<p>ಬಾಗಲಕೋಟೆ: ಕೇಂದ್ರ ಸರ್ಕಾರವು ಸ್ಥಳೀಯ ಸಂಸ್ಥೆಗಳಿಗೆ ನೀಡಬೇಕಾದ ಅನುದಾನದಲ್ಲಿ ಯಾವುದೇ ಕಡಿತ ಮಾಡದೆ ಅನುದಾನ ಬಿಡುಗಡೆ ಮಾಡಬೇಕು ಎಂದು ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ಮಾಡಿದರು.</p>.<p>ಕೇಂದ್ರವು ಹಲವು ವರ್ಷಗಳಿಂದ ಅನುದಾನ ಕಡಿತ ಮಾಡಿಕೊಂಡು ಬಂದಿದ್ದು, 2023–24ನೇ ಸಾಲಿನಲ್ಲಿ ₹1151 ಕೋಟಿ ಬಿಡುಗಡೆ ಮಾಡಿದ್ದು, ₹14,630 ಕೋಟಿ ಬಾಕಿ ಉಳಿಸಿಕೊಂಡಿದೆ. ಇದರಿಂದ ಸ್ಥಳೀಯವಾಗಿ ಜನರಿಗೆ ಯಾವುದೇ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.</p>.<p>ಕೇಂದ್ರ ರಾಜ್ಯಗಳಿಂದ ಸಂಗ್ರಹಿಸುವ ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆಯಲ್ಲಿ ರಾಜ್ಯಕ್ಕೆ 15ನೇ ಹಣಕಾಸು ಆಯೋಗ ನಿಗದಿ ಪಡಿಸಿದ ಪಾಲಿನಲ್ಲಿ ಶೇ4.74 ರಷ್ಟು ಪಾಲು ನೀಡಬೇಕಿತ್ತು. ಅದನ್ನು ಶೇ3.34ಕ್ಕೆ ಇಳಿಸಲಾಗಿದೆ. ಇದಕ್ಕೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಇದರಿಂದ ರಾಜ್ಯದ ಜನರಿಗೆ ದ್ರೋಹವಾಗಿದೆ ಎಂದು ಆರೋಪಿಸಿದರು.</p>.<p>ಕೇಂದ್ರವು 2013–14ರಿಂದ 23–24ರವರೆಗೆ ಉದ್ಯಮಿಗಳ ಕಾರ್ಪೋರೇಟ್ ತೆರಿಗೆಯನ್ನು ಶೇ25 ರಿಂದ ಶೇ15ಕ್ಕೆ ಕಡಿಮೆ ಮಾಡಿದೆ. ವಿನಾಯಿತಿಗಳನ್ನು ನೀಡುವ ಮೂಲಕ ಸರ್ಕಾರ ಖಜಾನೆಗೆ ಬರಬೇಕಾದ ₹9.38 ಲಕ್ಷ ಕೋಟಿ ಉದ್ಯಮಿಗಳ ಪಾಲಾಗಿದೆ. ಉದ್ಯಮಿಗಳಿಗೆ ₹14.56 ಲಕ್ಷ ಕೋಟಿ ಸಾಲವನ್ನು ರೈಟ್ ಆಫ್ ಮಾಡಲಾಗಿದೆ. ಬಡ ಜನರ ವಿರೋಧಿ ನೀತಿಯಾಗಿದೆ ಎಂದು ಟೀಕಿಸಿದರು.</p>.<p>ನೌಕರರಿಗೆ ಕನಿಷ್ಠ ₹31 ಸಾವಿರ ಕನಿಷ್ಠ ವೇತನ ನೀಡಬೇಕು. ₹6 ಸಾವಿರ ಪಿಂಚಣಿ, ಸೇವಾ ಹಿರಿತನದ ವೇತನ ಹೆಚ್ಚಳ, ಆರೋಗ್ಯ ವಿಮೆ, ಐಪಿಡಿ ಸಾಲಪ್ಪ ವರದಿಯಂತೆ ಸ್ವಚ್ಛತೆಗಾರರ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು. ರೈತ ವಿರೋಧಿ ಕೃಷಿ ಕಾಯ್ದೆ ವಾಪಸ್ ಪಡೆಯಬೇಕು. ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ನೀಡಬೇಕು. ರೈಲ್ವೆ, ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಕೇಂದ್ರ ಸರ್ಕಾರವು ಸ್ಥಳೀಯ ಸಂಸ್ಥೆಗಳಿಗೆ ನೀಡಬೇಕಾದ ಅನುದಾನದಲ್ಲಿ ಯಾವುದೇ ಕಡಿತ ಮಾಡದೆ ಅನುದಾನ ಬಿಡುಗಡೆ ಮಾಡಬೇಕು ಎಂದು ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ಮಾಡಿದರು.</p>.<p>ಕೇಂದ್ರವು ಹಲವು ವರ್ಷಗಳಿಂದ ಅನುದಾನ ಕಡಿತ ಮಾಡಿಕೊಂಡು ಬಂದಿದ್ದು, 2023–24ನೇ ಸಾಲಿನಲ್ಲಿ ₹1151 ಕೋಟಿ ಬಿಡುಗಡೆ ಮಾಡಿದ್ದು, ₹14,630 ಕೋಟಿ ಬಾಕಿ ಉಳಿಸಿಕೊಂಡಿದೆ. ಇದರಿಂದ ಸ್ಥಳೀಯವಾಗಿ ಜನರಿಗೆ ಯಾವುದೇ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.</p>.<p>ಕೇಂದ್ರ ರಾಜ್ಯಗಳಿಂದ ಸಂಗ್ರಹಿಸುವ ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆಯಲ್ಲಿ ರಾಜ್ಯಕ್ಕೆ 15ನೇ ಹಣಕಾಸು ಆಯೋಗ ನಿಗದಿ ಪಡಿಸಿದ ಪಾಲಿನಲ್ಲಿ ಶೇ4.74 ರಷ್ಟು ಪಾಲು ನೀಡಬೇಕಿತ್ತು. ಅದನ್ನು ಶೇ3.34ಕ್ಕೆ ಇಳಿಸಲಾಗಿದೆ. ಇದಕ್ಕೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಇದರಿಂದ ರಾಜ್ಯದ ಜನರಿಗೆ ದ್ರೋಹವಾಗಿದೆ ಎಂದು ಆರೋಪಿಸಿದರು.</p>.<p>ಕೇಂದ್ರವು 2013–14ರಿಂದ 23–24ರವರೆಗೆ ಉದ್ಯಮಿಗಳ ಕಾರ್ಪೋರೇಟ್ ತೆರಿಗೆಯನ್ನು ಶೇ25 ರಿಂದ ಶೇ15ಕ್ಕೆ ಕಡಿಮೆ ಮಾಡಿದೆ. ವಿನಾಯಿತಿಗಳನ್ನು ನೀಡುವ ಮೂಲಕ ಸರ್ಕಾರ ಖಜಾನೆಗೆ ಬರಬೇಕಾದ ₹9.38 ಲಕ್ಷ ಕೋಟಿ ಉದ್ಯಮಿಗಳ ಪಾಲಾಗಿದೆ. ಉದ್ಯಮಿಗಳಿಗೆ ₹14.56 ಲಕ್ಷ ಕೋಟಿ ಸಾಲವನ್ನು ರೈಟ್ ಆಫ್ ಮಾಡಲಾಗಿದೆ. ಬಡ ಜನರ ವಿರೋಧಿ ನೀತಿಯಾಗಿದೆ ಎಂದು ಟೀಕಿಸಿದರು.</p>.<p>ನೌಕರರಿಗೆ ಕನಿಷ್ಠ ₹31 ಸಾವಿರ ಕನಿಷ್ಠ ವೇತನ ನೀಡಬೇಕು. ₹6 ಸಾವಿರ ಪಿಂಚಣಿ, ಸೇವಾ ಹಿರಿತನದ ವೇತನ ಹೆಚ್ಚಳ, ಆರೋಗ್ಯ ವಿಮೆ, ಐಪಿಡಿ ಸಾಲಪ್ಪ ವರದಿಯಂತೆ ಸ್ವಚ್ಛತೆಗಾರರ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು. ರೈತ ವಿರೋಧಿ ಕೃಷಿ ಕಾಯ್ದೆ ವಾಪಸ್ ಪಡೆಯಬೇಕು. ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ನೀಡಬೇಕು. ರೈಲ್ವೆ, ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>