<p><strong>ಬಾಗಲಕೋಟೆ:</strong> ಕಾಂತರಾಜು ಆಯೋಗ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ನ.21ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಮಾಡಲಾಗುವುದು ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಸಿ. ಕಾಂಬಳೆ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತರಾಜು ಆಯೋಗದ ವರದಿ ಅಂಗೀಕಾರಕ್ಕೆ ಲಿಂಗಾಯತ, ಒಕ್ಕಲಿಗರು ಪರೋಕ್ಷವಾಗಿ ತಡೆಯೊಡ್ಡುತ್ತಿದ್ದಾರೆ. ಸಮ್ಮಿಶ್ರ ಹಾಗೂ ಬಿಜೆಪಿ ಸರ್ಕಾರಗಳೆರಡೂ ವರದಿ ಜಾರಿಗೆ ಮುಂದಾಗಲಿಲ್ಲ ಎಂದು ದೂರಿದರು.</p>.<p>ಕಾಂಗ್ರೆಸ್ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಎರಡೂ ವರದಿಗಳನ್ನು ಜಾರಿ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಸರ್ಕಾರ ರಚನೆಯಾಗಿ ಆರು ತಿಂಗಳಾಗುತ್ತಾ ಬಂದರೂ ಈ ಬಗ್ಗೆ ಏನೂ ಮಾಡುತ್ತಿಲ್ಲ. ಕೂಡಲೇ ಸರ್ಕಾರ ಜಾರಿಗೆ ಕ್ರಮತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಕೈಗಾರಿಕೆ, ಶಿಕ್ಷಣ ಸಂಸ್ಥೆ ಸೇರಿದಂತೆ ಬಹುತೇಕ ಸಂಸ್ಥೆಗಳು ಶೇ90ರಷ್ಟು ಮೇಲ್ಜಾತಿಯವರ ಹಿಡಿತದಲ್ಲಿವೆ. ಆ ಹಿಡಿತ ತಪ್ಪಬಹುದು ಎಂಬ ಕಾರಣಕ್ಕೆ ವಿರೋಧಿಸಿಕೊಂಡು ಬರಲಾಗುತ್ತಿದೆ. ಹಕ್ಕುಗಳನ್ನು ಪಡೆಯಲಿ ಅನ್ಯಾಯಕ್ಕೆ ಒಳಗಾದವರೆಲ್ಲ ಒಂದಾಗಿ ಹೋರಾಟ ಮಾಡಬೇಕಿದೆ ಎಂದರು.</p>.<p>ಪರಿಶಿಷ್ಟ ಜಾತಿ 101 ಜಾತಿಗಳ ಪೈಕಿ ಮಾದಿಗ ಮತ್ತು ಮಾದಿಗ ಸಂಬಂಧಿತ 49 ಜಾರಿಗಳ ಜನಸಂಖ್ಯೆ ಹೆಚ್ಚಾಗಿದೆ. ಆದರೆ, ಅವರಿಗೆ ಎಲ್ಲ ರಂಗಗಳಲ್ಲಿ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ. ಆದ್ದರಿಂದ ಒಳ ಮೀಸಲಾತಿ ಕಲ್ಪಿಸುವ ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಯಲ್ಲಪ್ಪ ಸನಕ್ಯಾನವರ, ಜಿಲ್ಲಾ ಸಂಯೋಜಕಿ ಗುರುಶಾಂತಪ್ಪ ಮದಿನಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಕಾಂತರಾಜು ಆಯೋಗ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ನ.21ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಮಾಡಲಾಗುವುದು ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಸಿ. ಕಾಂಬಳೆ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತರಾಜು ಆಯೋಗದ ವರದಿ ಅಂಗೀಕಾರಕ್ಕೆ ಲಿಂಗಾಯತ, ಒಕ್ಕಲಿಗರು ಪರೋಕ್ಷವಾಗಿ ತಡೆಯೊಡ್ಡುತ್ತಿದ್ದಾರೆ. ಸಮ್ಮಿಶ್ರ ಹಾಗೂ ಬಿಜೆಪಿ ಸರ್ಕಾರಗಳೆರಡೂ ವರದಿ ಜಾರಿಗೆ ಮುಂದಾಗಲಿಲ್ಲ ಎಂದು ದೂರಿದರು.</p>.<p>ಕಾಂಗ್ರೆಸ್ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಎರಡೂ ವರದಿಗಳನ್ನು ಜಾರಿ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಸರ್ಕಾರ ರಚನೆಯಾಗಿ ಆರು ತಿಂಗಳಾಗುತ್ತಾ ಬಂದರೂ ಈ ಬಗ್ಗೆ ಏನೂ ಮಾಡುತ್ತಿಲ್ಲ. ಕೂಡಲೇ ಸರ್ಕಾರ ಜಾರಿಗೆ ಕ್ರಮತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಕೈಗಾರಿಕೆ, ಶಿಕ್ಷಣ ಸಂಸ್ಥೆ ಸೇರಿದಂತೆ ಬಹುತೇಕ ಸಂಸ್ಥೆಗಳು ಶೇ90ರಷ್ಟು ಮೇಲ್ಜಾತಿಯವರ ಹಿಡಿತದಲ್ಲಿವೆ. ಆ ಹಿಡಿತ ತಪ್ಪಬಹುದು ಎಂಬ ಕಾರಣಕ್ಕೆ ವಿರೋಧಿಸಿಕೊಂಡು ಬರಲಾಗುತ್ತಿದೆ. ಹಕ್ಕುಗಳನ್ನು ಪಡೆಯಲಿ ಅನ್ಯಾಯಕ್ಕೆ ಒಳಗಾದವರೆಲ್ಲ ಒಂದಾಗಿ ಹೋರಾಟ ಮಾಡಬೇಕಿದೆ ಎಂದರು.</p>.<p>ಪರಿಶಿಷ್ಟ ಜಾತಿ 101 ಜಾತಿಗಳ ಪೈಕಿ ಮಾದಿಗ ಮತ್ತು ಮಾದಿಗ ಸಂಬಂಧಿತ 49 ಜಾರಿಗಳ ಜನಸಂಖ್ಯೆ ಹೆಚ್ಚಾಗಿದೆ. ಆದರೆ, ಅವರಿಗೆ ಎಲ್ಲ ರಂಗಗಳಲ್ಲಿ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ. ಆದ್ದರಿಂದ ಒಳ ಮೀಸಲಾತಿ ಕಲ್ಪಿಸುವ ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಯಲ್ಲಪ್ಪ ಸನಕ್ಯಾನವರ, ಜಿಲ್ಲಾ ಸಂಯೋಜಕಿ ಗುರುಶಾಂತಪ್ಪ ಮದಿನಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>