<p>ಜಮಖಂಡಿ: ‘ಬಿಜೆಪಿಯವರು ಮುಡಾ ಹಗರಣ ಮುಂದಿಟ್ಟುಕೊಂಡು ಸರ್ಕಾರ ಉರುಳಿಸಲು ಪ್ರಯತ್ನಿಸುವುದು ವ್ಯರ್ಥ. ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ’ ಎಂದು ಕಾಂಗ್ರೆಸ್ ಮುಖಂಡ ಬಿ.ಎಸ್. ಸಿಂಧೂರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ‘ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ನಾಲ್ಕು ದಶಕಗಳ ರಾಜಕೀಯದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಬದುಕಿದ್ದಾರೆ. ಇದನ್ನು ಸಹಿಸದ ಬಿಜೆಪಿಯವರು ದುರುದ್ದೇಶದಿಂದ ಆರೋಪ ಮಾಡುತ್ತಿರುವುದು ನಾಚಿಕೆಗೇಡು’ ಎಂದರು.</p>.<p>‘ಬಿ.ಎಸ್. ಯಡಿಯೂರಪ್ಪ ಹಣ ಮಾಡಿಕೊಂಡಂತೆ ಸಿದ್ದರಾಮಯ್ಯ ಅವರಿಗೆ ಹಣ ಗಳಿಸಬೇಕೆಂಬ ಆಲೋಚನೆ ಇದ್ದಿದ್ದರೆ ಸಾಕಷ್ಟು ಅವಕಾಶಗಳಿದ್ದವು. ಆದರೆ ಅಂತಹ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಕೊಡದೆ ಸಜ್ಜನ ರಾಜಕಾರಣಿಯಾಗಿದ್ದಾರೆ’ ಎಂದರು.</p>.<p>‘ಬಿ.ವೈ. ವಿಜಯೇಂದ್ರ ಬಿಜೆಪಿಯನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಹೊರಟಿದ್ದಾರೆ. ಇದಕ್ಕೆ ಪರ್ಯಾಯವಾಗಿ ಬೇರೆ ತಂಡ ತಯಾರಾಗುತ್ತಿದೆ ಎಂಬುದನ್ನು ಮರೆಯಬಾರದು. ಈಗ ಬಿಜೆಪಿ ಭ್ರಷ್ಟರ ಕೂಟವಾಗಿದೆ’ ಎಂದರು.</p>.<p>‘ಬಿಜೆಪಿ ಉತ್ತಮ ಮುಖಂಡರಿಗೆ ಸ್ಥಾನಮಾನ ನೀಡಲು ಹಿಂದೇಟು ಹಾಕುತ್ತದೆ. ಯಾರು ಹಣ ನೀಡುತ್ತಾರೋ ಅವರಿಗೆ ಸ್ಥಾನಮಾನ ಇದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮಖಂಡಿ: ‘ಬಿಜೆಪಿಯವರು ಮುಡಾ ಹಗರಣ ಮುಂದಿಟ್ಟುಕೊಂಡು ಸರ್ಕಾರ ಉರುಳಿಸಲು ಪ್ರಯತ್ನಿಸುವುದು ವ್ಯರ್ಥ. ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ’ ಎಂದು ಕಾಂಗ್ರೆಸ್ ಮುಖಂಡ ಬಿ.ಎಸ್. ಸಿಂಧೂರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ‘ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ನಾಲ್ಕು ದಶಕಗಳ ರಾಜಕೀಯದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಬದುಕಿದ್ದಾರೆ. ಇದನ್ನು ಸಹಿಸದ ಬಿಜೆಪಿಯವರು ದುರುದ್ದೇಶದಿಂದ ಆರೋಪ ಮಾಡುತ್ತಿರುವುದು ನಾಚಿಕೆಗೇಡು’ ಎಂದರು.</p>.<p>‘ಬಿ.ಎಸ್. ಯಡಿಯೂರಪ್ಪ ಹಣ ಮಾಡಿಕೊಂಡಂತೆ ಸಿದ್ದರಾಮಯ್ಯ ಅವರಿಗೆ ಹಣ ಗಳಿಸಬೇಕೆಂಬ ಆಲೋಚನೆ ಇದ್ದಿದ್ದರೆ ಸಾಕಷ್ಟು ಅವಕಾಶಗಳಿದ್ದವು. ಆದರೆ ಅಂತಹ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಕೊಡದೆ ಸಜ್ಜನ ರಾಜಕಾರಣಿಯಾಗಿದ್ದಾರೆ’ ಎಂದರು.</p>.<p>‘ಬಿ.ವೈ. ವಿಜಯೇಂದ್ರ ಬಿಜೆಪಿಯನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಹೊರಟಿದ್ದಾರೆ. ಇದಕ್ಕೆ ಪರ್ಯಾಯವಾಗಿ ಬೇರೆ ತಂಡ ತಯಾರಾಗುತ್ತಿದೆ ಎಂಬುದನ್ನು ಮರೆಯಬಾರದು. ಈಗ ಬಿಜೆಪಿ ಭ್ರಷ್ಟರ ಕೂಟವಾಗಿದೆ’ ಎಂದರು.</p>.<p>‘ಬಿಜೆಪಿ ಉತ್ತಮ ಮುಖಂಡರಿಗೆ ಸ್ಥಾನಮಾನ ನೀಡಲು ಹಿಂದೇಟು ಹಾಕುತ್ತದೆ. ಯಾರು ಹಣ ನೀಡುತ್ತಾರೋ ಅವರಿಗೆ ಸ್ಥಾನಮಾನ ಇದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>