಗೂ ಸಿಬ್ಬಂದಿ ನಿರ್ವಹಿಸುವ ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ನೈರ್ಮಲ್ಯ, ಕುಡಿಯುವ ನೀರಿನ ಸಂಗ್ರಹದ ಮೂಲದಿಂದ ಹಿಡಿದು ಪೂರೈಕೆ ಆಗುವ ಸ್ಥಳದವರೆಗೂ ನೀರಿನ ಶುದ್ಧತೆ ಪರೀಕ್ಷೆ ಮಾಡಬೇಕು. ವಿದ್ಯುತ್ ಕಂಬಗಳು ಬೀಳುವ ಹಂತದಲ್ಲಿದ್ದರೆ ಅವುಗಳನ್ನು ದುರಸ್ತಿ ಮಾಡಿಸಬೇಕು. ಅಗ್ನಿಶಾಮಕ ದಳದವರು ಪ್ರವಾಹ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಕ್ರಮ ಹಾಗೂ ಬಳಸುವ ಉಪಕರಣಗಳ ಸುಸ್ಥಿತಿ ಬಗ್ಗೆ ಮುಂಜಾಗ್ರತೆ ವಹಿಸಬೇಕು’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಮಂಗಳಾ ಎಂ. ಮಾತನಾಡಿ, ‘2019 ರಲ್ಲಿ ಆದ ಪ್ರವಾಹದ ಬಗ್ಗೆ ಎಲ್ಲರಿಗೂ ತಿಳಿದಿದೆ. ತಾಲ್ಲೂಕಿನ 12 ಗ್ರಾಮಗಳಲ್ಲಿ ಆಗಬಹುದಾದ ಪ್ರವಾಹ ಭೀತಿಯ ಬಗ್ಗೆ ಎಚ್ಚರಿಕೆ ಇರಲಿ’ ಎಂದು ಹೇಳಿದರು.</p>.<p>ಹೆಸ್ಕಾಂ ಎಇಇ ಪ್ರಕಾಶ ಪೂಚಗುಂಡಿ, ಪುರಸಭೆ ಮುಖ್ಯಾಧಿಕಾರಿ ಎ.ಎಚ್. ಮುಜಾವರ, ತಾಲ್ಲೂಕು ಪಂಚಾಯಿತಿಯ ಎಸ್.ಎಸ್. ಅಂಗಡಿ, ಆರೋಗ್ಯ ಇಲಾಖೆಯ ಡಾ. ಅನೀಲ ಉಕ್ಕಲಿ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ಎಸ್. ಬಂಡಿ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಎ.ಕೆ. ಮಕಾಂದಾರ, ಅಗ್ನಿಶಾಮಕ ಇಲಾಖೆಯ ಬಿ.ಪಿ. ಮರಡಿ, ಪಿಆರ್ಇಡಿ ಇಲಾಖೆಯ ಎ.ಎಸ್. ತೋಪಲಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಳೇದಗುಡ್ಡ:</strong> ‘ತಾಲ್ಲೂಕಿನಲ್ಲಿ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಸುರಕ್ಷತೆಗೆ ಮುಂಜಾಗ್ರತಾ ಕ್ರಮ ವಹಿಸುವುದು ಅಗತ್ಯ. ತಾಲ್ಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಮುಂಗಾರು ಹಂಗಾಮಿನ ವಿಪತ್ತು ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ತಾಲ್ಲೂಕು ವಿಪತ್ತು ನಿರ್ವಹಣೆ ನೋಡಲ್ ಅಧಿಕಾರಿ ಎಲ್.ಐ. ರೋಡಗಿ ಸೂಚಿಸಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದ ತಾಲ್ಲೂಕಿನ ವಿಪತ್ತು ನಿರ್ವಹಣೆ ಕುರಿತ ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಕುರಿತು ಅವರು ಮಾತನಾಡಿದರು.</p>.<p>‘ಜಿಲ್ಲಾಧಿಕಾರಿ ನೀಡಿದ ಸೂಚನೆಯ ಅನ್ವಯ ಇಲಾಖಾವಾರು ಅಧಿಕಾರಿ ಹಾಗೂ ಸಿಬ್ಬಂದಿ ನಿರ್ವಹಿಸುವ ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ನೈರ್ಮಲ್ಯ, ಕುಡಿಯುವ ನೀರಿನ ಸಂಗ್ರಹದ ಮೂಲದಿಂದ ಹಿಡಿದು ಪೂರೈಕೆ ಆಗುವ ಸ್ಥಳದವರೆಗೂ ನೀರಿನ ಶುದ್ಧತೆ ಪರೀಕ್ಷೆ ಮಾಡಬೇಕು. ವಿದ್ಯುತ್ ಕಂಬಗಳು ಬೀಳುವ ಹಂತದಲ್ಲಿದ್ದರೆ ಅವುಗಳನ್ನು ದುರಸ್ತಿ ಮಾಡಿಸಬೇಕು. ಅಗ್ನಿಶಾಮಕ ದಳದವರು ಪ್ರವಾಹ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಕ್ರಮ ಹಾಗೂ ಬಳಸುವ ಉಪಕರಣಗಳ ಸುಸ್ಥಿತಿ ಬಗ್ಗೆ ಮುಂಜಾಗ್ರತೆ ವಹಿಸಬೇಕು’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಮಂಗಳಾ ಎಂ. ಮಾತನಾಡಿ, ‘2019 ರಲ್ಲಿ ಆದ ಪ್ರವಾಹದ ಬಗ್ಗೆ ಎಲ್ಲರಿಗೂ ತಿಳಿದಿದೆ. ತಾಲ್ಲೂಕಿನ 12 ಗ್ರಾಮಗಳಲ್ಲಿ ಆಗಬಹುದಾದ ಪ್ರವಾಹ ಭೀತಿಯ ಬಗ್ಗೆ ಎಚ್ಚರಿಕೆ ಇರಲಿ’ ಎಂದು ಹೇಳಿದರು.</p>.<p>ಹೆಸ್ಕಾಂ ಎಇಇ ಪ್ರಕಾಶ ಪೂಚಗುಂಡಿ, ಪುರಸಭೆ ಮುಖ್ಯಾಧಿಕಾರಿ ಎ.ಎಚ್. ಮುಜಾವರ, ತಾಲ್ಲೂಕು ಪಂಚಾಯಿತಿಯ ಎಸ್.ಎಸ್. ಅಂಗಡಿ, ಆರೋಗ್ಯ ಇಲಾಖೆಯ ಡಾ. ಅನೀಲ ಉಕ್ಕಲಿ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ಎಸ್. ಬಂಡಿ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಎ.ಕೆ. ಮಕಾಂದಾರ, ಅಗ್ನಿಶಾಮಕ ಇಲಾಖೆಯ ಬಿ.ಪಿ. ಮರಡಿ, ಪಿಆರ್ಇಡಿ ಇಲಾಖೆಯ ಎ.ಎಸ್. ತೋಪಲಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>